ಪ್ರತಿ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸರ್ಕಾರವು ಸಮಾಜ ಕಲ್ಯಾಣ ಇಲಾಖೆ ಮೂಲಕ ಬಸ್/ರೈಲಿನ ವ್ಯವಸ್ಥೆ ಮಾಡುತ್ತಿತ್ತು. ಆದರೆ, ಈ ಬಾರಿ ಆಯಾ ಜಿಲ್ಲೆಗಳಿಗೆ ಈ ಹೊಣೆಯನ್ನು ವಹಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಯಾತ್ರಿಗಳ ಆಯ್ಕೆಗೆ ಸಮಾಜ ಕಲ್ಯಾಣ ಇಲಾಖೆಯು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಜಿಲ್ಲಾಧಿಕಾರಿ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಯಾತ್ರಾರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಿದೆ.