ದೇಶದ ಸ್ವಾತಂತ್ರ್ಯಕ್ಕಾಗಿ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಇನ್ನುಳಿದ ಕ್ರಾಂತಿಕಾರಿಗಳು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಇದೇ ರೀತಿ ಸಾವಿರಾರು ಜನ ಇಡೀ ದೇಶದ ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದ ಪರಿಣಾಮವಾಗಿ ಸ್ವತಂತ್ರರಾಗಿದ್ದೇವೆ. ಆದರೆ, ಇಂದು ಅಧಿಕಾರದಲ್ಲಿರುವವರು ಯಾವೊಬ್ಬ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಲಿಲ್ಲ ಮತ್ತು ಪ್ರಾಣ ತೆತ್ತಲಿಲ್ಲ. ಪರ್ಯಾಯವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಲೆಗೈದರು. ಕೊಲೆಗೈದವನನ್ನು ಇಂದು ರಾಷ್ಟ್ರಭಕ್ತ, ದೇಶಭಕ್ತ ಎಂದು ಕೊಂಡಾಡುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿದರು.