<p><strong>ಸೋಲಾಪುರ</strong>: ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದಿವಾಸಿಗಳ ಸಮಸ್ಯೆ ಕುರಿತು ಸಭೆ ನಡೆಸಿದರು.</p>.<p>ಸೋಲಾಪುರದ ಅನುಸೂಚಿತ ಪಂಗಡ ಮೋರ್ಚಾದ ಪಶ್ಚಿಮ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಜ್ಞಾನೇಶ್ವರ ಭೋಸಲೆ ಹಾಗೂ ಕಾರ್ಯಕಾರಿಣಿ ಸದಸ್ಯೆ ರಾಜಶ್ರೀ ಚವ್ಹಾಣ ಅವರು ಸಭೆಯಲ್ಲಿ ಪಾಲ್ಗೊಂಡು, ವಿವಿಧ ಸಮಸ್ಯೆ ಕುರಿತು ಚರ್ಚಿಸಿದರು. </p>.<p>‘ಆದಿವಾಸಿ ಪಾರಧಿ ಸಮಾಜದವರಿಗೆ ಅಂಟಿದ ಅಪರಾಧಿ ಹಣೆಪಟ್ಟಿ ತೆಗೆದುಹಾಕಬೇಕು. ಸಮಾಜದ ಉನ್ನತಿಗಾಗಿ ಕೃಷಿ ಭೂಮಿ, ವಸತಿ, ಶಿಕ್ಷಣ ಹಾಗೂ ಉದ್ಯೋಗ ಸೌಲಭ್ಯ ನೀಡಬೇಕು. ಸಮಾಜವನ್ನು ಮುಖ್ಯವಾಹಿನಿಗೆ ತರಬೇಕು’ ಎಂದು ಒತ್ತಾಯಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರಪತಿ ಮುರ್ಮು ಅವರು, ‘ಆದಿವಾಸಿಗಳಿಗೆ ಹಕ್ಕು–ಅಧಿಕಾರ ನೀಡಿ ಮುಖ್ಯವಾಹಿನಿಗೆ ತರುವ ಪ್ರಯತ್ನಗಳು ನಡೆಯುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ನಡೆಯುವ ಸಭೆಗೆ ತಮ್ಮನ್ನು ಕರೆಯಲಾಗುವುದು’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರಿಗೆ ಸೋಲಾಪುರ ಚಾದರ ಹಾಗೂ ಶಿವಯೋಗಿ ಸಿದ್ದರಾಮೇಶ್ವರ ಮೂರ್ತಿ ನೀಡಿ ಸನ್ಮಾನಿಸಲಾಯಿತು.</p>.<p>ಸೋಲಾಪುರದ ಪ್ರತಿನಿಧಿಗಳಾದ ರಾಜಶ್ರೀ ಕಾಳೆ, ವಿಜಯಾ ಭೋಸಲೆ, ಸುದರ್ಶನ ಶಿಂಧೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಲಾಪುರ</strong>: ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದಿವಾಸಿಗಳ ಸಮಸ್ಯೆ ಕುರಿತು ಸಭೆ ನಡೆಸಿದರು.</p>.<p>ಸೋಲಾಪುರದ ಅನುಸೂಚಿತ ಪಂಗಡ ಮೋರ್ಚಾದ ಪಶ್ಚಿಮ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಜ್ಞಾನೇಶ್ವರ ಭೋಸಲೆ ಹಾಗೂ ಕಾರ್ಯಕಾರಿಣಿ ಸದಸ್ಯೆ ರಾಜಶ್ರೀ ಚವ್ಹಾಣ ಅವರು ಸಭೆಯಲ್ಲಿ ಪಾಲ್ಗೊಂಡು, ವಿವಿಧ ಸಮಸ್ಯೆ ಕುರಿತು ಚರ್ಚಿಸಿದರು. </p>.<p>‘ಆದಿವಾಸಿ ಪಾರಧಿ ಸಮಾಜದವರಿಗೆ ಅಂಟಿದ ಅಪರಾಧಿ ಹಣೆಪಟ್ಟಿ ತೆಗೆದುಹಾಕಬೇಕು. ಸಮಾಜದ ಉನ್ನತಿಗಾಗಿ ಕೃಷಿ ಭೂಮಿ, ವಸತಿ, ಶಿಕ್ಷಣ ಹಾಗೂ ಉದ್ಯೋಗ ಸೌಲಭ್ಯ ನೀಡಬೇಕು. ಸಮಾಜವನ್ನು ಮುಖ್ಯವಾಹಿನಿಗೆ ತರಬೇಕು’ ಎಂದು ಒತ್ತಾಯಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರಪತಿ ಮುರ್ಮು ಅವರು, ‘ಆದಿವಾಸಿಗಳಿಗೆ ಹಕ್ಕು–ಅಧಿಕಾರ ನೀಡಿ ಮುಖ್ಯವಾಹಿನಿಗೆ ತರುವ ಪ್ರಯತ್ನಗಳು ನಡೆಯುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ನಡೆಯುವ ಸಭೆಗೆ ತಮ್ಮನ್ನು ಕರೆಯಲಾಗುವುದು’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರಿಗೆ ಸೋಲಾಪುರ ಚಾದರ ಹಾಗೂ ಶಿವಯೋಗಿ ಸಿದ್ದರಾಮೇಶ್ವರ ಮೂರ್ತಿ ನೀಡಿ ಸನ್ಮಾನಿಸಲಾಯಿತು.</p>.<p>ಸೋಲಾಪುರದ ಪ್ರತಿನಿಧಿಗಳಾದ ರಾಜಶ್ರೀ ಕಾಳೆ, ವಿಜಯಾ ಭೋಸಲೆ, ಸುದರ್ಶನ ಶಿಂಧೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>