ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಬಳಿಗೆ ಕಾಂಗ್ರೆಸ್‌: ಎಂ.ಬಿ.ಪಾಟೀಲ

ರಾಹುಲ್‌ ಗಾಂಧಿ ಸಂಸತ್‌ ಸದಸ್ಯತ್ವ ಅನರ್ಹ
Last Updated 24 ಮಾರ್ಚ್ 2023, 14:12 IST
ಅಕ್ಷರ ಗಾತ್ರ

ವಿಜಯಪುರ : ರಾಹುಲ್ ಗಾಂಧಿ ಅವರನ್ನು ಸಂಸತ್‌ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಸೇಡಿನ ಕ್ರಮ,
ಇದರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ, ನಾವು ಇದನ್ನು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದರು.

ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐತಿಹಾಸಿಕ ಭಾರತ್‌ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚಾಗಿದೆ, ಈ ಯಾತ್ರೆಯಲ್ಲಿ ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದರು. ಇದನ್ನು ಸಹಿಸಲಾಗದೆ ಬಿಜೆಪಿ ಕೀಳುಮಟ್ಟದ ಕ್ರಮಕ್ಕೆ ಇಳಿದಿದೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 30 ದಿನ ಮೇಲ್ಮನವಿಗೆ ಸಮಯ ಕೊಟ್ಟಿತ್ತು. ನಿನ್ನೆ ಅಷ್ಟೇ ಕೋರ್ಟ್ ಆದೇಶ ಬಂದಿದೆ, ಇಂದು ತರಾತುರಿಯಲ್ಲಿ ಅನರ್ಹ ಮಾಡಿರುವುದು ಅವರ ಹತಾಶೆ ಭಾವನೆ ತೋರಿಸುತ್ತೆ ಎಂದರು.

ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ವಿರೋಧ ಪಕ್ಷದವರನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ, ಸಿಬಿಐ, ಇಡಿ, ಇಟಿ ಮೂಲಕ ವಿರೋಧ ಪಕ್ಷದವರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಕ್ರಮ‌‌ಕ್ಕೆ ಮುಂದಾಗಿದೆ ಎಂದು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT