<p><strong>ವಿಜಯಪುರ:</strong> ಬಬಲೇಶ್ವರ ತಾಲ್ಲೂಕಿನ ಮಮದಾಪುರದ ಮೀಸಲು ಅರಣ್ಯ ಪ್ರದೇಶದಲ್ಲಿ ಪ್ರಾದೇಶಿಕ ಅರಣ್ಯ ಇಲಾಖೆಯಿಂದ 2024–25ನೇ ಸಾಲಿನಲ್ಲಿ 33 ಸಾವಿರ ಗಿಡ ನೆಡುವ ಕಾರ್ಯಕ್ಕೆ ಮಮದಾಪುರದ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ ಸೋಮವಾರ ಪೂಜೆ ನೆರವೇರಿಸಿ ಚಾಲನೆ ನೀಡಿದರು.</p>.<p>ಅರಣ್ಯ ಇಲಾಖೆಯು ಮಮದಾಪುರದಲ್ಲಿ ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಸಸಿಗಳನ್ನು ನೆಟ್ಟು ಬೆಳೆಸಿದ್ದು, ಇದೀಗ ಮೂರನೇ ಹಂತದಲ್ಲಿ ಮತ್ತಷ್ಟು ಗಿಡಗಳನ್ನು ನೆಡಲು ಮುಂದಾಗಿರುವ ಕಾರ್ಯ ಶ್ಲಾಘನೀಯ ಎಂದು ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಅರಣ್ಯ ನಾಶದಿಂದ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ವರ್ಷ ಎಂದೂ ಕಾಣದ ಬಿಸಿಲು ಜನರನ್ನು ಬಾಧಿಸಿದೆ. ಭವಿಷ್ಯದಲ್ಲಿ ಇದರಿಂದ ಪಾರಾಗಲು ಪ್ರತಿಯೊಬ್ಬರೂ ಎರಡೆರಡು ಸಸಿಗಳನ್ನು ನೆಟ್ಟು ಬೆಳೆಸಬೇಕು ಎಂದು ಮನವಿ ಮಾಡಿದರು. </p>.<p>ವಿಜಯಪುರ ವಲಯ ಅರಣ್ಯ ಅಧಿಕಾರಿ ಸಂತೋಷ ಆಜೂರ ಮಾತನಾಡಿ, ಮಮದಾಪುರದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಈಗಾಗಲೇ ಒಂದು ಲಕ್ಷ ಸಸಿಗಳನ್ನು ನೆಟ್ಟು, ಬೇಸಿಗೆಯಲ್ಲಿ ನೀರುಣಿಸಿ ಸಂರಕ್ಷಿಸಲಾಗಿದೆ. ಈ ವರ್ಷ 33 ಸಾವಿರ ಗಿಡ ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಭವಿಷ್ಯದಲ್ಲಿ ಮತ್ತಷ್ಟು ಗಿಡಗಳನ್ನು ನೆಟ್ಟು ಮಾದರಿ ಅರಣ್ಯವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.</p>.<p>ಅರಣ್ಯ ಪ್ರದೇಶದಲ್ಲಿ ಆಲ, ಅರಳಿ, ಹುಣಸೆ, ಅತ್ತಿ, ಬೇವು, ಹೊಂಗೆ, ಬಿದಿರು, ನೇರಳೆ ಸೇರಿದಂತೆ ವಿವಿಧ ಜಾತಿಯ ಗಿಡಗಳನ್ನು ನೆಡಲಾಗುತ್ತಿದೆ. ಈ ಗಿಡಗಳಿಗೆ ನೀರಿನ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ. ನೆಟ್ಟ ಒಂದು ಗಿಡವೂ ಸಾಯದಂತೆ ರಕ್ಷಣೆ ಮಾಡಲಾಗುವುದು ಎಂದರು. </p>.<p>ಸಚಿವರಾದ ಎಂ.ಬಿ.ಪಾಟೀಲ, ಎನ್ಟಿಪಿಸಿ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಹಕಾರ, ಪ್ರೋತ್ಸಾಹದಿಂದ ಇಷ್ಟೊಂದು ಗಿಡಗಳನ್ನು ನೆಟ್ಟು ಬೆಳೆಸಲು ಸಾಧ್ಯವಾಗಿದೆ. ಗ್ರಾಮಸ್ಥರ ಸಹಕಾರವೂ ಇರುವುದರಿಂದ ಅರಣ್ಯ ಸಮೃದ್ಧವಾಗಿ ಬೆಳೆಯುತ್ತಿದೆ ಎಂದು ಹೇಳಿದರು.</p>.<p>ಉಪ ವಲಯ ಅರಣ್ಯಾಧಿಕಾರಿ ಎ.ಎಸ್.ಬಗಲಿ, ಮಮದಾಪುರ ಬೀಟ್ ಫಾರೆಸ್ಟರ್ ಗುರು ಬಾಗೇವಾಡಿ, ಶ್ರೀಧರ ಪತ್ತಾರ, ನಡುತೋಪು ಸಿಬ್ಬಂದಿ ಸುರೇಶ, ಪ್ರಕಾಶ ಇದ್ದರು.</p>.<div><blockquote> ಸಚಿವ ಎಂ.ಬಿ.ಪಾಟೀಲ ಅವರು ಬಬಲೇಶ್ವರ ತಾಲ್ಲೂಕಿಗೆ ಮೊದಲು ನೀರು ತಂದರು ಬಳಿಕ ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. ಇದೀಗ ಅರಣ್ಯ ಬೆಳೆಸಲು ಆದ್ಯತೆ ನೀಡಿದ್ದಾರೆ. ಸಚಿವರಿಂದ ತಾಲ್ಲೂಕು ಸಮೃದ್ಧವಾಗಿದೆ </blockquote><span class="attribution">ಅಭಿನವ ಮುರುಘೇಂದ್ರ ಸ್ವಾಮೀಜಿ ವಿರಕ್ತಮಠ ಮಮದಾಪುರ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಬಬಲೇಶ್ವರ ತಾಲ್ಲೂಕಿನ ಮಮದಾಪುರದ ಮೀಸಲು ಅರಣ್ಯ ಪ್ರದೇಶದಲ್ಲಿ ಪ್ರಾದೇಶಿಕ ಅರಣ್ಯ ಇಲಾಖೆಯಿಂದ 2024–25ನೇ ಸಾಲಿನಲ್ಲಿ 33 ಸಾವಿರ ಗಿಡ ನೆಡುವ ಕಾರ್ಯಕ್ಕೆ ಮಮದಾಪುರದ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ ಸೋಮವಾರ ಪೂಜೆ ನೆರವೇರಿಸಿ ಚಾಲನೆ ನೀಡಿದರು.</p>.<p>ಅರಣ್ಯ ಇಲಾಖೆಯು ಮಮದಾಪುರದಲ್ಲಿ ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಸಸಿಗಳನ್ನು ನೆಟ್ಟು ಬೆಳೆಸಿದ್ದು, ಇದೀಗ ಮೂರನೇ ಹಂತದಲ್ಲಿ ಮತ್ತಷ್ಟು ಗಿಡಗಳನ್ನು ನೆಡಲು ಮುಂದಾಗಿರುವ ಕಾರ್ಯ ಶ್ಲಾಘನೀಯ ಎಂದು ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಅರಣ್ಯ ನಾಶದಿಂದ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ವರ್ಷ ಎಂದೂ ಕಾಣದ ಬಿಸಿಲು ಜನರನ್ನು ಬಾಧಿಸಿದೆ. ಭವಿಷ್ಯದಲ್ಲಿ ಇದರಿಂದ ಪಾರಾಗಲು ಪ್ರತಿಯೊಬ್ಬರೂ ಎರಡೆರಡು ಸಸಿಗಳನ್ನು ನೆಟ್ಟು ಬೆಳೆಸಬೇಕು ಎಂದು ಮನವಿ ಮಾಡಿದರು. </p>.<p>ವಿಜಯಪುರ ವಲಯ ಅರಣ್ಯ ಅಧಿಕಾರಿ ಸಂತೋಷ ಆಜೂರ ಮಾತನಾಡಿ, ಮಮದಾಪುರದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಈಗಾಗಲೇ ಒಂದು ಲಕ್ಷ ಸಸಿಗಳನ್ನು ನೆಟ್ಟು, ಬೇಸಿಗೆಯಲ್ಲಿ ನೀರುಣಿಸಿ ಸಂರಕ್ಷಿಸಲಾಗಿದೆ. ಈ ವರ್ಷ 33 ಸಾವಿರ ಗಿಡ ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಭವಿಷ್ಯದಲ್ಲಿ ಮತ್ತಷ್ಟು ಗಿಡಗಳನ್ನು ನೆಟ್ಟು ಮಾದರಿ ಅರಣ್ಯವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.</p>.<p>ಅರಣ್ಯ ಪ್ರದೇಶದಲ್ಲಿ ಆಲ, ಅರಳಿ, ಹುಣಸೆ, ಅತ್ತಿ, ಬೇವು, ಹೊಂಗೆ, ಬಿದಿರು, ನೇರಳೆ ಸೇರಿದಂತೆ ವಿವಿಧ ಜಾತಿಯ ಗಿಡಗಳನ್ನು ನೆಡಲಾಗುತ್ತಿದೆ. ಈ ಗಿಡಗಳಿಗೆ ನೀರಿನ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ. ನೆಟ್ಟ ಒಂದು ಗಿಡವೂ ಸಾಯದಂತೆ ರಕ್ಷಣೆ ಮಾಡಲಾಗುವುದು ಎಂದರು. </p>.<p>ಸಚಿವರಾದ ಎಂ.ಬಿ.ಪಾಟೀಲ, ಎನ್ಟಿಪಿಸಿ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಹಕಾರ, ಪ್ರೋತ್ಸಾಹದಿಂದ ಇಷ್ಟೊಂದು ಗಿಡಗಳನ್ನು ನೆಟ್ಟು ಬೆಳೆಸಲು ಸಾಧ್ಯವಾಗಿದೆ. ಗ್ರಾಮಸ್ಥರ ಸಹಕಾರವೂ ಇರುವುದರಿಂದ ಅರಣ್ಯ ಸಮೃದ್ಧವಾಗಿ ಬೆಳೆಯುತ್ತಿದೆ ಎಂದು ಹೇಳಿದರು.</p>.<p>ಉಪ ವಲಯ ಅರಣ್ಯಾಧಿಕಾರಿ ಎ.ಎಸ್.ಬಗಲಿ, ಮಮದಾಪುರ ಬೀಟ್ ಫಾರೆಸ್ಟರ್ ಗುರು ಬಾಗೇವಾಡಿ, ಶ್ರೀಧರ ಪತ್ತಾರ, ನಡುತೋಪು ಸಿಬ್ಬಂದಿ ಸುರೇಶ, ಪ್ರಕಾಶ ಇದ್ದರು.</p>.<div><blockquote> ಸಚಿವ ಎಂ.ಬಿ.ಪಾಟೀಲ ಅವರು ಬಬಲೇಶ್ವರ ತಾಲ್ಲೂಕಿಗೆ ಮೊದಲು ನೀರು ತಂದರು ಬಳಿಕ ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. ಇದೀಗ ಅರಣ್ಯ ಬೆಳೆಸಲು ಆದ್ಯತೆ ನೀಡಿದ್ದಾರೆ. ಸಚಿವರಿಂದ ತಾಲ್ಲೂಕು ಸಮೃದ್ಧವಾಗಿದೆ </blockquote><span class="attribution">ಅಭಿನವ ಮುರುಘೇಂದ್ರ ಸ್ವಾಮೀಜಿ ವಿರಕ್ತಮಠ ಮಮದಾಪುರ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>