ಮನಗೂಳಿ: ಕೋವಿಡ್ ಮೊದಲ ಅಲೆಗಿಂತಲೂ ಎರಡನೇ ಅಲೆ ತೀವ್ರವಾಗಿದೆ. ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ನಮ್ಮ ಜೀವವನ್ನೆ ಪಣಕ್ಕಿಟ್ಟು ಸಹದ್ಯೋಗಿಗಳೊಂದಿಗೆ ರೋಗಿಗಳ ಸೇವೆಯನ್ನು ಮಾಡುತ್ತಿದ್ದೇವೆ ಎನ್ನುತ್ತಾರೆ ಮನಗೂಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕಿ ಕರುಣಾ ಕುಂಬಾರ.
2008ರಿಂದಲೂ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ಕೆಲಸಕ್ಕೆ ಬಂದ ಮೇಲೆ ಹಲವಾರು ತೆರನಾದ ಸವಾಲುಗಳನ್ನು ಸ್ವೀಕರಿಸಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಆದರೆ, ಕೋವಿಡ್ ವಿರುದ್ಧದ ಹೋರಾಟ ಮಾತ್ರ ಜಾಂಗಾ ಬಲವನ್ನೆ ನಡುಗಿಸುತ್ತಿದೆ. ಇಂತಹ ಸಂದರ್ಭದಲ್ಲಿಯೂ ಕೂಡ ಹೆರಿಗೆ ಮಾಡಿಸುತ್ತಿದ್ದೇವೆ.