<p>ವಿಜಯಪುರ: ಪೊಲೀಸರು ಜಿಲ್ಲೆಯಲ್ಲಿ ಜನಸ್ನೇಹಿಯಾಗಿ ಕಾರ್ಯನಿರ್ಹಿಸಲು ಆದ್ಯತೆ ನೀಡಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು, ಸಹಾಯ ಕೇಳಿ ಬರುವವರಿಗೆ ಅಗತ್ಯ ಪೊಲೀಸ್ ನೆರವು ನೀಡಲು ಹೆಚ್ಚು ಒತ್ತು ನೀಡುವಂತೆ ಎಲ್ಲ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.</p>.<p>ಜನರು ತಮ್ಮ ಯಾವುದೇ ಸಮಸ್ಯೆಗಳಿದ್ದರೂ, ಪೊಲೀಸ್ ಇಲಾಖೆಯಲ್ಲಿ ಕೆಲಸಗಳಿದ್ದರೆ ಮುಕ್ತವಾಗಿ ತಮ್ಮನ್ನು ಭೇಟಿಯಾಗಬಹುದು. ಕಾನೂನು ಸುವ್ಯವಸ್ಥೆ ಬಗ್ಗೆಯೂ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಅಪರಾಧ, ಅಕ್ರಮ ಚಟುವಟಿಕೆಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮಕೈಗೊಳ್ಳಲಾಗುವುದು. ಬೇರು ಸಹಿತ ಕಿತ್ತುಹಾಕಲಾಗುವುದು. ಈ ವಿಷಯದಲ್ಲಿ ಯಾರೊಂದಿಗೂ ರಾಜಿ ಇಲ್ಲ ಎಂದು ಎಚ್ಚರಿಕೆ ನೀಡಿದರು.</p>.<p class="Subhead">ಬೈಕ್ ಕಳ್ಳರ ಬಂಧನ:</p>.<p>ಬೈಕ್ ಕಳವು ಮಾಡಿ ಅವುಗಳ ನಂಬರ್ ಪ್ಲೇಟ್ ಬದಲಾಯಿಸಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರನ್ನು ಬಂಧಿಸಲಾಗಿದೆ ಎಂದು ಎಸ್.ಪಿ. ಆನಂದಕುಮಾರ್ ತಿಳಿಸಿದರು.</p>.<p>ಜೀರಂಕಲಗಿಯ ರೇವಣಸಿದ್ದ ಬಿರಾದಾರ(21) ಮತ್ತು ಇಂಡಿ ತಾಲ್ಲೂಕಿನ ಕೂಡಗಿಯ ಸುರೇಶ ಬಿರಾದಾರ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ಸುಮಾರು ₹9.30 ಲಕ್ಷ ಮೌಲ್ಯದ 20 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.</p>.<p>ಚಡಚಣ, ಝಳಕಿ, ಇಂಡಿ, ವಿಜಯಪುರ ಹಾಗೂ ಮಹಾರಾಷ್ಟ್ರದ ಕರಾಡ, ಜತ್ಗಳಲ್ಲಿ ಬೈಕ್ಗಳನ್ನು ಕಳವು ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದರು.</p>.<p>ಇಂಡಿ ಡಿಎಸ್ಪಿ ಶ್ರೀಧರ ದೊಡ್ಡಿ, ಚಡಚಣ ಸಿಪಿಐ ಎಸ್.ಎಂ.ಪಾಟೀಲ, ಚಡಚಣ ಪಿಎಸ್ಐ ಎಂ.ಎ.ಸತಿಗೌಡರ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದು, ಇವರಿಗೆ ಇಲಾಖೆಯಿಂದ ಬಹುಮಾನ ನೀಡಲಾಗುವುದು ಎಂದು ಹೇಳಿದರು.</p>.<p class="Subhead">ಜೋಡಿ ಕೊಲೆ ಆರೋಪಿಗಳ ಸೆರೆ:</p>.<p>ಕಲಕೇರಿ ಸಮೀಪದ ಸಲಾದಹಳ್ಳಿಯಲ್ಲಿ ಇತ್ತೀಚೆಗೆ ನಡೆದಿದ್ದ ಪ್ರೇಮಿಗಳಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಬಂದಗೀಸಾಬ ತಂಬದ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್.ಪಿ.ತಿಳಿಸಿದರು.</p>.<p>ಬಸವರಾಜ ಬಡಿಗೇರ(21) ಹಾಗೂ ದಾವಲಬಿ ತಂಬದ(15) ಪರಸ್ಪರ ಪ್ರೀತಿಸಿ ಮದುವೆಯಾಗಲು ತೀರ್ಮಾನಿಸಿದ್ದರು. ಇದನ್ನು ಸಹಿಸದ ಬಾಲಕಿಯ ತಂದೆ ಮತ್ತು ಸಂಬಂಧಿಕರು ಇಬ್ಬರನ್ನು ಸಲಾದಹಳ್ಳಿ ಹೊರವಲಯದಲ್ಲಿ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ್ದರು.</p>.<p>ಇಂಡಿ ಡಿಎಸ್ಪಿ ಶ್ರೀಧರ ದೊಡ್ಡಿ ನೇತೃತ್ವದ ತನಿಖಾ ತಂಡ ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಿದ್ದರು. ತಲೆ ಮರೆಸಿಕೊಂಡಿದ್ದ ಮುಖ್ಯ ಆರೋಪಿಯಾದ ಬಾಲಕಿಯ ತಂದೆ ಬಂದಗೀಸಾಬ ಕಾಶಿಂ ಸಾಬ್ ತಂಬದನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ಧಿ, ಇಂಡಿ ಡಿಎಸ್ಪಿ ಶ್ರೀಧರ ದೊಡ್ಡಿ ಮತ್ತು ಸಿಬ್ಬಂದಿ ಇದ್ದರು.</p>.<p>****</p>.<p>ಲಾಕ್ಡೌನ್ ತೆರವಾಗಿರುವುದರಿಂದ ಅಂತರರಾಜ್ಯ ಗಡಿ ಚೆಕ್ಪೋಸ್ಟ್ಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ. ತಪಾಸಣೆ ನಡೆಸಲಾಗುತ್ತಿದೆ. ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು<br />–ಎಚ್.ಡಿ.ಆನಂದಕುಮಾರ್<br />ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಜಯಪುರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಪೊಲೀಸರು ಜಿಲ್ಲೆಯಲ್ಲಿ ಜನಸ್ನೇಹಿಯಾಗಿ ಕಾರ್ಯನಿರ್ಹಿಸಲು ಆದ್ಯತೆ ನೀಡಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು, ಸಹಾಯ ಕೇಳಿ ಬರುವವರಿಗೆ ಅಗತ್ಯ ಪೊಲೀಸ್ ನೆರವು ನೀಡಲು ಹೆಚ್ಚು ಒತ್ತು ನೀಡುವಂತೆ ಎಲ್ಲ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.</p>.<p>ಜನರು ತಮ್ಮ ಯಾವುದೇ ಸಮಸ್ಯೆಗಳಿದ್ದರೂ, ಪೊಲೀಸ್ ಇಲಾಖೆಯಲ್ಲಿ ಕೆಲಸಗಳಿದ್ದರೆ ಮುಕ್ತವಾಗಿ ತಮ್ಮನ್ನು ಭೇಟಿಯಾಗಬಹುದು. ಕಾನೂನು ಸುವ್ಯವಸ್ಥೆ ಬಗ್ಗೆಯೂ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಅಪರಾಧ, ಅಕ್ರಮ ಚಟುವಟಿಕೆಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮಕೈಗೊಳ್ಳಲಾಗುವುದು. ಬೇರು ಸಹಿತ ಕಿತ್ತುಹಾಕಲಾಗುವುದು. ಈ ವಿಷಯದಲ್ಲಿ ಯಾರೊಂದಿಗೂ ರಾಜಿ ಇಲ್ಲ ಎಂದು ಎಚ್ಚರಿಕೆ ನೀಡಿದರು.</p>.<p class="Subhead">ಬೈಕ್ ಕಳ್ಳರ ಬಂಧನ:</p>.<p>ಬೈಕ್ ಕಳವು ಮಾಡಿ ಅವುಗಳ ನಂಬರ್ ಪ್ಲೇಟ್ ಬದಲಾಯಿಸಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರನ್ನು ಬಂಧಿಸಲಾಗಿದೆ ಎಂದು ಎಸ್.ಪಿ. ಆನಂದಕುಮಾರ್ ತಿಳಿಸಿದರು.</p>.<p>ಜೀರಂಕಲಗಿಯ ರೇವಣಸಿದ್ದ ಬಿರಾದಾರ(21) ಮತ್ತು ಇಂಡಿ ತಾಲ್ಲೂಕಿನ ಕೂಡಗಿಯ ಸುರೇಶ ಬಿರಾದಾರ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ಸುಮಾರು ₹9.30 ಲಕ್ಷ ಮೌಲ್ಯದ 20 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.</p>.<p>ಚಡಚಣ, ಝಳಕಿ, ಇಂಡಿ, ವಿಜಯಪುರ ಹಾಗೂ ಮಹಾರಾಷ್ಟ್ರದ ಕರಾಡ, ಜತ್ಗಳಲ್ಲಿ ಬೈಕ್ಗಳನ್ನು ಕಳವು ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದರು.</p>.<p>ಇಂಡಿ ಡಿಎಸ್ಪಿ ಶ್ರೀಧರ ದೊಡ್ಡಿ, ಚಡಚಣ ಸಿಪಿಐ ಎಸ್.ಎಂ.ಪಾಟೀಲ, ಚಡಚಣ ಪಿಎಸ್ಐ ಎಂ.ಎ.ಸತಿಗೌಡರ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದು, ಇವರಿಗೆ ಇಲಾಖೆಯಿಂದ ಬಹುಮಾನ ನೀಡಲಾಗುವುದು ಎಂದು ಹೇಳಿದರು.</p>.<p class="Subhead">ಜೋಡಿ ಕೊಲೆ ಆರೋಪಿಗಳ ಸೆರೆ:</p>.<p>ಕಲಕೇರಿ ಸಮೀಪದ ಸಲಾದಹಳ್ಳಿಯಲ್ಲಿ ಇತ್ತೀಚೆಗೆ ನಡೆದಿದ್ದ ಪ್ರೇಮಿಗಳಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಬಂದಗೀಸಾಬ ತಂಬದ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್.ಪಿ.ತಿಳಿಸಿದರು.</p>.<p>ಬಸವರಾಜ ಬಡಿಗೇರ(21) ಹಾಗೂ ದಾವಲಬಿ ತಂಬದ(15) ಪರಸ್ಪರ ಪ್ರೀತಿಸಿ ಮದುವೆಯಾಗಲು ತೀರ್ಮಾನಿಸಿದ್ದರು. ಇದನ್ನು ಸಹಿಸದ ಬಾಲಕಿಯ ತಂದೆ ಮತ್ತು ಸಂಬಂಧಿಕರು ಇಬ್ಬರನ್ನು ಸಲಾದಹಳ್ಳಿ ಹೊರವಲಯದಲ್ಲಿ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ್ದರು.</p>.<p>ಇಂಡಿ ಡಿಎಸ್ಪಿ ಶ್ರೀಧರ ದೊಡ್ಡಿ ನೇತೃತ್ವದ ತನಿಖಾ ತಂಡ ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಿದ್ದರು. ತಲೆ ಮರೆಸಿಕೊಂಡಿದ್ದ ಮುಖ್ಯ ಆರೋಪಿಯಾದ ಬಾಲಕಿಯ ತಂದೆ ಬಂದಗೀಸಾಬ ಕಾಶಿಂ ಸಾಬ್ ತಂಬದನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ಧಿ, ಇಂಡಿ ಡಿಎಸ್ಪಿ ಶ್ರೀಧರ ದೊಡ್ಡಿ ಮತ್ತು ಸಿಬ್ಬಂದಿ ಇದ್ದರು.</p>.<p>****</p>.<p>ಲಾಕ್ಡೌನ್ ತೆರವಾಗಿರುವುದರಿಂದ ಅಂತರರಾಜ್ಯ ಗಡಿ ಚೆಕ್ಪೋಸ್ಟ್ಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ. ತಪಾಸಣೆ ನಡೆಸಲಾಗುತ್ತಿದೆ. ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು<br />–ಎಚ್.ಡಿ.ಆನಂದಕುಮಾರ್<br />ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಜಯಪುರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>