<p><strong>ವಿಜಯಪುರ:</strong> ಶಾಸಕಎಂ.ಬಿ.ಪಾಟೀಲರು ಲಿಂಗಾಯತ ನಾಯಕರಲ್ಲ ಎಂಬ ಹೇಳಿಕೆ ರಾಜ್ಯದ ಲಿಂಗಾಯತರ ಮನಸ್ಸಿಗೆ ಘಾಸಿಯಾಗಿದೆ. ಇದು ಲಿಂಗಾಯತರಿಗೆ ಮಾಡಿದ ಅಪಮಾನಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಂ.ಬಿ.ಪಾಟೀಲ ಅವರ ಜಾತಿ ಸರ್ಕಾರದ ಲಿಂಗಾಯತ ಸಮುದಾಯದ ಪಟ್ಟಿಯಲ್ಲಿ ಇಲ್ಲ ಎಂದು ಉಮೇಶ ಕೋಳಕೂರ ಯಾವ ಆಧಾರದ ಮೇಲೆ ಹೇಳಿಕೆ ನೀಡಿದ್ದಾರೆ ಎಂಬುದನ್ನು ಸಾಬೀತುಪಡಿಸಬೇಕು. ಈ ಹೇಳಿಕೆ ನೀಡುವ ಮುಂಚೆ ಅವರು ಹತ್ತು ಬಾರಿ ಆಲೋಚಿಸಬೇಕಿತ್ತು ಎಂದಿದ್ದಾರೆ.</p>.<p>ಲಿಂಗಾಯತರ ಅಭಿವೃದ್ದಿಗೆ ಎಂ.ಬಿ.ಪಾಟೀಲ ಯಾವ ಕಾರ್ಯ ಮಾಡಿದ್ದಾರೆ ಎಂಬುದು ಉಮೇಶ ಕೋಳಕೂರ ಅವರಿಗೂ ಗೊತ್ತಿರುವ ವಿಚಾರ. ಮಾಧ್ಯಮಗಳಿಗೆ ಅನಗತ್ಯ ಹೇಳಿಕೆ ನೀಡಿ, ಲಿಂಗಾಯತರ ಅಸ್ಮಿತೆಯನ್ನು ಕೆಣಕಿರುವುದು ಖಂಡನೀಯ ಎಂದರು.</p>.<p>ಎಂ.ಬಿ.ಪಾಟೀಲರು ಕೇವಲ ಲಿಂಗಾಯತ ನಾಯಕ ಮಾತ್ರವಲ್ಲ, ಎಲ್ಲ ಜಾತಿ, ಧರ್ಮ, ಸಮುದಾಯ ಸೇರಿದಂತೆ ಈಡೀ ರಾಜ್ಯದ ನಾಯಕರಾಗಿದ್ದಾರೆ ಎಂಬುದನ್ನು ಅವರು ಇನ್ನಾದರೂ ತಿಳಿದುಕೊಳ್ಳಬೇಕು ಎಂದು ಹೇಳಿದರು.</p>.<p>ಸಚಿವ ಕಾರಜೋಳ ಅವರು ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ದಲಿತ ಕಲ್ಯಾಣಕ್ಕಾಗಿ ಯಾವ ಕಾರ್ಯ ಮಾಡಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅಶೋಕ ಮನಗೂಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಶಾಸಕಎಂ.ಬಿ.ಪಾಟೀಲರು ಲಿಂಗಾಯತ ನಾಯಕರಲ್ಲ ಎಂಬ ಹೇಳಿಕೆ ರಾಜ್ಯದ ಲಿಂಗಾಯತರ ಮನಸ್ಸಿಗೆ ಘಾಸಿಯಾಗಿದೆ. ಇದು ಲಿಂಗಾಯತರಿಗೆ ಮಾಡಿದ ಅಪಮಾನಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಂ.ಬಿ.ಪಾಟೀಲ ಅವರ ಜಾತಿ ಸರ್ಕಾರದ ಲಿಂಗಾಯತ ಸಮುದಾಯದ ಪಟ್ಟಿಯಲ್ಲಿ ಇಲ್ಲ ಎಂದು ಉಮೇಶ ಕೋಳಕೂರ ಯಾವ ಆಧಾರದ ಮೇಲೆ ಹೇಳಿಕೆ ನೀಡಿದ್ದಾರೆ ಎಂಬುದನ್ನು ಸಾಬೀತುಪಡಿಸಬೇಕು. ಈ ಹೇಳಿಕೆ ನೀಡುವ ಮುಂಚೆ ಅವರು ಹತ್ತು ಬಾರಿ ಆಲೋಚಿಸಬೇಕಿತ್ತು ಎಂದಿದ್ದಾರೆ.</p>.<p>ಲಿಂಗಾಯತರ ಅಭಿವೃದ್ದಿಗೆ ಎಂ.ಬಿ.ಪಾಟೀಲ ಯಾವ ಕಾರ್ಯ ಮಾಡಿದ್ದಾರೆ ಎಂಬುದು ಉಮೇಶ ಕೋಳಕೂರ ಅವರಿಗೂ ಗೊತ್ತಿರುವ ವಿಚಾರ. ಮಾಧ್ಯಮಗಳಿಗೆ ಅನಗತ್ಯ ಹೇಳಿಕೆ ನೀಡಿ, ಲಿಂಗಾಯತರ ಅಸ್ಮಿತೆಯನ್ನು ಕೆಣಕಿರುವುದು ಖಂಡನೀಯ ಎಂದರು.</p>.<p>ಎಂ.ಬಿ.ಪಾಟೀಲರು ಕೇವಲ ಲಿಂಗಾಯತ ನಾಯಕ ಮಾತ್ರವಲ್ಲ, ಎಲ್ಲ ಜಾತಿ, ಧರ್ಮ, ಸಮುದಾಯ ಸೇರಿದಂತೆ ಈಡೀ ರಾಜ್ಯದ ನಾಯಕರಾಗಿದ್ದಾರೆ ಎಂಬುದನ್ನು ಅವರು ಇನ್ನಾದರೂ ತಿಳಿದುಕೊಳ್ಳಬೇಕು ಎಂದು ಹೇಳಿದರು.</p>.<p>ಸಚಿವ ಕಾರಜೋಳ ಅವರು ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ದಲಿತ ಕಲ್ಯಾಣಕ್ಕಾಗಿ ಯಾವ ಕಾರ್ಯ ಮಾಡಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅಶೋಕ ಮನಗೂಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>