<p><strong>ವಿಜಯಪುರ: </strong>ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಸ್ಯುಸಿಐ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭಗವಾನ್ರೆಡ್ಡಿ ಮಾತನಾಡಿ, ಈಗಾಗಲೇ ಜನರು ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಕಂಗೆಟ್ಟಿರುವಾಗ ತೈಲ ಬೆಲೆ ದಿನದಿಂದ ದಿನಕ್ಕೆ ಏರುತ್ತಿರುವುದು ಖಂಡನೀಯ ಎಂದರು.</p>.<p>ಲಾಕ್ಡೌನ್ ಅವಧಿಯಲ್ಲಿ ಜಾಗತಿಕವಾಗಿ ತೈಲ ಬೇಡಿಕೆ ಕುಸಿತ ಕಂಡಿದ್ದರಿಂದಾಗಿ ಕಚ್ಚಾ ತೈಲ ಬೆಲೆಯೂ ಶೂನ್ಯಕ್ಕೆ ತಲುಪಿತ್ತು. ಆದರೆ, ಇದರ ಲಾಭವನ್ನು ಜನರಿಗೆ ತಲುಪಿಸದ ಕೇಂದ್ರ ಬಿಜೆಪಿ ಸರ್ಕಾರವು ಪೆಟ್ರೋಲ್-ಡೀಸೆಲ್ ಮೇಲೆ ಪ್ರತಿ ಲೀಟರಿಗೆ ₹ 3 ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸುವ ಮೂಲಕ ತನ್ನ ಜನ ವಿರೋಧಿ ಧೋರಣೆ ಪ್ರದರ್ಶಿಸಿತ್ತು ಎಂದು ಆರೋಪಿಸಿದರು.</p>.<p>ಕಾರ್ಪೋರೇಟ್ ಸಂಸ್ಥೆಗಳಿಗೆ ರಿಯಾಯಿತಿ ಕೊಡುವ ಕೇಂದ್ರ ಸರ್ಕಾರ ಸಾಮಾನ್ಯ ಜನರ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು.</p>.<p>ಕಾರ್ಮಿಕ ನಾಯಕರಾದ ಪ್ರಭುಗೌಡ ಪಾಟೀಲ, ಜಿಲ್ಲಾ ಸಮಿತಿ ಸದಸ್ಯರಾದ ಬಾಳು ಜೇವೂರ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್ ಟಿ, ಮಲ್ಲಿಕಾರ್ಜುನ ಎಚ್ ಟಿ, ಕಾರ್ಯಕರ್ತರಾದ ಸುನೀಲ ಸಿದ್ರಾಮಶೆಟ್ಟಿ, ಶೋಭಾ, ಸುಮಿತ್ರಾ, ವಿದ್ಯಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಸ್ಯುಸಿಐ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭಗವಾನ್ರೆಡ್ಡಿ ಮಾತನಾಡಿ, ಈಗಾಗಲೇ ಜನರು ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಕಂಗೆಟ್ಟಿರುವಾಗ ತೈಲ ಬೆಲೆ ದಿನದಿಂದ ದಿನಕ್ಕೆ ಏರುತ್ತಿರುವುದು ಖಂಡನೀಯ ಎಂದರು.</p>.<p>ಲಾಕ್ಡೌನ್ ಅವಧಿಯಲ್ಲಿ ಜಾಗತಿಕವಾಗಿ ತೈಲ ಬೇಡಿಕೆ ಕುಸಿತ ಕಂಡಿದ್ದರಿಂದಾಗಿ ಕಚ್ಚಾ ತೈಲ ಬೆಲೆಯೂ ಶೂನ್ಯಕ್ಕೆ ತಲುಪಿತ್ತು. ಆದರೆ, ಇದರ ಲಾಭವನ್ನು ಜನರಿಗೆ ತಲುಪಿಸದ ಕೇಂದ್ರ ಬಿಜೆಪಿ ಸರ್ಕಾರವು ಪೆಟ್ರೋಲ್-ಡೀಸೆಲ್ ಮೇಲೆ ಪ್ರತಿ ಲೀಟರಿಗೆ ₹ 3 ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸುವ ಮೂಲಕ ತನ್ನ ಜನ ವಿರೋಧಿ ಧೋರಣೆ ಪ್ರದರ್ಶಿಸಿತ್ತು ಎಂದು ಆರೋಪಿಸಿದರು.</p>.<p>ಕಾರ್ಪೋರೇಟ್ ಸಂಸ್ಥೆಗಳಿಗೆ ರಿಯಾಯಿತಿ ಕೊಡುವ ಕೇಂದ್ರ ಸರ್ಕಾರ ಸಾಮಾನ್ಯ ಜನರ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು.</p>.<p>ಕಾರ್ಮಿಕ ನಾಯಕರಾದ ಪ್ರಭುಗೌಡ ಪಾಟೀಲ, ಜಿಲ್ಲಾ ಸಮಿತಿ ಸದಸ್ಯರಾದ ಬಾಳು ಜೇವೂರ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್ ಟಿ, ಮಲ್ಲಿಕಾರ್ಜುನ ಎಚ್ ಟಿ, ಕಾರ್ಯಕರ್ತರಾದ ಸುನೀಲ ಸಿದ್ರಾಮಶೆಟ್ಟಿ, ಶೋಭಾ, ಸುಮಿತ್ರಾ, ವಿದ್ಯಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>