ಹಳಿ ಮೇಲೆ ಬಿದ್ದ ವಿದ್ಯುತ್ ಕಂಬ; ರೈಲು ಸಂಚಾರಕ್ಕೆ ಅಡಚಣೆ

ವಿಜಯಪುರ: ನಗರದ ರೈಲು ನಿಲ್ದಾಣದಲ್ಲಿ ಲಾರಿಯೊಂದು ಡಿಕ್ಕಿ ಹೊಡೆದು, ಹಳಿಗಳ ಮೇಲೆ ವಿದ್ಯುತ್ ಕಂಬ ಬಿದ್ದ ಪರಿಣಾಮ ಮೂರು ರೈಲುಗಳ ಸಂಚಾರಕ್ಕೆ ಅಡಚಣೆಯಾಯಿತು.
ಶುಕ್ರವಾರ ಮಧ್ಯಾಹ್ನ 3.45ಕ್ಕೆ ಈ ಅವಘಡ ಸಂಭವಿಸಿದ್ದು, ಸಂಜೆ 6.50ಕ್ಕೆ ಕಂಬವನ್ನು ತೆರವುಗೊಳಿಸಲಾಯಿತು. ಕಂಬದಲ್ಲಿ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಯಾವುದೇ ಅನಾಹುತ ನಡೆದಿಲ್ಲ.
ಈ ಅವಘಡದಿಂದಾಗಿ ಬಾಗಲಕೋಟೆ-ಮೈಸೂರು ಬಸವ ಎಕ್ಸ್ಪ್ರೆಸ್, ಸೊಲ್ಲಾಪುರ-ಮೈಸೂರು ಗೋಲ್ಗುಂಬಜ್ ಏಕ್ಸ್ಪ್ರೆಸ್, ಗದಗ-ಮುಂಬೈ ಏಕ್ಸ್ಪ್ರೆಸ್ ರೈಲುಗಳು ನಿಗದಿತ ಸಮಯಕ್ಕೆ ಸಂಚರಿಸಲು ಸಾಧ್ಯವಾಗದ ಕಾರಣ ಪ್ರಯಾಣಿಕರು ತೊಂದರೆ ಅನುಭವಿಸಿದರು.
ಸಂಜೆ 6.50ಕ್ಕೆ ಕಂಬವನ್ನು ತೆರವುಗೊಳಿಸಿದ ಬಳಿಕ ರೈಲುಗಳ ಸಂಚಾರ ಆರಂಭವಾಯಿತು ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.