<p><strong>ಸೋಲಾಪುರ</strong>: ದಕ್ಷಿಣ ಸೋಲಾಪುರ ತಾಲ್ಲೂಕಿನ ವಳಸಂಗದಲ್ಲಿ ಬುಧವಾರ ವ್ಯಕ್ತಿಯೊಬ್ಬನನ್ನು ಹರಿತವಾದ ಚಾಕುವಿನಿಂದ ಹೊಟ್ಟೆಗೆ ಇರಿದು, ತಲೆಗೆ ಕಲ್ಲಿನಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಲಾಗಿದೆ. </p>.<p>ಹತ್ಯೆಯಾದ ವ್ಯಕ್ತಿ ಲಕ್ಷ್ಮಣ ವಾಘಮಾರೆ (33) ಎಂದು ತಿಳಿದುಬಂದಿದೆ. ವಳಸಂಗ ಗ್ರಾಮದ ಶ್ರೀ ಸಿದ್ಧೇಶ್ವರ ಮಂದಿರದ ಚೌಕದ ಬಳಿ ವೈಯಕ್ತಿಕ ವೈಷಮ್ಯದಿಂದ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ರವಿ ಫಟಕೆ (37) ಎಂಬಾತ ಚಾಕುವಿನಿಂದ ಇರಿದು ಲಕ್ಷ್ಮಣ ವಾಘಮಾರೆ ಅವರನ್ನು ಹತ್ಯೆ ಮಾಡಿದ ನಂತರ ತಾನೇ ವಳಸಂಗ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.</p>.<p>ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಸಹಾಯಕ ಪೊಲೀಸ್ ನಿರೀಕ್ಷಕ ರಾಹುಲ ಡೋಂಗರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಕ್ಕಲಕೋಟ ಉಪವಿಭಾಗಿಯ ಪೊಲೀಸ್ ಅಧಿಕಾರಿ ವಿಲಾಸ ಯಾಮಾವರ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಿದ್ದಾರೆ. ವಳಸಂಗ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಲಾಪುರ</strong>: ದಕ್ಷಿಣ ಸೋಲಾಪುರ ತಾಲ್ಲೂಕಿನ ವಳಸಂಗದಲ್ಲಿ ಬುಧವಾರ ವ್ಯಕ್ತಿಯೊಬ್ಬನನ್ನು ಹರಿತವಾದ ಚಾಕುವಿನಿಂದ ಹೊಟ್ಟೆಗೆ ಇರಿದು, ತಲೆಗೆ ಕಲ್ಲಿನಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಲಾಗಿದೆ. </p>.<p>ಹತ್ಯೆಯಾದ ವ್ಯಕ್ತಿ ಲಕ್ಷ್ಮಣ ವಾಘಮಾರೆ (33) ಎಂದು ತಿಳಿದುಬಂದಿದೆ. ವಳಸಂಗ ಗ್ರಾಮದ ಶ್ರೀ ಸಿದ್ಧೇಶ್ವರ ಮಂದಿರದ ಚೌಕದ ಬಳಿ ವೈಯಕ್ತಿಕ ವೈಷಮ್ಯದಿಂದ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ರವಿ ಫಟಕೆ (37) ಎಂಬಾತ ಚಾಕುವಿನಿಂದ ಇರಿದು ಲಕ್ಷ್ಮಣ ವಾಘಮಾರೆ ಅವರನ್ನು ಹತ್ಯೆ ಮಾಡಿದ ನಂತರ ತಾನೇ ವಳಸಂಗ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.</p>.<p>ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಸಹಾಯಕ ಪೊಲೀಸ್ ನಿರೀಕ್ಷಕ ರಾಹುಲ ಡೋಂಗರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಕ್ಕಲಕೋಟ ಉಪವಿಭಾಗಿಯ ಪೊಲೀಸ್ ಅಧಿಕಾರಿ ವಿಲಾಸ ಯಾಮಾವರ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಿದ್ದಾರೆ. ವಳಸಂಗ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>