ಹಗಲು, ರಾತ್ರಿ,ಕಲ್ಲು, ಮುಳ್ಳು, ಎನ್ನದೆ ಉತ್ಸಾಹದಿಂದ ಶ್ರೀಶೈಲದತ್ತ ಹೆಜ್ಜೆ ಹಾಕುತ್ತಿರುವ ಭಕ್ತರು,
ಸಿರಿಗಿರಿಯ ಮಲ್ಲಯ್ಯನಿಗೆ ಜೈ..ಎಂದು ಜೈಕಾರ ಹಾಕುತ್ತ ಸಾಗುವುದರಿಂದ ಪ್ರತಿದಿನ ತಾವು ಕ್ರಮಿಸಿದ ದೂರ ಎಷ್ಟು ಎಂಬುದು ಗೊತ್ತಾಗುವುದೇ ಇಲ್ಲ. ಭಕ್ತಿಯ ಉನ್ಮಾದ ಹಾಗೂ ಹೊಸ ಚೈತನ್ಯದೊಂದಿಗೆ ಶ್ರೀಶೈಲ ಪಾದಯಾತ್ರೆ ಕೈಗೊಂಡವರಿಗೆ ಮಧ್ಯದಲ್ಲಿ ಹಲವು ಭಕ್ತರು ಅನ್ನ ಪ್ರಸಾದದ ವ್ಯವಸ್ಥೆ ಹಾಗು ವಸತಿ ಸೌಲಭ್ಯ ಒದಗಿಸುತ್ತಾರೆ.