ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳಿ ಮೇಲೆ ಬಿದ್ದ ವಿದ್ಯುತ್‌ ಕಂಬ; ರೈಲು ಸಂಚಾರಕ್ಕೆ ಅಡಚಣೆ

Last Updated 11 ಡಿಸೆಂಬರ್ 2020, 15:23 IST
ಅಕ್ಷರ ಗಾತ್ರ

ವಿಜಯಪುರ: ನಗರದ ರೈಲು ನಿಲ್ದಾಣದಲ್ಲಿಲಾರಿಯೊಂದು ಡಿಕ್ಕಿ ಹೊಡೆದು, ಹಳಿಗಳ ಮೇಲೆ ವಿದ್ಯುತ್‌ ಕಂಬ ಬಿದ್ದ ಪರಿಣಾಮ ಮೂರು ರೈಲುಗಳ ಸಂಚಾರಕ್ಕೆ ಅಡಚಣೆಯಾಯಿತು.

ಶುಕ್ರವಾರ ಮಧ್ಯಾಹ್ನ 3.45ಕ್ಕೆ ಈ ಅವಘಡ ಸಂಭವಿಸಿದ್ದು, ಸಂಜೆ 6.50ಕ್ಕೆ ಕಂಬವನ್ನು ತೆರವುಗೊಳಿಸಲಾಯಿತು. ಕಂಬದಲ್ಲಿ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಯಾವುದೇ ಅನಾಹುತ ನಡೆದಿಲ್ಲ.

ಈ ಅವಘಡದಿಂದಾಗಿ ಬಾಗಲಕೋಟೆ-ಮೈಸೂರು ಬಸವ ಎಕ್ಸ್‌ಪ್ರೆಸ್, ಸೊಲ್ಲಾಪುರ-ಮೈಸೂರು ಗೋಲ್‌ಗುಂಬಜ್‌ ಏಕ್ಸ್‌ಪ್ರೆಸ್, ಗದಗ-ಮುಂಬೈ ಏಕ್ಸ್‌ಪ್ರೆಸ್‌ ರೈಲುಗಳು ನಿಗದಿತ ಸಮಯಕ್ಕೆ ಸಂಚರಿಸಲು ಸಾಧ್ಯವಾಗದ ಕಾರಣ ಪ್ರಯಾಣಿಕರು ತೊಂದರೆ ಅನುಭವಿಸಿದರು.

ಸಂಜೆ 6.50ಕ್ಕೆ ಕಂಬವನ್ನು ತೆರವುಗೊಳಿಸಿದ ಬಳಿಕ ರೈಲುಗಳ ಸಂಚಾರ ಆರಂಭವಾಯಿತು ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT