‘ರಸ್ತೆ ದುರಸ್ತಿ ಮಾಡುವಂತೆ ಹತ್ತಾರು ಬಾರಿ ಹೇಳಿದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಆದರೆ, ‘ಪ್ರಜಾವಾಣಿ‘ಯಲ್ಲಿ ವರದಿ ಪ್ರಕಟವಾಗುತ್ತಿರುವಂತೆ ಎಚ್ಚೆತ್ತ ಅಧಿಕಾರಿಗಳು ತಾತ್ಕಾಲಿಕವಾಗಿಯಾದರೂ ರಸ್ತೆ ದುರಸ್ತಿ ಮಾಡಿರುವುದು ಶ್ಲಾಘನೀಯ. ಜನರ ಸಮಸ್ಯೆಗೆ ಸ್ಪಂದಿಸಿದ ಪತ್ರಿಕೆಗೆ ಅಭಿನಂದನೆಗಳು’ ಎಂದು ಗಣೇಶ ಪಾಟೀಲ, ಬಸವನ ಗೌಡ ಬಿರಾದಾರ, ರಮೇಶ ಚಿನಿವಾಲರ ತಿಳಿಸಿದರು.