<p><strong>ವಿಜಯಪುರ:</strong> ದಿನದ 24 ಗಂಟೆಯೂ ಸಾರ್ವಜನಿಕರ ರಕ್ಷಣೆಯಲ್ಲಿ ತೊಡಗಿರುವ ಪೊಲೀಸರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸುವುದು ಅತ್ಯವಶ್ಯವಾಗಿದೆ ಎಂದು ಐಆರ್ಬಿ ಪೊಲೀಸ್ ಬಟಾಲಿಯನ್ ಕಮಾಂಡೆಂಟ್ ಪ್ರಸನ್ನಕುಮಾರ ಹೇಳಿದರು.</p>.<p>ನಗರದ ಹೊರ ವಲಯದ ಅರಕೇರಿಯಲ್ಲಿ ಐಆರ್ಬಿ ಪೊಲೀಸ್ ಬಟಾಲಿಯನ್ನಲ್ಲಿ ಶುಕ್ರವಾರ ‘ಆರಕ್ಷಕರ ನಡಿಗೆ ಆರೋಗ್ಯದ ಕಡೆಗೆ’ ಎಂಬ ಘೋಷವಾಕ್ಯದಡಿಯಲ್ಲಿ ಏರ್ಪಡಿಸಿದ್ದ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಉಚಿತ ತಪಾಸಣೆ ಮತ್ತು ಔಷಧ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಆರೋಗ್ಯವನ್ನು ಲೆಕ್ಕಿಸದೇ ಸದಾ ಕರ್ತವ್ಯ ಪ್ರಜ್ಞೆಯನ್ನು ಮೆರೆಯುವ ಪೊಲೀಸರು ಇಂಥ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಹಿತಮಿತ ಆಹಾರ ಸೇವನೆಯೊಂದಿಗೆ ವಾಯುವಿಹಾರ, ಯೋಗ, ಧ್ಯಾನಗಳನ್ನೂ ರೂಢಿಸಿಕೊಳ್ಳಬೇಕು ಎಂದರು.</p>.<p>ಡಾ.ಅಮರೇಶ ಮಿಣಜಗಿ ಮಾತನಾಡಿ, ತಮ್ಮ ನೆಮ್ಮದಿಯನ್ನೂ ಲೆಕ್ಕಿಸದೇ ಸ್ವಾಸ್ಥ್ಯ ಸಮಾಜಕ್ಕಾಗಿ ಹಗಲಿರುಳು ದುಡಿಯುವ ಪೊಲೀಸರ ಸೇವೆ ಅನುಪಮವಾದುದು. ಪೊಲೀಸರ ಆರೋಗ್ಯದ ಸುರಕ್ಷತೆಗಾಗಿ ತಮ್ಮ ಸೇವೆ ನಿರಂತರವಾಗಿ ಇರಲಿದೆ ಎಂದರು.</p>.<p>ನರರೋಗ ತಜ್ಞ ಡಾ.ಹಿತೇಂದ್ರ ನಾಯಕ, ಮನೋವೈದ್ಯೆ ಡಾ.ಸೌಮ್ಯ ನಾಯಕ ಮಾತನಾಡಿದರು. </p>.<p>ಹೃದ್ರೋಗ ತಜ್ಞರಾದ ಡಾ.ದೀಪಕ್ ಕಡೇಲಿ, ಡಾ.ಶೀತಲ್ ನಾಯಕ, ಡಾ.ಈರಣ್ಣ ಬಂಡಿ, ಡಾ.ಸುರೇಶ ಕಾಗಲಕರರೆಡ್ಡಿ, ಡಾ.ಶಂಕರ ಬಡಿಗೇರ, ಡಾ.ಅಪೂರ್ವ ಮಾಗಿ, ಡಾ.ಅಶ್ವಿನಿ ಹೊಸಮನಿ, ಡಾ.ಅಕ್ಷಯ ಪಾಟೀಲ, ಬಸವರಾಜ ಮಾಗಿ, ಮೋಹನಕುಮಾರ ಶ್ರೀಕಂಡೆ, ಹುಸೇನ ಲಾಲಕೋಟ ಇದ್ದರು.</p>.<p>ಶಿಬಿರದಲ್ಲಿ 20 ಜನ ರಕ್ತದಾನ ಮಾಡಿದರು. 200ಕ್ಕೂ ಅಧಿಕ ಐಆರ್ಬಿ ಪೊಲೀಸರಿಗೆ ರಕ್ತದೊತ್ತಡ, ಮಧುಮೇಹ, ಇಸಿಜಿ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಮತ್ತಿತರ ರೋಗಗಳ ತಪಾಸಣೆ ನಡೆಸಿ ಔಷದೋಪಚಾರ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ದಿನದ 24 ಗಂಟೆಯೂ ಸಾರ್ವಜನಿಕರ ರಕ್ಷಣೆಯಲ್ಲಿ ತೊಡಗಿರುವ ಪೊಲೀಸರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸುವುದು ಅತ್ಯವಶ್ಯವಾಗಿದೆ ಎಂದು ಐಆರ್ಬಿ ಪೊಲೀಸ್ ಬಟಾಲಿಯನ್ ಕಮಾಂಡೆಂಟ್ ಪ್ರಸನ್ನಕುಮಾರ ಹೇಳಿದರು.</p>.<p>ನಗರದ ಹೊರ ವಲಯದ ಅರಕೇರಿಯಲ್ಲಿ ಐಆರ್ಬಿ ಪೊಲೀಸ್ ಬಟಾಲಿಯನ್ನಲ್ಲಿ ಶುಕ್ರವಾರ ‘ಆರಕ್ಷಕರ ನಡಿಗೆ ಆರೋಗ್ಯದ ಕಡೆಗೆ’ ಎಂಬ ಘೋಷವಾಕ್ಯದಡಿಯಲ್ಲಿ ಏರ್ಪಡಿಸಿದ್ದ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಉಚಿತ ತಪಾಸಣೆ ಮತ್ತು ಔಷಧ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಆರೋಗ್ಯವನ್ನು ಲೆಕ್ಕಿಸದೇ ಸದಾ ಕರ್ತವ್ಯ ಪ್ರಜ್ಞೆಯನ್ನು ಮೆರೆಯುವ ಪೊಲೀಸರು ಇಂಥ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಹಿತಮಿತ ಆಹಾರ ಸೇವನೆಯೊಂದಿಗೆ ವಾಯುವಿಹಾರ, ಯೋಗ, ಧ್ಯಾನಗಳನ್ನೂ ರೂಢಿಸಿಕೊಳ್ಳಬೇಕು ಎಂದರು.</p>.<p>ಡಾ.ಅಮರೇಶ ಮಿಣಜಗಿ ಮಾತನಾಡಿ, ತಮ್ಮ ನೆಮ್ಮದಿಯನ್ನೂ ಲೆಕ್ಕಿಸದೇ ಸ್ವಾಸ್ಥ್ಯ ಸಮಾಜಕ್ಕಾಗಿ ಹಗಲಿರುಳು ದುಡಿಯುವ ಪೊಲೀಸರ ಸೇವೆ ಅನುಪಮವಾದುದು. ಪೊಲೀಸರ ಆರೋಗ್ಯದ ಸುರಕ್ಷತೆಗಾಗಿ ತಮ್ಮ ಸೇವೆ ನಿರಂತರವಾಗಿ ಇರಲಿದೆ ಎಂದರು.</p>.<p>ನರರೋಗ ತಜ್ಞ ಡಾ.ಹಿತೇಂದ್ರ ನಾಯಕ, ಮನೋವೈದ್ಯೆ ಡಾ.ಸೌಮ್ಯ ನಾಯಕ ಮಾತನಾಡಿದರು. </p>.<p>ಹೃದ್ರೋಗ ತಜ್ಞರಾದ ಡಾ.ದೀಪಕ್ ಕಡೇಲಿ, ಡಾ.ಶೀತಲ್ ನಾಯಕ, ಡಾ.ಈರಣ್ಣ ಬಂಡಿ, ಡಾ.ಸುರೇಶ ಕಾಗಲಕರರೆಡ್ಡಿ, ಡಾ.ಶಂಕರ ಬಡಿಗೇರ, ಡಾ.ಅಪೂರ್ವ ಮಾಗಿ, ಡಾ.ಅಶ್ವಿನಿ ಹೊಸಮನಿ, ಡಾ.ಅಕ್ಷಯ ಪಾಟೀಲ, ಬಸವರಾಜ ಮಾಗಿ, ಮೋಹನಕುಮಾರ ಶ್ರೀಕಂಡೆ, ಹುಸೇನ ಲಾಲಕೋಟ ಇದ್ದರು.</p>.<p>ಶಿಬಿರದಲ್ಲಿ 20 ಜನ ರಕ್ತದಾನ ಮಾಡಿದರು. 200ಕ್ಕೂ ಅಧಿಕ ಐಆರ್ಬಿ ಪೊಲೀಸರಿಗೆ ರಕ್ತದೊತ್ತಡ, ಮಧುಮೇಹ, ಇಸಿಜಿ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಮತ್ತಿತರ ರೋಗಗಳ ತಪಾಸಣೆ ನಡೆಸಿ ಔಷದೋಪಚಾರ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>