ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಜಂಟಿ ಕೃಷಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ‘ರೈತರು ದ್ರಾಕ್ಷಿ, ಕಬ್ಬು, ತೊಗರಿ, ಭತ್ತ ಸೇರಿದಂತೆ ಪ್ರಮುಖ ಬೆಳೆಗಳಿಗೆ ಹೊಲದೊಳಗೆ ಹೋಗಿ ಔಷಧ ಸಿಂಪಡಿಸುವುದು ಕಷ್ಟವಾಗುತ್ತದೆ. ಆದರೆ, ಡ್ರೋಣ್ ಮೂಲಕ ಸುಲಭವಾಗಿ ಕೀಟನಾಶಕ ಸಿಂಪಡಿಸಲು ನೆರವಾಗುತ್ತದೆ’ ಎಂದರು.