<p><strong>ನಾಲತವಾಡ(ವಿಜಯಪುರ):</strong> ಚುಡಾಯಿಸಿ, ಕಿರುಕುಳ ನೀಡಿ, ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ್ದ ಆರೋಪಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಮಂಗಳವಾರ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.</p><p>ನಾಲತವಾಡದ ಖಾಸಗಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮತ್ತು ಅವರ ಕುಟುಂಬದವರು ಅದೇ ಪಟ್ಟಣದ ಸಂಗಮೇಶ ಜುಂಜವಾರ, ಚಿದಾನಂದ ಕಟ್ಟಿಮನಿ, ಮೌನೇಶ ಮಾದರ ವಿರುದ್ಧ ಇತ್ತೀಚೆಗೆ ಪೋಕ್ಸೊ ಪ್ರಕರಣ ದಾಖಲಿಸಿದ್ದರು.</p><p>‘ಪ್ರಕರಣ ದಾಖಲಾದ ಬಳಿಕ ವಿಚಾರಣೆ ಸಲುವಾಗಿ ಪೊಲೀಸರು ಆಗಾಗ ಮನೆಗೆ ಬಂದು ಹೋದ ಕಾರಣಕ್ಕೆ ಹಾಗೂ ವಿಷಯ ಎಲ್ಲೆಡೆ ಪ್ರಚಾರವಾದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.</p><p>‘ಶಿಕ್ಷಣ ಪಡೆಯುತ್ತಿದ್ದ ಮಗಳು ಭವಿಷ್ಯ ರೂಪಿಸಿಕೊಳ್ಳುವ ಬದಲು ಪುಡಾರಿಗಳ ಕಿರುಕುಳಕ್ಕೆ ಪ್ರಾಣ ಬಿಟ್ಟಿದ್ದಾಳೆ’ ಎಂದು ಬಾಲಕಿಯ ಪಾಲಕರು ದೂರಿದರು.</p><p><strong>ಆರೋಪಿಗಳ ಬಂಧನ: </strong>ಬಾಲಕಿಗೆ ಕಿರುಕುಳ ನೀಡಿದ ಆರೋಪಿಗಳಾದ ಸಂಗಮೇಶ ಜುಂಜವಾರ, ಚಿದಾನಂದ ಕಟ್ಟಿಮನಿ ಮತ್ತು ಬಾಲಕನೊಬ್ಬನನ್ನು ಬಂಧಿಸಲಾಗಿದೆ ಎಂದು ಸಿಪಿಐ ಮಲ್ಲಿಕಾರ್ಜುನ ತುಳಿಸಿಗೇರಿ ತಿಳಿಸಿದ್ದಾರೆ.</p><p><strong>ಗಲ್ಲಿಗೇರಿಸಲು ಆಗ್ರಹ: </strong>ಬಾಲಕಿಯ ಆತ್ಮಹತ್ಯೆಗೆ ಕಾರಣವಾಗಿರುವ ಆರೋಪಿಗಳು ಪಟ್ಟಣದಲ್ಲಿ ಇನ್ನಷ್ಟು ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿರುವ ಆರೋಪ ಇದೆ. ಹೆಣ್ಣು ಮಕ್ಕಳ ಪೋಷಕರು ಆತಂಕ ಪಡುವಂತಾಗಿದೆ. ಬಂಧಿತ ಆರೋಪಿಗೆ ಗಲ್ಲು ಶಿಕ್ಷೆಗೊಳಪಡಿಸಬೇಕು ಎಂದು ಸ್ಥಳೀಯರು ಪೊಲೀಸರನ್ನು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಲತವಾಡ(ವಿಜಯಪುರ):</strong> ಚುಡಾಯಿಸಿ, ಕಿರುಕುಳ ನೀಡಿ, ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ್ದ ಆರೋಪಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಮಂಗಳವಾರ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.</p><p>ನಾಲತವಾಡದ ಖಾಸಗಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮತ್ತು ಅವರ ಕುಟುಂಬದವರು ಅದೇ ಪಟ್ಟಣದ ಸಂಗಮೇಶ ಜುಂಜವಾರ, ಚಿದಾನಂದ ಕಟ್ಟಿಮನಿ, ಮೌನೇಶ ಮಾದರ ವಿರುದ್ಧ ಇತ್ತೀಚೆಗೆ ಪೋಕ್ಸೊ ಪ್ರಕರಣ ದಾಖಲಿಸಿದ್ದರು.</p><p>‘ಪ್ರಕರಣ ದಾಖಲಾದ ಬಳಿಕ ವಿಚಾರಣೆ ಸಲುವಾಗಿ ಪೊಲೀಸರು ಆಗಾಗ ಮನೆಗೆ ಬಂದು ಹೋದ ಕಾರಣಕ್ಕೆ ಹಾಗೂ ವಿಷಯ ಎಲ್ಲೆಡೆ ಪ್ರಚಾರವಾದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.</p><p>‘ಶಿಕ್ಷಣ ಪಡೆಯುತ್ತಿದ್ದ ಮಗಳು ಭವಿಷ್ಯ ರೂಪಿಸಿಕೊಳ್ಳುವ ಬದಲು ಪುಡಾರಿಗಳ ಕಿರುಕುಳಕ್ಕೆ ಪ್ರಾಣ ಬಿಟ್ಟಿದ್ದಾಳೆ’ ಎಂದು ಬಾಲಕಿಯ ಪಾಲಕರು ದೂರಿದರು.</p><p><strong>ಆರೋಪಿಗಳ ಬಂಧನ: </strong>ಬಾಲಕಿಗೆ ಕಿರುಕುಳ ನೀಡಿದ ಆರೋಪಿಗಳಾದ ಸಂಗಮೇಶ ಜುಂಜವಾರ, ಚಿದಾನಂದ ಕಟ್ಟಿಮನಿ ಮತ್ತು ಬಾಲಕನೊಬ್ಬನನ್ನು ಬಂಧಿಸಲಾಗಿದೆ ಎಂದು ಸಿಪಿಐ ಮಲ್ಲಿಕಾರ್ಜುನ ತುಳಿಸಿಗೇರಿ ತಿಳಿಸಿದ್ದಾರೆ.</p><p><strong>ಗಲ್ಲಿಗೇರಿಸಲು ಆಗ್ರಹ: </strong>ಬಾಲಕಿಯ ಆತ್ಮಹತ್ಯೆಗೆ ಕಾರಣವಾಗಿರುವ ಆರೋಪಿಗಳು ಪಟ್ಟಣದಲ್ಲಿ ಇನ್ನಷ್ಟು ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿರುವ ಆರೋಪ ಇದೆ. ಹೆಣ್ಣು ಮಕ್ಕಳ ಪೋಷಕರು ಆತಂಕ ಪಡುವಂತಾಗಿದೆ. ಬಂಧಿತ ಆರೋಪಿಗೆ ಗಲ್ಲು ಶಿಕ್ಷೆಗೊಳಪಡಿಸಬೇಕು ಎಂದು ಸ್ಥಳೀಯರು ಪೊಲೀಸರನ್ನು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>