<p><strong>ವಿಜಯಪುರ:</strong>ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ಯಾರಾಮೆಡಿಕಲ್ ಕೋರ್ಸ್ ತುಂಬಾ ಉಪಯುಕ್ತವಾಗಿದೆ ಮತ್ತು ಜೀವನದಲ್ಲಿ ಆರ್ಥಿಕ ಸ್ಥಿರತೆ ಬರುತ್ತದೆ ಎಂದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.</p>.<p>ನಗರದ ಶ್ರೀ ಶರಣ ಬಸವೇಶ್ವರ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಗ್ಲೋಬಲ್ ಹೆಲ್ತ್ ಕೇರ್ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕ್ಯಾಂಪಸ್ ಸಂದರ್ಶನ, ಉದ್ಯೋಗ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಈಗಿನ ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಅರೆ ವೈದ್ಯಕೀಯ ಸಿಬ್ಬಂದಿ(ಪ್ಯಾರಾಮೆಡಿಕಲ್) ತುಂಬಾ ಮಹತ್ವದ ಪಾತ್ರ ವಹಿಸುತ್ತಾರೆ ಹೇಳಿದರು.</p>.<p>ಗ್ಲೋಬಲ್ ಹೆಲ್ತ್ ಕೇರ್ ಅಕಾಡೆಮಿಯ ನೇಮಕ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಳಿವಾಡ, ವಿದ್ಯಾರ್ಥಿಗಳು ಉದ್ಯೋಗ ದೊರಕಿಸಿಕೊಳ್ಳಲು ತಮ್ಮ ಕೌಶಲ, ಸಾಮರ್ಥ್ಯ ಮತ್ತು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಗ್ಲೋಬಲ್ ಹೆಲ್ತ್ ಕೇರ್ ಅಕಾಡೆಮಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥರಾಮಚಂದ್ರ ಕೌಲಗಿ ಮಾತನಾಡಿ, ವೈದ್ಯಕೀಯ ವಿಭಾಗದಲ್ಲಿ ಪ್ಯಾರಾಮೆಡಿಕಲ್ ಸಿಬ್ಬಂದಿ ಕೊರತೆ ಇರುವುದರಿಂದ ಈ ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶಗಳು ಹೆಚ್ಚಿಗೆ ಇವೆ ಎಂದು ತಿಳಿಸಿದರು.</p>.<p>ಶ್ರೀಶರಣ ಬಸವೇಶ್ವರ ಕಾಲೇಜಿನ ನಿರ್ದೇಶಕಿ ಸಂಯುಕ್ತಾ ಪಾಟೀಲ್ ಮಾತನಾಡಿ, ಶರಣ ಬಸವೇಶ್ವರ ಕಾಲೇಜಿನ ಮುಖ್ಯ ಉದ್ದೇಶವು ವಿದ್ಯಾರ್ಥಿಗಳಿಗೆ ಕೇವಲ ಒಳ್ಳೆಯ ಶಿಕ್ಷಣವನ್ನೂ ಕೊಡುವುದಷ್ಟೇ ಅಲ್ಲದೇ, ಅವರಿಗೆ ಉದ್ಯೋಗ ದೊರಕಿಸಿ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸುವುದಾಗಿದೆ ಎಂದು ಹೇಳಿದರು.</p>.<p>ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ಸಾಮಾನ್ಯ ವಿದ್ಯಾರ್ಥಿಗಳಿಗೂ ಉದ್ಯೋಗ ದೊರಕಿಸಿ ಕೊಡುವಂತ ಐದು ಡಿಪ್ಲೊಮಾ ಪ್ಯಾರಾ ಮೆಡಿಕಲ್ ಕೋರ್ಸ್ ಹಾಗೂ ಬಿಎಂಎಲ್ಟಿ ಪದವಿ ಕೋರ್ಸ್ಗಳಿವೆ ಎಂದರು.</p>.<p>ಶ್ರೀ ಶರಣ ಬಸವೇಶ್ವರ ಕಾಲೇಜಿನ ವ್ಯವಸ್ಥಾಪಕ ಸಮಿತಿ ಸದಸ್ಯರಾದ ಸಂಪ್ರದಾ ಪಾಟೀಲ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ವಿಠ್ಠಲ ವಿಜಾಪುರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ಯಾರಾಮೆಡಿಕಲ್ ಕೋರ್ಸ್ ತುಂಬಾ ಉಪಯುಕ್ತವಾಗಿದೆ ಮತ್ತು ಜೀವನದಲ್ಲಿ ಆರ್ಥಿಕ ಸ್ಥಿರತೆ ಬರುತ್ತದೆ ಎಂದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.</p>.<p>ನಗರದ ಶ್ರೀ ಶರಣ ಬಸವೇಶ್ವರ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಗ್ಲೋಬಲ್ ಹೆಲ್ತ್ ಕೇರ್ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕ್ಯಾಂಪಸ್ ಸಂದರ್ಶನ, ಉದ್ಯೋಗ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಈಗಿನ ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಅರೆ ವೈದ್ಯಕೀಯ ಸಿಬ್ಬಂದಿ(ಪ್ಯಾರಾಮೆಡಿಕಲ್) ತುಂಬಾ ಮಹತ್ವದ ಪಾತ್ರ ವಹಿಸುತ್ತಾರೆ ಹೇಳಿದರು.</p>.<p>ಗ್ಲೋಬಲ್ ಹೆಲ್ತ್ ಕೇರ್ ಅಕಾಡೆಮಿಯ ನೇಮಕ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಳಿವಾಡ, ವಿದ್ಯಾರ್ಥಿಗಳು ಉದ್ಯೋಗ ದೊರಕಿಸಿಕೊಳ್ಳಲು ತಮ್ಮ ಕೌಶಲ, ಸಾಮರ್ಥ್ಯ ಮತ್ತು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಗ್ಲೋಬಲ್ ಹೆಲ್ತ್ ಕೇರ್ ಅಕಾಡೆಮಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥರಾಮಚಂದ್ರ ಕೌಲಗಿ ಮಾತನಾಡಿ, ವೈದ್ಯಕೀಯ ವಿಭಾಗದಲ್ಲಿ ಪ್ಯಾರಾಮೆಡಿಕಲ್ ಸಿಬ್ಬಂದಿ ಕೊರತೆ ಇರುವುದರಿಂದ ಈ ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶಗಳು ಹೆಚ್ಚಿಗೆ ಇವೆ ಎಂದು ತಿಳಿಸಿದರು.</p>.<p>ಶ್ರೀಶರಣ ಬಸವೇಶ್ವರ ಕಾಲೇಜಿನ ನಿರ್ದೇಶಕಿ ಸಂಯುಕ್ತಾ ಪಾಟೀಲ್ ಮಾತನಾಡಿ, ಶರಣ ಬಸವೇಶ್ವರ ಕಾಲೇಜಿನ ಮುಖ್ಯ ಉದ್ದೇಶವು ವಿದ್ಯಾರ್ಥಿಗಳಿಗೆ ಕೇವಲ ಒಳ್ಳೆಯ ಶಿಕ್ಷಣವನ್ನೂ ಕೊಡುವುದಷ್ಟೇ ಅಲ್ಲದೇ, ಅವರಿಗೆ ಉದ್ಯೋಗ ದೊರಕಿಸಿ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸುವುದಾಗಿದೆ ಎಂದು ಹೇಳಿದರು.</p>.<p>ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ಸಾಮಾನ್ಯ ವಿದ್ಯಾರ್ಥಿಗಳಿಗೂ ಉದ್ಯೋಗ ದೊರಕಿಸಿ ಕೊಡುವಂತ ಐದು ಡಿಪ್ಲೊಮಾ ಪ್ಯಾರಾ ಮೆಡಿಕಲ್ ಕೋರ್ಸ್ ಹಾಗೂ ಬಿಎಂಎಲ್ಟಿ ಪದವಿ ಕೋರ್ಸ್ಗಳಿವೆ ಎಂದರು.</p>.<p>ಶ್ರೀ ಶರಣ ಬಸವೇಶ್ವರ ಕಾಲೇಜಿನ ವ್ಯವಸ್ಥಾಪಕ ಸಮಿತಿ ಸದಸ್ಯರಾದ ಸಂಪ್ರದಾ ಪಾಟೀಲ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ವಿಠ್ಠಲ ವಿಜಾಪುರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>