ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಗಳ ಚೇತರಿಕೆಗೆ ದರ್ಗಾದಲ್ಲಿ ಪ್ರಾರ್ಥನೆ

Last Updated 2 ಜನವರಿ 2023, 15:34 IST
ಅಕ್ಷರ ಗಾತ್ರ

ವಿಜಯಪುರ: ಸಿದ್ಧೇಶ್ವರ ಸ್ವಾಮೀಜಿಗಳ ಆರೋಗ್ಯ ಚೇತರಿಕೆ ಪ್ರಾರ್ಥಿಸಿ ಮುಸ್ಲಿಂ ಮುಖಂಡರು ನಗರದ ಅಬ್ದುಲ್ ರಜಾಕ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕಾಂಗ್ರೆಸ್‌ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಹಾಗೂ ಬೆಂಬಲಿಗರು ದರ್ಗಾಕ್ಕೆ ಚಾದರ ಹೊದಿಸಿ, ಸಿದ್ಧೇಶ್ವರ ಶ್ರೀಗಳ ಆರೋಗ್ಯ ಸುಧಾರಣೆ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ತಮ್ಮ ಪ್ರವಚನದ ಮೂಲಕ ಜಗತ್ತಿನಾದ್ಯಂತ ಕೋಟ್ಯಂತರ ಭಕ್ತರನ್ನು ಹೊಂದಿರುವ ಸ್ವಾಮೀಜಿಗಳು ಬೇಗ ಗುಣಮುಖರಾಗಲಿ, ಮತ್ತೆ ನಮಗೆಲ್ಲರಿಗೂ ಪ್ರವಚನ ನೀಡಲಿ, ಶತಾಯುಷಿಗಳಾಗಲಿ ಎಂದು ಅಬ್ದುಲ್ ಹಮೀದ್ ಮುಶ್ರೀಫ್ ಹೇಳಿದರು.

ಸಿದ್ಧೇಶ್ವರ ಸ್ವಾಮೀಜಿ ನಮ್ಮ ನೆಲದಲ್ಲಿ ಹುಟ್ಟಿ, ವಿಶ್ವದ ಶ್ರೇಷ್ಠ ಸಂತರಾಗಿದ್ದು, ನಮ್ಮ ಪಾಲಿನ ಭಾಗ್ಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT