<p><strong>ವಿಜಯಪುರ</strong>: ಸಾಹಿತಿ ಎಸ್.ಎಲ್. ಭೈರಪ್ಪ ರಚಿತ ಕಾದಂಬರಿ ಆಧಾರಿತ ‘ಪರ್ವ’ ಮಹಾ ರಂಗಪ್ರಯೋಗ ಏಪ್ರಿಲ್ 20ರಂದು ಮಧ್ಯಾಹ್ನ 3.30 ರಿಂದ ರಾತ್ರಿ 11ರ ರವರೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘7.30 ಗಂಟೆಗಳ ಕಾಲ ಪ್ರದರ್ಶನವಾಗಲಿರುವ ಈ ನಾಟಕದ ನಡುವೆ ತಲಾ 10 ನಿಮಿಷಗಳ ಮೂರು ಚಹಾ ವಿರಾಮ ಹಾಗೂ ನಡುವೆ ಊಟಕ್ಕೆ 30 ನಿಮಿಷ ವಿರಾಮ ನೀಡಲಾಗುವುದು ಎಂದರು.</p>.<p>ರಂಗಪ್ರಯೋಗದ ಖರ್ಚು ವೆಚ್ಚ ಹೆಚ್ಚಿರುವುದರಿಂದ ₹ 200 ಟಿಕೆಟ್ ದರ ನಿಗದಿಪಡಿಸಲಾಗಿದೆ.ಸುಮಾರು 700 ಜನರಿಗೆ ವೀಕ್ಷಣೆಗೆ ಅವಕಾಶವಿದೆ ಎಂದು ಹೇಳಿದರು.</p>.<p>ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಟಿಕೆಟ್ಗಳು ಲಭ್ಯವಿರುತ್ತದೆ. ಮತ್ತುರಂಗಾಯಣದ ವೆಬ್ಸೈಟ್ <strong>www.rangayana.org </strong>ನಲ್ಲೂ ಆನ್ಲೈನ್ ಮೂಲಕ ಟಿಕೆಟ್ ಪಡೆಯಬಹುದು ಎಂದು ತಿಳಿಸಿದರು.</p>.<p>600 ಪುಟಗಳ ಬೈರಪ್ಪನವರ ಪರ್ವ ಕಾದಂಬರಿಗೆ ಯಾವುದೇ ಲೋಪವಾಗದಂತೆ, ಅಷ್ಟೇ ಗಟ್ಟಿಯಾಗಿ, ವಸ್ತುನಿಷ್ಠವಾಗಿ ಆಧುನಿಕ ರಂಗಪರಿಕಲ್ಪನೆಗೆ ಹೊಸ ಆಯಾಮ ಕೊಡುವ ನಿಟ್ಟಿನಲ್ಲಿ ರಂಗ ನಿರ್ದೇಶಕ ಪ್ರಕಾಶ್ ಬೆಳವಾಡಿ ಅವರು ರಂಗಪಠ್ಯ ರೂಪಿಸಿ, ಮಹಾ ರಂಗಪ್ರಯೋಗವನ್ನು ನಿರ್ದೇಶನ ಮಾಡಿದ್ದಾರೆ ಎಂದರು.</p>.<p>35 ಕಲಾವಿದರು ಸೇರಿ ಒಟ್ಟು 50 ಜನರ ತಂಡ ಆರು ತಿಂಗಳ ಕಾಲ ಪರಿಶ್ರಮದಿಂದ ಈ ಮಹಾ ರಂಗಪ್ರಯೋಗವನ್ನು ಕಟ್ಟಿದೆ ಎಂದರು.</p>.<p>ಕನ್ನಡ ಕಾಯಕ ವರ್ಷದಲ್ಲಿ ಕನ್ನಡ ರಂಗಭೂಮಿ ವಿಶ್ವದ ಮತ್ತು ಭಾರತೀಯ ರಂಗಭೂಮಿಯಲ್ಲಿ ಒಂದು ಮೈಲಿಗಲ್ಲಾಗಿ ನಿಲ್ಲಬೇಕೆಂಬುದು ಮೈಸೂರು ರಂಗಾಯಣದ ಕನಸು ನನಸಾಗಿದೆ ಎಂದು ತಿಳಿಸಿದರು.</p>.<p>ಮೈಸೂರು, ಬೆಂಗಳೂರಿನಲ್ಲಿ ಈಗಾಗಲೇ 20 ಪ್ರದರ್ಶನಗಳನ್ನು ಯಶಸ್ವಿಯಾಗಿ ನೀಡಲಾಗಿದೆ. ರಾಜ್ಯದ ಉಳಿದ ಭಾಗದ ಜನರೂ ಈ ಮಹಾ ರಂಗಪ್ರಯೋಗವನ್ನು ಕಣ್ತುಂಬಿಕೊಳ್ಳಲಿ ಎಂಬ ಕಾರಣಕ್ಕೆ 20 ಕಡೆ ಪ್ರದರ್ಶನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪರ್ವ ನಾಟಕ ಪ್ರದರ್ಶನಕ್ಕೆ ₹ 50 ಲಕ್ಷ ಬಿಡುಗಡೆ ಮಾಡಿದೆ. ಒಂದು ವರ್ಷದಿಂದ ಪರ್ವಕ್ಕಾಗಿ ಆಯ್ಕೆ ಮಾಡಿಕೊಂಡಿರುವ 35ಕ್ಕೂ ಹೆಚ್ಚು ಕಲಾವಿದರಿಗೆ ಮಾಸಿಕ ಸಂಭಾವನೆ ನೀಡಲಾಗುತ್ತಿದ್ದು, ಇದಕ್ಕಾಗಿ ₹ 38 ಲಕ್ಷ ವೆಚ್ಚವಾಗಿದೆ ಎಂದರು.</p>.<p>ವ್ಯಾಸ ಮಹರ್ಷಿಗಳು ‘ಮಹಾಭಾರತ’ವನ್ನು ಆಧಾರವಾಗಿಟ್ಟುಕೊಂಡು ರಚಿತವಾಗಿರುವ ‘ಪರ್ವ’ ಕಾದಂಬರಿ ನಮ್ಮ ಕಾಲದ ಒಂದು ಶ್ರೇಷ್ಠ ಕಲಾಕೃತಿಯಾಗಿದೆ. ಈ ಕೃತಿ ವಿಶ್ವ ಮನ್ನಣೆ ಪಡೆದಿದೆ. ಶೃಂಗ ರಾಷ್ಟ್ರಗಳ ಆಶಯದಂತೆ ಪರ್ವ ಕಾದಂಬರಿ ವಿಶ್ವದ ಅನೇಕ ಭಾಷೆಗಳಲ್ಲಿ ಅನುವಾದಗೊಳ್ಳುತ್ತಿದೆ. ಪ್ರಸ್ತುತ ರಷ್ಯನ್, ಮ್ಯಾಂಡರಿನ್ ಭಾಷೆಗಳಲ್ಲಿ ಅನುವಾದಗೊಂಡಿದೆ. ಈಗಾಗಲೇ ಭಾರತದ ಅನೇಕ ಭಾಷೆಗಳಿಗೆ ಅನುವಾದಗೊಂಡು ಇದೊಂದು ಸಾರ್ವಕಾಲಿಕ ಕೃತಿಯಾಗಿ ವಿಜೃಂಭಿಸಿದೆ ಎಂದು ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ ಬಿ., ಜಿಲ್ಲಾ ಯುವ ಪರಿಷತ್ ಅಧ್ಯಕ್ಷ ಶರಣು ಸಬರದ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p>**<br />ವಿಜಯಪುರ ಜಿಲ್ಲೆಯ ರಂಗಾಸಕ್ತರು, ರಂಗಕರ್ಮಿಗಳು, ಕಲಾವಿದರು, ಸಾಹಿತಿಗಳು, ಮಾಧ್ಯಮದವರು ಹಾಗು ಜನರು ‘ಪರ್ವ’ ಮಹಾರಂಗ ಪ್ರಯೋಗ ವೀಕ್ಷಣೆ ಮಾಡಬೇಕು<br /><em><strong>–ಅಡ್ಡಂಡ ಸಿ.ಕಾರ್ಯಪ್ಪ,ನಿರ್ದೇಶಕ,ರಂಗಾಯಣ,ಮೈಸೂರು </strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಸಾಹಿತಿ ಎಸ್.ಎಲ್. ಭೈರಪ್ಪ ರಚಿತ ಕಾದಂಬರಿ ಆಧಾರಿತ ‘ಪರ್ವ’ ಮಹಾ ರಂಗಪ್ರಯೋಗ ಏಪ್ರಿಲ್ 20ರಂದು ಮಧ್ಯಾಹ್ನ 3.30 ರಿಂದ ರಾತ್ರಿ 11ರ ರವರೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘7.30 ಗಂಟೆಗಳ ಕಾಲ ಪ್ರದರ್ಶನವಾಗಲಿರುವ ಈ ನಾಟಕದ ನಡುವೆ ತಲಾ 10 ನಿಮಿಷಗಳ ಮೂರು ಚಹಾ ವಿರಾಮ ಹಾಗೂ ನಡುವೆ ಊಟಕ್ಕೆ 30 ನಿಮಿಷ ವಿರಾಮ ನೀಡಲಾಗುವುದು ಎಂದರು.</p>.<p>ರಂಗಪ್ರಯೋಗದ ಖರ್ಚು ವೆಚ್ಚ ಹೆಚ್ಚಿರುವುದರಿಂದ ₹ 200 ಟಿಕೆಟ್ ದರ ನಿಗದಿಪಡಿಸಲಾಗಿದೆ.ಸುಮಾರು 700 ಜನರಿಗೆ ವೀಕ್ಷಣೆಗೆ ಅವಕಾಶವಿದೆ ಎಂದು ಹೇಳಿದರು.</p>.<p>ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಟಿಕೆಟ್ಗಳು ಲಭ್ಯವಿರುತ್ತದೆ. ಮತ್ತುರಂಗಾಯಣದ ವೆಬ್ಸೈಟ್ <strong>www.rangayana.org </strong>ನಲ್ಲೂ ಆನ್ಲೈನ್ ಮೂಲಕ ಟಿಕೆಟ್ ಪಡೆಯಬಹುದು ಎಂದು ತಿಳಿಸಿದರು.</p>.<p>600 ಪುಟಗಳ ಬೈರಪ್ಪನವರ ಪರ್ವ ಕಾದಂಬರಿಗೆ ಯಾವುದೇ ಲೋಪವಾಗದಂತೆ, ಅಷ್ಟೇ ಗಟ್ಟಿಯಾಗಿ, ವಸ್ತುನಿಷ್ಠವಾಗಿ ಆಧುನಿಕ ರಂಗಪರಿಕಲ್ಪನೆಗೆ ಹೊಸ ಆಯಾಮ ಕೊಡುವ ನಿಟ್ಟಿನಲ್ಲಿ ರಂಗ ನಿರ್ದೇಶಕ ಪ್ರಕಾಶ್ ಬೆಳವಾಡಿ ಅವರು ರಂಗಪಠ್ಯ ರೂಪಿಸಿ, ಮಹಾ ರಂಗಪ್ರಯೋಗವನ್ನು ನಿರ್ದೇಶನ ಮಾಡಿದ್ದಾರೆ ಎಂದರು.</p>.<p>35 ಕಲಾವಿದರು ಸೇರಿ ಒಟ್ಟು 50 ಜನರ ತಂಡ ಆರು ತಿಂಗಳ ಕಾಲ ಪರಿಶ್ರಮದಿಂದ ಈ ಮಹಾ ರಂಗಪ್ರಯೋಗವನ್ನು ಕಟ್ಟಿದೆ ಎಂದರು.</p>.<p>ಕನ್ನಡ ಕಾಯಕ ವರ್ಷದಲ್ಲಿ ಕನ್ನಡ ರಂಗಭೂಮಿ ವಿಶ್ವದ ಮತ್ತು ಭಾರತೀಯ ರಂಗಭೂಮಿಯಲ್ಲಿ ಒಂದು ಮೈಲಿಗಲ್ಲಾಗಿ ನಿಲ್ಲಬೇಕೆಂಬುದು ಮೈಸೂರು ರಂಗಾಯಣದ ಕನಸು ನನಸಾಗಿದೆ ಎಂದು ತಿಳಿಸಿದರು.</p>.<p>ಮೈಸೂರು, ಬೆಂಗಳೂರಿನಲ್ಲಿ ಈಗಾಗಲೇ 20 ಪ್ರದರ್ಶನಗಳನ್ನು ಯಶಸ್ವಿಯಾಗಿ ನೀಡಲಾಗಿದೆ. ರಾಜ್ಯದ ಉಳಿದ ಭಾಗದ ಜನರೂ ಈ ಮಹಾ ರಂಗಪ್ರಯೋಗವನ್ನು ಕಣ್ತುಂಬಿಕೊಳ್ಳಲಿ ಎಂಬ ಕಾರಣಕ್ಕೆ 20 ಕಡೆ ಪ್ರದರ್ಶನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪರ್ವ ನಾಟಕ ಪ್ರದರ್ಶನಕ್ಕೆ ₹ 50 ಲಕ್ಷ ಬಿಡುಗಡೆ ಮಾಡಿದೆ. ಒಂದು ವರ್ಷದಿಂದ ಪರ್ವಕ್ಕಾಗಿ ಆಯ್ಕೆ ಮಾಡಿಕೊಂಡಿರುವ 35ಕ್ಕೂ ಹೆಚ್ಚು ಕಲಾವಿದರಿಗೆ ಮಾಸಿಕ ಸಂಭಾವನೆ ನೀಡಲಾಗುತ್ತಿದ್ದು, ಇದಕ್ಕಾಗಿ ₹ 38 ಲಕ್ಷ ವೆಚ್ಚವಾಗಿದೆ ಎಂದರು.</p>.<p>ವ್ಯಾಸ ಮಹರ್ಷಿಗಳು ‘ಮಹಾಭಾರತ’ವನ್ನು ಆಧಾರವಾಗಿಟ್ಟುಕೊಂಡು ರಚಿತವಾಗಿರುವ ‘ಪರ್ವ’ ಕಾದಂಬರಿ ನಮ್ಮ ಕಾಲದ ಒಂದು ಶ್ರೇಷ್ಠ ಕಲಾಕೃತಿಯಾಗಿದೆ. ಈ ಕೃತಿ ವಿಶ್ವ ಮನ್ನಣೆ ಪಡೆದಿದೆ. ಶೃಂಗ ರಾಷ್ಟ್ರಗಳ ಆಶಯದಂತೆ ಪರ್ವ ಕಾದಂಬರಿ ವಿಶ್ವದ ಅನೇಕ ಭಾಷೆಗಳಲ್ಲಿ ಅನುವಾದಗೊಳ್ಳುತ್ತಿದೆ. ಪ್ರಸ್ತುತ ರಷ್ಯನ್, ಮ್ಯಾಂಡರಿನ್ ಭಾಷೆಗಳಲ್ಲಿ ಅನುವಾದಗೊಂಡಿದೆ. ಈಗಾಗಲೇ ಭಾರತದ ಅನೇಕ ಭಾಷೆಗಳಿಗೆ ಅನುವಾದಗೊಂಡು ಇದೊಂದು ಸಾರ್ವಕಾಲಿಕ ಕೃತಿಯಾಗಿ ವಿಜೃಂಭಿಸಿದೆ ಎಂದು ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ ಬಿ., ಜಿಲ್ಲಾ ಯುವ ಪರಿಷತ್ ಅಧ್ಯಕ್ಷ ಶರಣು ಸಬರದ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p>**<br />ವಿಜಯಪುರ ಜಿಲ್ಲೆಯ ರಂಗಾಸಕ್ತರು, ರಂಗಕರ್ಮಿಗಳು, ಕಲಾವಿದರು, ಸಾಹಿತಿಗಳು, ಮಾಧ್ಯಮದವರು ಹಾಗು ಜನರು ‘ಪರ್ವ’ ಮಹಾರಂಗ ಪ್ರಯೋಗ ವೀಕ್ಷಣೆ ಮಾಡಬೇಕು<br /><em><strong>–ಅಡ್ಡಂಡ ಸಿ.ಕಾರ್ಯಪ್ಪ,ನಿರ್ದೇಶಕ,ರಂಗಾಯಣ,ಮೈಸೂರು </strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>