ಹಿಂದಿನ ಮತ್ತು ಈಗಿನ ಸರ್ಕಾರಗಳು ಅನುಸರಿಸುತ್ತಿರುವ ಜನವಿರೋಧಿ ನೀತಿಗಳಿಂದಾಗಿ ಅಗತ್ಯವಸ್ತುಗಳ ಬೆಲೆ ಏರಿಕೆ ಗಗನಕ್ಕೇರುತ್ತಿದೆ. ಜಾಗತೀಕರಣ ನೀತಿಯ ಫಲವಾಗಿ ಅಸಂಖ್ಯಾತ ಕೈಗಾರಿಕೆಗಳು ಮುಚ್ಚಿಹೋಗಿದ್ದು, ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಅಲ್ಲದೇ, ಬಿ.ಜೆ.ಪಿ ನೇತೃತ್ವದ ಕೇಂದ್ರ ಸರ್ಕಾರದ ನೋಟು ಅಮಾನ್ಯೀಕರಣ, ಜಿಎಸ್ಟಿಯಂತಹ ಅವೈಜ್ಞಾನಿಕ ತಪ್ಪು ಆರ್ಥಿಕ ನೀತಿಗಳಿಂದಾಗಿ ನಿರುದ್ಯೋಗದ ಪ್ರಮಾಣ ಮತ್ತಷ್ಟು ಉಲ್ಬಣಗೊಂಡಿದೆ ಎಂದರು.