<p><strong>ವಿಜಯಪುರ</strong>: ಜನರು ಕೊರೊನಾದಿಂದ ಸಾಯುತ್ತಿಲ್ಲ. ಬದಲಿಗೆ ಆಕ್ಸಿಜನ್ ಕೊರತೆ, ರೆಮ್ಡಿಸಿವಿರ್ ಸಿಗದೇ ಸಾವನ್ನಪ್ಪುತ್ತಿದ್ದಾರೆ. ಇದು ತೀರಾ ನೋವಿನ ಸಂಗತಿ ಎಂದು ಶಾಸಕ ಎಂ.ಬಿ.ಪಾಟೀಲ ಆರೋಪಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದರು.</p>.<p>‘ಈ ಸಮಯದಲ್ಲಿ ನಾನು ರಾಜಕಾರಣ ಮಾಡಲು ಹೋಗುವುದಿಲ್ಲ. ಆದರೆ, ಸರ್ಕಾರ ತನ್ನ ಜವಾಬ್ದಾರಿ ಅರಿತುಕೊಳ್ಳಬೇಕಿದೆ, ಯುದ್ಧೋಪಾದಿಯಲ್ಲಿ ಕೊರೊನಾ ನಿಯಂತ್ರಣ ಕಾರ್ಯ ಮಾಡಬೇಕಿದೆ. ಆಗ ಮಾತ್ರ ಜೀವ ಉಳಿಸಲು ಸಾಧ್ಯವಾಗಲಿದೆ. ಜಾತಿ, ಧರ್ಮ, ಪಂಥ, ಪಕ್ಷ ಎಲ್ಲವನ್ನೂ ಬದಿಗಿಟ್ಟು ಸರ್ಕಾರಗಳು ಶ್ರಮಿಸಬೇಕಿದೆ’ ಎಂದು ಹೇಳಿದರು.</p>.<p>ರೆಮ್ ಡಿಸಿವಿರ್ ಔಷಧಿಯನ್ನು ಸರ್ಕಾರ ವೈಜ್ಞಾನಿಕವಾಗಿ ಹಂಚಿಕೆ ಮಾಡಿ ಕೊರತೆ ನೀಗಿಸಬೇಕು, ಈ ಪೂರೈಕೆ ಪ್ರಕ್ರಿಯೆಗೆ ವಿನಾಕಾರಣ ಕಠಿಣ ನಿರ್ಬಂಧ ಮಾಡಿರುವುದು ಸರಿಯಲ್ಲ, ಕೂಡಲೇ ಇದನ್ನು ಸರಳೀಕರಣಗೊಳಿಸಬೇಕು ಎಂದರು.</p>.<p>‘ಆಕ್ಸಿಜನ್ ಘಟಕಗಳನ್ನು ತೆರೆಯಲಾಗುವುದು, ರೆಮ್ಡಿಸಿವಿರ್ ಪೂರೈಸಲಾಗುವುದು ಎಂದು ಸಚಿವರು ಕೇವಲ ಭವಿಷ್ಯತ್ ಕಾಲದಲ್ಲಿಯೇ ಮಾತನಾಡುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವುದು ಅವರ ಕೆಲಸವಲ್ಲ. ಈಗೇನು ಮಾಡುತ್ತಿದ್ದಾರೆ ಎಂಬುದನ್ನು ಹೇಳಲಿ’ ಎಂದರು.</p>.<p>ಕೊರೊನಾ ಲಸಿಕೆ ವಿಷಯದಲ್ಲಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಇವರಲ್ಲಿ ಸಮನ್ವಯತೆ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಜನರು ಕೊರೊನಾದಿಂದ ಸಾಯುತ್ತಿಲ್ಲ. ಬದಲಿಗೆ ಆಕ್ಸಿಜನ್ ಕೊರತೆ, ರೆಮ್ಡಿಸಿವಿರ್ ಸಿಗದೇ ಸಾವನ್ನಪ್ಪುತ್ತಿದ್ದಾರೆ. ಇದು ತೀರಾ ನೋವಿನ ಸಂಗತಿ ಎಂದು ಶಾಸಕ ಎಂ.ಬಿ.ಪಾಟೀಲ ಆರೋಪಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದರು.</p>.<p>‘ಈ ಸಮಯದಲ್ಲಿ ನಾನು ರಾಜಕಾರಣ ಮಾಡಲು ಹೋಗುವುದಿಲ್ಲ. ಆದರೆ, ಸರ್ಕಾರ ತನ್ನ ಜವಾಬ್ದಾರಿ ಅರಿತುಕೊಳ್ಳಬೇಕಿದೆ, ಯುದ್ಧೋಪಾದಿಯಲ್ಲಿ ಕೊರೊನಾ ನಿಯಂತ್ರಣ ಕಾರ್ಯ ಮಾಡಬೇಕಿದೆ. ಆಗ ಮಾತ್ರ ಜೀವ ಉಳಿಸಲು ಸಾಧ್ಯವಾಗಲಿದೆ. ಜಾತಿ, ಧರ್ಮ, ಪಂಥ, ಪಕ್ಷ ಎಲ್ಲವನ್ನೂ ಬದಿಗಿಟ್ಟು ಸರ್ಕಾರಗಳು ಶ್ರಮಿಸಬೇಕಿದೆ’ ಎಂದು ಹೇಳಿದರು.</p>.<p>ರೆಮ್ ಡಿಸಿವಿರ್ ಔಷಧಿಯನ್ನು ಸರ್ಕಾರ ವೈಜ್ಞಾನಿಕವಾಗಿ ಹಂಚಿಕೆ ಮಾಡಿ ಕೊರತೆ ನೀಗಿಸಬೇಕು, ಈ ಪೂರೈಕೆ ಪ್ರಕ್ರಿಯೆಗೆ ವಿನಾಕಾರಣ ಕಠಿಣ ನಿರ್ಬಂಧ ಮಾಡಿರುವುದು ಸರಿಯಲ್ಲ, ಕೂಡಲೇ ಇದನ್ನು ಸರಳೀಕರಣಗೊಳಿಸಬೇಕು ಎಂದರು.</p>.<p>‘ಆಕ್ಸಿಜನ್ ಘಟಕಗಳನ್ನು ತೆರೆಯಲಾಗುವುದು, ರೆಮ್ಡಿಸಿವಿರ್ ಪೂರೈಸಲಾಗುವುದು ಎಂದು ಸಚಿವರು ಕೇವಲ ಭವಿಷ್ಯತ್ ಕಾಲದಲ್ಲಿಯೇ ಮಾತನಾಡುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವುದು ಅವರ ಕೆಲಸವಲ್ಲ. ಈಗೇನು ಮಾಡುತ್ತಿದ್ದಾರೆ ಎಂಬುದನ್ನು ಹೇಳಲಿ’ ಎಂದರು.</p>.<p>ಕೊರೊನಾ ಲಸಿಕೆ ವಿಷಯದಲ್ಲಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಇವರಲ್ಲಿ ಸಮನ್ವಯತೆ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>