ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಬಳಿ NWKRTC ಬಸ್‌ಗೆ ಲಾರಿ ಡಿಕ್ಕಿ: ಇಬ್ಬರು ಪ್ರಯಾಣಿಕರು ಸಾವು

ವಿಜಯಪುರ ತಾಲ್ಲೂಕಿನ ಕಗ್ಗೋಡ ಗ್ರಾಮದ ಹೊರ ವಲಯದಲ್ಲಿ ಅಪಘಾತ
Published 21 ಜೂನ್ 2023, 15:31 IST
Last Updated 21 ಜೂನ್ 2023, 15:31 IST
ಅಕ್ಷರ ಗಾತ್ರ

ವಿಜಯಪುರ: ತಾಲ್ಲೂಕಿನ ಕಗ್ಗೋಡ ಗ್ರಾಮದ ಹೊರ ವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ NWKRTCಗೆ ಸೇರಿದ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. 

ದೇವರ ಹಿಪ್ಪರಗಿ ತಾಲ್ಲೂಕಿನ ಜಾಲವಾದ ಗ್ರಾಮದ ಬಾಬಾಸಾಹೇಬ ಇನಾಂದಾರ(70) ಹಾಗೂ 35 ವರ್ಷ ವಯಸ್ಸಿನ ಇನ್ನೊಬ್ಬ ವ್ಯಕ್ತಿ (ಗುರುತು ಪತ್ತೆಯಾಗಿಲ್ಲ) ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

ಅಥಣಿಯಿಂದ ವಿಜಯಪುರ ಮಾರ್ಗವಾಗಿ ಗಾಣಗಾಪುರಕ್ಕೆ ಹೊರಟಿದ್ದ ಬಸ್‌ಗೆ ಕಲಬುರ್ಗಿಯಿಂದ ವಿಜಯಪುರದತ್ತ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ವೇಗವಾಗಿ ಬರುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ಕಳೆದುಕೊಂಡು ಆರಂಭದಲ್ಲಿ ಸಾರಿಗೆ ಬಸ್‌ ಮತ್ತು ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆದು ತಂದ ನಂತರ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT