<p><strong>ವಿಜಯಪುರ: </strong>ಕೋವಿಡ್ ಕೆಲಸಕ್ಕೆ ನಿಯೋಜಿಸುವ ಮುನ್ನ ಅಗತ್ಯ ಸೌಕರ್ಯ, ಸುರಕ್ಷತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ಬಸವನ ಬಾಗೇವಾಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗುರುವಾರ ಆನ್ಲೈನ್ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಚ್. ಟಿ ಮಾತನಾಡಿ, ಸರ್ಕಾರ ಅಂಗನವಾಡಿ ನೌಕರನ್ನು ಕೋವಿಡ್ ಸೇವೆಗೆ ಬಳಸಿಕೊಳ್ಳಲು ನಿರ್ಧರಿಸಿ 15 ದಿನಗಳ ಬೇಸಿಗೆ ರಜೆಯಲ್ಲಿದ್ದ ಅವರನ್ನು, ರಜೆ ರದ್ದು ಪಡಿಸಿ ಆದೇಶ ಹೊರಡಿಸಲಾಗಿದೆ. ಇದು ಹಲವಾರು ಅನಾಹುತಗಳಿಗೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಕಳೆದ ವರ್ಷ ಕೊರೊನಾದಿಂದ ಸಾವಿಗೀಡಾದ ಬಹಳಷ್ಟು ಕಾರ್ಯಕರ್ತೆಯರಿಗೆ ಸೂಕ್ತವಾದ ಚಿಕಿತ್ಸೆ ಸಿಗಲಿಲ್ಲ ಮತ್ತು ಮಡಿದವರ ಕುಟುಂಬಗಳಿಗೆ ಘೋಷಿತ ₹30 ಲಕ್ಷ ವಿಮೆ ಇನ್ನೂ ತಲುಪಿಲ್ಲ. ಅಂತಹ ಹಲವಾರು ಸಮಸ್ಯೆಗಳು ಇನ್ನೂ ನಿವಾರಣೆ ಆಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಅಂಗನವಾಡಿ ನೌಕರರನ್ನು ಕೋವಿಡ್ ಕೆಲಸಗಳಿಗೆ ನಿಯೋಜಿಸುತ್ತಿರುವ ಮೊದಲು ನಮ್ಮ ಬೇಡಿಕೆಗಳಿಗೆ ಸರ್ಕಾರದಿಂದ ಲಿಖಿತ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.</p>.<p class="Subhead"><strong>ಪ್ರಮುಖ ಹಕ್ಕೊತ್ತಾಯಗಳು</strong></p>.<p>ಸಿಡಿಪಿಒ ಅವರಿಂದ ಲಿಖಿತ ಆದೇಶ ಪತ್ರ ನೀಡಿದ ಕಾರ್ಯಕರ್ತೆ,ಸಹಾಯಕಿಯರನ್ನು ಮಾತ್ರ ಕೋವಿಡ್ ಕೆಲಸಕ್ಕೆ ನಿಯೋಜನೆ ಮಾಡಬೇಕು. 50 ವರ್ಷ ಮೇಲ್ಪಟ್ಟವರು, ಗಂಭೀರ ಕಾಯಿಲೆ ಇದ್ದವರು, ಗರ್ಭಿಣಿ ಮತ್ತು ಚಿಕ್ಕ ಮಕ್ಕಳ ತಾಯಂದಿರನ್ನು ಕೆಲಸಕ್ಕೆ ನಿಯೋಜನೆ ಮಾಡಬಾರದು.</p>.<p>ರದ್ದು ಮಾಡಿರುವ 15 ದಿನ ಬೇಸಿಗೆ ರಜೆಗಳನ್ನು ಮುಂದಿನ ದಿನಗಳಲ್ಲಿ ನೀಡಬೇಕು, ಪಾಸಿಟಿವ್ ಬಂದ ಕಾರ್ಯಕರ್ತೆ, ಸಹಾಯಕಿ ಮತ್ತು ಅವರ ಅವಲಂಬಿತರಿಗೆ ಆಸ್ಪತ್ರೆ ಬೆಡ್ ಮೀಸಲಿಡಬೇಕು ಮತ್ತು ಉಚಿತ ಚಿಕಿತ್ಸೆ ನೀಡಬೇಕು.</p>.<p>₹ 30 ಲಕ್ಷ ವಿಮೆ ಎರಡನೇ ಅಲೆಯಲ್ಲಿಯೂ ಮುಂದುವರಿಸಿರುವ ಬಗ್ಗೆ ಸರ್ಕಾರದಿಂದ ಲಿಖಿತವಾಗಿ ಸ್ಪಷ್ಟನೆಯ ಪತ್ರ ಹೊರಡಿಸಬೇಕು, ಕೊರೊನಾ ವಾರಿಯರ್ಸ್ಗೆ ನೀಡುವ ಮಾಸಿಕ ವಿಶೇಷ ಗೌರವ ಧನ ಇವರಿಗೂ ನೀಡಬೇಕು.</p>.<p>ಮಾಸ್ಕ್, ಸ್ಯಾನಿಟೈಜರ್ ಸಹಿತ ಸುರಕ್ಷತೆ ಕಿಟ್ ನೀಡಬೇಕು, ಬಾಕಿ ಇರುವ ಗೌರವ ಧನ ಈ ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಚ್. ಟಿ, ಲಕ್ಷ್ಮೀ ಲಕ್ಷೆಟ್ಟಿ, ನಿಂಗಮ್ಮ ಮಠ, ಸಾವಿತ್ರಿ ನಾಗರತಿ, ರೇಣುಕಾ ಹಡಪದ, ವಿಜಯಲಕ್ಷ್ಮಿ ಹುಣಶ್ಯಾಳ, ಬೇಬಿ ಲಮಾಣಿ, ಸವಿತಾ ತೇರದಾಳ, ತಾಯವ್ವ ಬುದಿಹಾಳ, ಸತ್ತೆಮ್ಮ ಹಡಪದ, ಉಶಾ ಕುಲಕರ್ಣಿ, ರಷ್ಮೀ ಗುತ್ತೆದಾರ ಆನ್ಲೈನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಕೋವಿಡ್ ಕೆಲಸಕ್ಕೆ ನಿಯೋಜಿಸುವ ಮುನ್ನ ಅಗತ್ಯ ಸೌಕರ್ಯ, ಸುರಕ್ಷತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ಬಸವನ ಬಾಗೇವಾಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗುರುವಾರ ಆನ್ಲೈನ್ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಚ್. ಟಿ ಮಾತನಾಡಿ, ಸರ್ಕಾರ ಅಂಗನವಾಡಿ ನೌಕರನ್ನು ಕೋವಿಡ್ ಸೇವೆಗೆ ಬಳಸಿಕೊಳ್ಳಲು ನಿರ್ಧರಿಸಿ 15 ದಿನಗಳ ಬೇಸಿಗೆ ರಜೆಯಲ್ಲಿದ್ದ ಅವರನ್ನು, ರಜೆ ರದ್ದು ಪಡಿಸಿ ಆದೇಶ ಹೊರಡಿಸಲಾಗಿದೆ. ಇದು ಹಲವಾರು ಅನಾಹುತಗಳಿಗೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಕಳೆದ ವರ್ಷ ಕೊರೊನಾದಿಂದ ಸಾವಿಗೀಡಾದ ಬಹಳಷ್ಟು ಕಾರ್ಯಕರ್ತೆಯರಿಗೆ ಸೂಕ್ತವಾದ ಚಿಕಿತ್ಸೆ ಸಿಗಲಿಲ್ಲ ಮತ್ತು ಮಡಿದವರ ಕುಟುಂಬಗಳಿಗೆ ಘೋಷಿತ ₹30 ಲಕ್ಷ ವಿಮೆ ಇನ್ನೂ ತಲುಪಿಲ್ಲ. ಅಂತಹ ಹಲವಾರು ಸಮಸ್ಯೆಗಳು ಇನ್ನೂ ನಿವಾರಣೆ ಆಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಅಂಗನವಾಡಿ ನೌಕರರನ್ನು ಕೋವಿಡ್ ಕೆಲಸಗಳಿಗೆ ನಿಯೋಜಿಸುತ್ತಿರುವ ಮೊದಲು ನಮ್ಮ ಬೇಡಿಕೆಗಳಿಗೆ ಸರ್ಕಾರದಿಂದ ಲಿಖಿತ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.</p>.<p class="Subhead"><strong>ಪ್ರಮುಖ ಹಕ್ಕೊತ್ತಾಯಗಳು</strong></p>.<p>ಸಿಡಿಪಿಒ ಅವರಿಂದ ಲಿಖಿತ ಆದೇಶ ಪತ್ರ ನೀಡಿದ ಕಾರ್ಯಕರ್ತೆ,ಸಹಾಯಕಿಯರನ್ನು ಮಾತ್ರ ಕೋವಿಡ್ ಕೆಲಸಕ್ಕೆ ನಿಯೋಜನೆ ಮಾಡಬೇಕು. 50 ವರ್ಷ ಮೇಲ್ಪಟ್ಟವರು, ಗಂಭೀರ ಕಾಯಿಲೆ ಇದ್ದವರು, ಗರ್ಭಿಣಿ ಮತ್ತು ಚಿಕ್ಕ ಮಕ್ಕಳ ತಾಯಂದಿರನ್ನು ಕೆಲಸಕ್ಕೆ ನಿಯೋಜನೆ ಮಾಡಬಾರದು.</p>.<p>ರದ್ದು ಮಾಡಿರುವ 15 ದಿನ ಬೇಸಿಗೆ ರಜೆಗಳನ್ನು ಮುಂದಿನ ದಿನಗಳಲ್ಲಿ ನೀಡಬೇಕು, ಪಾಸಿಟಿವ್ ಬಂದ ಕಾರ್ಯಕರ್ತೆ, ಸಹಾಯಕಿ ಮತ್ತು ಅವರ ಅವಲಂಬಿತರಿಗೆ ಆಸ್ಪತ್ರೆ ಬೆಡ್ ಮೀಸಲಿಡಬೇಕು ಮತ್ತು ಉಚಿತ ಚಿಕಿತ್ಸೆ ನೀಡಬೇಕು.</p>.<p>₹ 30 ಲಕ್ಷ ವಿಮೆ ಎರಡನೇ ಅಲೆಯಲ್ಲಿಯೂ ಮುಂದುವರಿಸಿರುವ ಬಗ್ಗೆ ಸರ್ಕಾರದಿಂದ ಲಿಖಿತವಾಗಿ ಸ್ಪಷ್ಟನೆಯ ಪತ್ರ ಹೊರಡಿಸಬೇಕು, ಕೊರೊನಾ ವಾರಿಯರ್ಸ್ಗೆ ನೀಡುವ ಮಾಸಿಕ ವಿಶೇಷ ಗೌರವ ಧನ ಇವರಿಗೂ ನೀಡಬೇಕು.</p>.<p>ಮಾಸ್ಕ್, ಸ್ಯಾನಿಟೈಜರ್ ಸಹಿತ ಸುರಕ್ಷತೆ ಕಿಟ್ ನೀಡಬೇಕು, ಬಾಕಿ ಇರುವ ಗೌರವ ಧನ ಈ ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಚ್. ಟಿ, ಲಕ್ಷ್ಮೀ ಲಕ್ಷೆಟ್ಟಿ, ನಿಂಗಮ್ಮ ಮಠ, ಸಾವಿತ್ರಿ ನಾಗರತಿ, ರೇಣುಕಾ ಹಡಪದ, ವಿಜಯಲಕ್ಷ್ಮಿ ಹುಣಶ್ಯಾಳ, ಬೇಬಿ ಲಮಾಣಿ, ಸವಿತಾ ತೇರದಾಳ, ತಾಯವ್ವ ಬುದಿಹಾಳ, ಸತ್ತೆಮ್ಮ ಹಡಪದ, ಉಶಾ ಕುಲಕರ್ಣಿ, ರಷ್ಮೀ ಗುತ್ತೆದಾರ ಆನ್ಲೈನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>