ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ಸೂರ್ಯ-ಚಂದ್ರರಿಗೆ ಗ್ರಹಣ ಎದುರಾಗುತ್ತದೆ. ಅದೇ ರೀತಿ ಕಳೆದ ಚುನಾವಣೆಯಲ್ಲಿ ನನಗಾದ ಸೋಲಿನಿಂದ ಯಾರೂ ಹತಾಶರಾಗಬಾರದು. ಮುಂಬರುವ ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ಸಂಸತ್ ಚುನಾವಣೆಯಲ್ಲಿ ಪುನಃ ಗೆಲುವು ಸಾಧಿಸಲು ಈಚೆಗೆ ನಡೆದ ಗೊಳಸಂಗಿ ಗ್ರಾ.ಪಂ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಒಂದು ದಿಕ್ಸೂಚಿಯಾಗಲಿ. ಸಂಸತ್ ಚುನಾವಣೆ ಬಳಿಕ ರಾಜ್ಯದ ಗ್ಯಾರಂಟಿಗಳೆಲ್ಲ ಹಳ್ಳ ಹಿಡಿದು ಸರ್ಕಾರ ಪತನಗೊಳ್ಳುವುದು ನಿಶ್ಚಿತ’ ಎಂದರು.