<p><strong>ಕೊಲ್ಹಾರ</strong>: ತಾಲ್ಲೂಕಿನ ಕುಪಕಡ್ಡಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ(ಪಿಕೆಪಿಎಸ್) ಕಟ್ಟಡ ಹಾಗೂ ಗೋದಾಮವನ್ನು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ, ನಿರ್ದೆಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಶೇಖರ ದಳವಾಯಿ ಈಚೆಗೆ ಉದ್ಘಾಟಿಸಿದರು.</p>.<p>ರಾಜಶೇಖರ ಗುಡದಿನ್ನಿ ಮಾತನಾಡಿ, ‘ 1957ರಲ್ಲಿ ಪ್ರಾರಂಭವಾದ ಸಂಘವು ಸಂಸ್ಥಾಪಕ ಅಧ್ಯಕ್ಷ ದಿ. ಗಿರಮಲ್ಲಪಗೌಡ ಬಿರಾದಾರ ಅವರ ಆಶಯದಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಹಳ್ಳದ ಗೆಣ್ಣೂರ ಹಾಗೂ ಕುಪಕಡ್ಡಿಯ 1,270 ಸದಸ್ಯರನ್ನು ಹೊಂದಿದೆ’ ಎಂದರು.</p>.<p>‘₹32 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಜಿಲ್ಲೆಯಲ್ಲಿ 272 ಸಹಕಾರ ಸಂಘಗಳಿದ್ದು, 232 ಸಂಘಗಳು ಸ್ವಂತ ಕಟ್ಟಡ ಹೊಂದಿವೆ’ ಎಂದು ಹೇಳಿದರು.</p>.<p>ಸಾನ್ನಿಧ್ಯ ವಹಿಸಿದ್ದ ಮಹಾದೇವ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಪಿಕೆಪಿಎಸ್ ಅಧ್ಯಕ್ಷೆ ಕಸ್ತೂರಿಬಾಯಿ ಸಂಗನಗೌಡ ಬಿರಾದಾರ, ಮಾಜಿ ಅಧ್ಯಕ್ಷ ಸಿದ್ದನಗೌಡ ಬಿರಾದಾರ, ಭಾವುರಾವ ಕುಲಕರ್ಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗುರನಗೌಡ ಬಿರಾದಾರ, ತಾನಾಜಿ ನಾಗರಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ</strong>: ತಾಲ್ಲೂಕಿನ ಕುಪಕಡ್ಡಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ(ಪಿಕೆಪಿಎಸ್) ಕಟ್ಟಡ ಹಾಗೂ ಗೋದಾಮವನ್ನು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ, ನಿರ್ದೆಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಶೇಖರ ದಳವಾಯಿ ಈಚೆಗೆ ಉದ್ಘಾಟಿಸಿದರು.</p>.<p>ರಾಜಶೇಖರ ಗುಡದಿನ್ನಿ ಮಾತನಾಡಿ, ‘ 1957ರಲ್ಲಿ ಪ್ರಾರಂಭವಾದ ಸಂಘವು ಸಂಸ್ಥಾಪಕ ಅಧ್ಯಕ್ಷ ದಿ. ಗಿರಮಲ್ಲಪಗೌಡ ಬಿರಾದಾರ ಅವರ ಆಶಯದಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಹಳ್ಳದ ಗೆಣ್ಣೂರ ಹಾಗೂ ಕುಪಕಡ್ಡಿಯ 1,270 ಸದಸ್ಯರನ್ನು ಹೊಂದಿದೆ’ ಎಂದರು.</p>.<p>‘₹32 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಜಿಲ್ಲೆಯಲ್ಲಿ 272 ಸಹಕಾರ ಸಂಘಗಳಿದ್ದು, 232 ಸಂಘಗಳು ಸ್ವಂತ ಕಟ್ಟಡ ಹೊಂದಿವೆ’ ಎಂದು ಹೇಳಿದರು.</p>.<p>ಸಾನ್ನಿಧ್ಯ ವಹಿಸಿದ್ದ ಮಹಾದೇವ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಪಿಕೆಪಿಎಸ್ ಅಧ್ಯಕ್ಷೆ ಕಸ್ತೂರಿಬಾಯಿ ಸಂಗನಗೌಡ ಬಿರಾದಾರ, ಮಾಜಿ ಅಧ್ಯಕ್ಷ ಸಿದ್ದನಗೌಡ ಬಿರಾದಾರ, ಭಾವುರಾವ ಕುಲಕರ್ಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗುರನಗೌಡ ಬಿರಾದಾರ, ತಾನಾಜಿ ನಾಗರಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>