<p><strong>ವಿಜಯಪುರ</strong>: ನರ್ಸಿಂಗ್ ಕ್ಷೇತ್ರದಲ್ಲಿ ಸಂಶೋಧನೆಗಳ ಪ್ರಮಾಣ ಹೆಚ್ಚುತ್ತಿರುವುದರಿಂದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಅನುಕೂಲವಾಗುತ್ತಿದೆ ಎಂದು ಬಿ.ಎಲ್.ಡಿ.ಇ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಹೇಳಿದರು.</p>.<p>ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ. ಪಾಟೀಲ್ ನರ್ಸಿಂಗ್ ಮಹಾವಿದ್ಯಾಲಯದಲ್ಲಿ, ಬಿ.ಎಲ್.ಡಿ.ಇ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಆಯುರ್ವೇದದಲ್ಲಿ ವಿವರಿಸಿದಂತೆ ರೋಗಿಗೆ ವೈದ್ಯರ ಅವಶ್ಯಕತೆ ಎಷ್ಟು ಮುಖ್ಯವೋ, ಅಷ್ಟೇ ಮಹತ್ವ ನರ್ಸಿಂಗ್ ವೃತ್ತಿಪರರಿಗೂ ಇದೆ. ನರ್ಸಿಂಗ್ ವೃತ್ತಿ ಸಮಾಜದ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು.</p>.<p>ಡಾ. ಎಂ.ಎಂ. ಪಾಟೀಲ ಮಾತನಾಡಿ, ಇತ್ತೀಚಿನ ತಂತ್ರಜ್ಞಾನಗಳ ಬೆಳವಣಿಗೆ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿವೆ. ಸಂಶೋಧನೆಯ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಜವಾಬ್ದಾರಿಗಳು ಹೆಚ್ಚಾಗಿವೆ. ಈ ಬದಲಾವಣೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಸಾಮರ್ಥ್ಯ ನಮ್ಮಲ್ಲಿರಬೇಕು ಎಂದು ಹೇಳಿದರು.</p>.<p>ತುಮಕೂರಿನ ಡಾ. ಪರಮೇಶ, ಬಾಗಲಕೋಟೆಯ ಡಾ. ಶ್ರೀಹರ್ಷ ಹಾಗೂ ವೈದ್ಯಕೀಯ ಕ್ಷೇತ್ರದ ಡಾ. ನಿರ್ಮಲಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸಂಶೋಧನೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮನ್ ಚೋಪಡೆ, ಪ್ರೊ. ಸುಚಿತ್ರಾ ರಾಟಿ, ಬಶೀರ್ ಅಹ್ಮದ್, ಕವಿತಾ ಕೆ., ಅಮರನಾಥ್, ಸೌಜನ್ಯ ಸಂಕಪ್ಪ, ಅಪ್ಪನಗೌಡ ಪಾಟೀಲ, ಡಾ. ಅಮಿತಕುಮಾರ ಬಿರಾದಾರ, ಭಾಗ್ಯಶ್ರೀ ಬಾಗೇವಾಡಿ, ಡಾ. ಸತೀಶ ನಡಗಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನರ್ಸಿಂಗ್ ಕ್ಷೇತ್ರದಲ್ಲಿ ಸಂಶೋಧನೆಗಳ ಪ್ರಮಾಣ ಹೆಚ್ಚುತ್ತಿರುವುದರಿಂದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಅನುಕೂಲವಾಗುತ್ತಿದೆ ಎಂದು ಬಿ.ಎಲ್.ಡಿ.ಇ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಹೇಳಿದರು.</p>.<p>ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ. ಪಾಟೀಲ್ ನರ್ಸಿಂಗ್ ಮಹಾವಿದ್ಯಾಲಯದಲ್ಲಿ, ಬಿ.ಎಲ್.ಡಿ.ಇ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಆಯುರ್ವೇದದಲ್ಲಿ ವಿವರಿಸಿದಂತೆ ರೋಗಿಗೆ ವೈದ್ಯರ ಅವಶ್ಯಕತೆ ಎಷ್ಟು ಮುಖ್ಯವೋ, ಅಷ್ಟೇ ಮಹತ್ವ ನರ್ಸಿಂಗ್ ವೃತ್ತಿಪರರಿಗೂ ಇದೆ. ನರ್ಸಿಂಗ್ ವೃತ್ತಿ ಸಮಾಜದ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು.</p>.<p>ಡಾ. ಎಂ.ಎಂ. ಪಾಟೀಲ ಮಾತನಾಡಿ, ಇತ್ತೀಚಿನ ತಂತ್ರಜ್ಞಾನಗಳ ಬೆಳವಣಿಗೆ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿವೆ. ಸಂಶೋಧನೆಯ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಜವಾಬ್ದಾರಿಗಳು ಹೆಚ್ಚಾಗಿವೆ. ಈ ಬದಲಾವಣೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಸಾಮರ್ಥ್ಯ ನಮ್ಮಲ್ಲಿರಬೇಕು ಎಂದು ಹೇಳಿದರು.</p>.<p>ತುಮಕೂರಿನ ಡಾ. ಪರಮೇಶ, ಬಾಗಲಕೋಟೆಯ ಡಾ. ಶ್ರೀಹರ್ಷ ಹಾಗೂ ವೈದ್ಯಕೀಯ ಕ್ಷೇತ್ರದ ಡಾ. ನಿರ್ಮಲಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸಂಶೋಧನೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮನ್ ಚೋಪಡೆ, ಪ್ರೊ. ಸುಚಿತ್ರಾ ರಾಟಿ, ಬಶೀರ್ ಅಹ್ಮದ್, ಕವಿತಾ ಕೆ., ಅಮರನಾಥ್, ಸೌಜನ್ಯ ಸಂಕಪ್ಪ, ಅಪ್ಪನಗೌಡ ಪಾಟೀಲ, ಡಾ. ಅಮಿತಕುಮಾರ ಬಿರಾದಾರ, ಭಾಗ್ಯಶ್ರೀ ಬಾಗೇವಾಡಿ, ಡಾ. ಸತೀಶ ನಡಗಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>