<p>ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಜಾರಿಗೊಳಿಸಿರುವ ನೀತಿ ಸಂಹಿತೆಯನ್ನು ತಪ್ಪದೇ ಪಾಲಿಸುವಂತೆ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳಿಗೆ ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೂಚನೆ ನೀಡಿದರು.</p>.<p>ವಿಜಯಪುರ ನಗರ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದರು.</p>.<p>ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮೇ 10ರಂದು ಮತದಾನ, ಮೇ.13ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು</p>.<p>ಪ್ರಸ್ತುತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಎಲ್ಲರೂ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಹೇಳಿದರು.</p>.<p>ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ 269 ಮತಗಟ್ಟೆಳಿದ್ದು, ಈ ಪೈಕಿ 118 ಸೂಕ್ಷ್ಮ ಮತಗಟ್ಟೆಗಳಾಗಿವೆ. 1,37,599 ಪುರುಷ, 1,40,056 ಮಹಿಳಾ ಮತದಾರರು ಹಾಗೂ 93 ಇತರೆ ಸೇರಿದಂತೆ ಒಟ್ಟು 2,77,748 ಮತದಾರರಿದ್ದಾರೆ ಎಂದು ಹೇಳಿದರು.</p>.<p>ಸುಗಮ ಚುನಾವಣೆಗಾಗಿ ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ 19 ಸೆಕ್ಟರ್ ಅಧಿಕಾರಿಗಳು, 9 ಫ್ಲೈಯಿಂಗ್ ಸ್ಕ್ವಾಡ್, 9 ಎಸ್ಎಸ್ಟಿ ತಂಡ, 3 ವಿಡಿಯೋ ಸರ್ವೇಲೆನ್ಸ್ ತಂಡ, 1 ವಿವಿಟಿ ತಂಡ, 1 ಲೆಕ್ಕಪತ್ರಗಳ ತಂಡಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ, ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.</p>.<p>ಸಹಾಯಕ ಚುನಾವಣಾಧಿಕಾರಿಯಾದ ತಹಶೀಲ್ದಾರ್ ಸುರೇಶ ಮುಂಜೆ, ರೇಣುಕಮ್ಮ, ಬಿಎಸ್ಪಿಯ ನಿತೇಶ ತೊರವಿ, ಬಿಜೆಪಿಯ ಸಿದ್ದು ಬೆಲ್ಲದ, ಕಾಂಗ್ರೆಸ್ನ ಚನ್ನಬಸಪ್ಪ ನಾಮದಾರಿ, ಎಚ್.ಎಸ್.ದಳವಾಯಿ, ಮಚೀಂದ್ರ, ಜೆಡಿಎಸ್ನ ಎಂ.ಕೆ.ಬಾಗಾಯತ್, ಎಸ್ಡಿಪಿಐನ ನಿಸಾರ ಅಹ್ಮದ ಮನಿಯಾರ ಸಭೆಯಲ್ಲಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಜಾರಿಗೊಳಿಸಿರುವ ನೀತಿ ಸಂಹಿತೆಯನ್ನು ತಪ್ಪದೇ ಪಾಲಿಸುವಂತೆ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳಿಗೆ ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೂಚನೆ ನೀಡಿದರು.</p>.<p>ವಿಜಯಪುರ ನಗರ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದರು.</p>.<p>ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮೇ 10ರಂದು ಮತದಾನ, ಮೇ.13ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು</p>.<p>ಪ್ರಸ್ತುತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಎಲ್ಲರೂ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಹೇಳಿದರು.</p>.<p>ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ 269 ಮತಗಟ್ಟೆಳಿದ್ದು, ಈ ಪೈಕಿ 118 ಸೂಕ್ಷ್ಮ ಮತಗಟ್ಟೆಗಳಾಗಿವೆ. 1,37,599 ಪುರುಷ, 1,40,056 ಮಹಿಳಾ ಮತದಾರರು ಹಾಗೂ 93 ಇತರೆ ಸೇರಿದಂತೆ ಒಟ್ಟು 2,77,748 ಮತದಾರರಿದ್ದಾರೆ ಎಂದು ಹೇಳಿದರು.</p>.<p>ಸುಗಮ ಚುನಾವಣೆಗಾಗಿ ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ 19 ಸೆಕ್ಟರ್ ಅಧಿಕಾರಿಗಳು, 9 ಫ್ಲೈಯಿಂಗ್ ಸ್ಕ್ವಾಡ್, 9 ಎಸ್ಎಸ್ಟಿ ತಂಡ, 3 ವಿಡಿಯೋ ಸರ್ವೇಲೆನ್ಸ್ ತಂಡ, 1 ವಿವಿಟಿ ತಂಡ, 1 ಲೆಕ್ಕಪತ್ರಗಳ ತಂಡಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ, ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.</p>.<p>ಸಹಾಯಕ ಚುನಾವಣಾಧಿಕಾರಿಯಾದ ತಹಶೀಲ್ದಾರ್ ಸುರೇಶ ಮುಂಜೆ, ರೇಣುಕಮ್ಮ, ಬಿಎಸ್ಪಿಯ ನಿತೇಶ ತೊರವಿ, ಬಿಜೆಪಿಯ ಸಿದ್ದು ಬೆಲ್ಲದ, ಕಾಂಗ್ರೆಸ್ನ ಚನ್ನಬಸಪ್ಪ ನಾಮದಾರಿ, ಎಚ್.ಎಸ್.ದಳವಾಯಿ, ಮಚೀಂದ್ರ, ಜೆಡಿಎಸ್ನ ಎಂ.ಕೆ.ಬಾಗಾಯತ್, ಎಸ್ಡಿಪಿಐನ ನಿಸಾರ ಅಹ್ಮದ ಮನಿಯಾರ ಸಭೆಯಲ್ಲಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>