<p><strong>ವಿಜಯಪುರ: </strong>ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ವಿಜಯಪುರ ನಗರದ ಮುಖ್ಯ ರಸ್ತೆಗಳ ಸುಧಾರಣೆ ಹಾಗೂ ನಗರ ಸೌಂದರೀಕರಣಕ್ಕೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ವಿಶೇಷ ಗಮನ ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ.ರಂದೀಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೆಹಲಿ ನಂತರ ಅತೀ ಹೆಚ್ಚು ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ವಿಜಯಪುರ ಸರ್ವಾಂಗೀಣ ಅಭಿವೃದ್ಧಿಗೆ ಗಮನ ನೀಡಬೇಕು. ವಿಶೇಷವಾಗಿ ಮುಖ್ಯ ರಸ್ತೆಗಳ ನಿರ್ಮಾಣ, ಘನ ತ್ಯಾಜ್ಯ ನಿರ್ವಹಣೆ, ಬೀದಿ ದೀಪಗಳ ಸುಧಾರಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುವ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.</p>.<p>ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಈ ನಗರ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಗೊಳ್ಳಬೇಕಾಗಿದೆ. ವಿಶೇಷವಾಗಿ ಅಥಣಿ, ಸೊಲ್ಲಾಪುರ, ಬಾಗಲಕೋಟೆ ಮತ್ತು ಸಿಂದಗಿ ಕಡೆಗೆ ಹೋಗುವಂತಹ ರಸ್ತೆಗಳು ನಗರದ ಆಂತರಿಕ ರಸ್ತೆಗಳಿಗೆ ಸಂಪರ್ಕ ಹೊಂದಿದ್ದು, ಇಂತಹ ರಸ್ತೆಗಳ ಸುಧಾರಣೆಗೆ ಗಮನ ನೀಡಬೇಕು ಎಂದರು.</p>.<p>ಅವಶ್ಯಕ ಅನುದಾನದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು. ಅದರಲ್ಲಿಯೂ ಬೃಹತ್ ಪ್ರಮಾಣದ ಮೂಲಸೌಕರ್ಯ ಕಲ್ಪಿಸುವಂತಹ ಕಾರ್ಯಗಳ ಅಡಿಯಲ್ಲಿ ಪ್ಯಾಕೇಜ್ ರೂಪದಲ್ಲಿ ಅನುದಾನ ತರಲು ಪ್ರಯತ್ನಿಸಲಾಗುವುದು. ಸರ್ಕಾರಕ್ಕೆ ಪಾಲಿಕೆಯಿಂದ ಸಲ್ಲಿಸಲಾದ ಪ್ರಸ್ತಾವನೆಗಳ ಬಗ್ಗೆಯೂ ಗಮನಕ್ಕೆ ತರಲು ಅವರು ಸೂಚನೆ ನೀಡಿದರು.</p>.<p>ಸ್ಮಾರಕಗಳ ವ್ಯಾಪ್ತಿಯಲ್ಲಿ ಅವಶ್ಯಕ ಮೂಲಸೌಲಭ್ಯಗಳನ್ನು ಕಲ್ಪಿಸುವ ಕುರಿತು ಪ್ರವಾಸೋದ್ಯಮ ಅಧಿಕಾರಿಗಳು ಕೂಡ ವಿಶೇಷ ರೀತಿಯಲ್ಲಿ ಚಿಂತನೆ ನಡೆಸಿ, ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಹ ಸಲ್ಲಿಸಬೇಕು ಎಂದರು.</p>.<p>ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆಯ ಮೂಲಕ ಅನುದಾನಕ್ಕೆ ತಾಂತ್ರಿಕ ಅನುಮೋದನೆ ಪಡೆಯಬೇಕು ಎಂದು ಹೇಳಿದರು.</p>.<p>ನಗರದ ಸ್ವಚ್ಛತೆ, ವೈಯಕ್ತಿಕ ಶೌಚಾಲಯಗಳ ಅತ್ಯುತ್ತಮ ನಿರ್ವಹಣೆ, ಘನ ತ್ಯಾಜ್ಯಗಳ ನಿರ್ವಹಣೆ ಇತರೆ ಅಭಿವೃದ್ಧಿ ಕಾರ್ಯಗಳ ಸಮರ್ಪಕ ನಿರ್ವಹಣೆಯ ಮೂಲಕ ಸುಂದರ ನಗರ ರೂಪಿಸಲು ಸಾಧ್ಯವಿದ್ದು, ಮಹಾನಗರ ಪಾಲಿಕೆ, ಪ್ರವಾಸೋದ್ಯಮ ಸೇರಿದಂತೆ ಇತರೆ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.</p>.<p>ಜಿಲ್ಲೆಯಲ್ಲಿ ಅರಣ್ಯ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿ ಅರಣ್ಯ ಭೂಮಿ ಗುರುತಿಸಲು ಪ್ರಯತ್ನಿಸಬೇಕು. ಇಕೋ ಟೂರಿಸ್ಂ ಅಭಿವೃದ್ಧಿಗೆ ಪ್ರಸ್ತಾವನೆ ಸಿದ್ಧಪಡಿಸಬೇಕು. ಅರಣ್ಯ ಅಧಿಕಾರಿಗಳು ಅರಣ್ಯೀಕರಣ ಮತ್ತು ಇಕೋ ಟೂರಿಸ್ಂ ಕುರಿತು ಪಿಪಿಟಿ ಮೂಲಕ ವರದಿ ಸಿದ್ಧಪಡಿಸಲು ಸೂಚನೆ ನೀಡಿದರು.</p>.<p>ಬುರಾಣಾಪುರದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಸಂಬಂಧಪಟ್ಟಂತೆ ಪ್ಯಾಕೇಜ್ ಒಂದರ ಕಾಮಗಾರಿಗೆ ಸಂಬಂಧಪಟ್ಟಂತೆ ಟೆಂಡರ್ ಏಜೆನ್ಸಿ ನಿಗದಿಯಾಗಿದೆ ಎಂದರು.</p>.<p>ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ ಮಾಡಲು ಈ ಹಿಂದಿನ ಏಜೆನ್ಸಿ ನಿರಾಕರಿಸುತ್ತಿರುವುದರಿಂದ ನಿಯಮಾವಳಿಯಂತೆ ಈ ಏಜೆನ್ಸಿಯನ್ನು ರದ್ದು ಪಡಿಸಿ, ಬಾಕಿ ಅನುದಾನ ವಸೂಲಾತಿ ಮಾಡಿ ನೂತನ ಟೆಂಡರ್ ಕರೆಯುವ ಬಗ್ಗೆ ಸಂಬಂಧಪಟ್ಟ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ಕ್ರೀಡಾಧಿಕಾರಿಗೆ ಸೂಚಿಸಿದರು.</p>.<p>ಭೀಮಾನದಿ ಪ್ರವಾಹ ಕುರಿತಂತೆ ಮುನ್ನೆಚ್ಚರಿಕಾ ವ್ಯವಸ್ಥೆ ಸದೃಢಗೊಳಿಸಬೇಕು. ಪರಿಹಾರಕ್ಕಾಗಿ ಮಂಜೂರಾದ ಅನುದಾನ, ಪರಿಹಾರ ನೀಡಿದ ಬಗ್ಗೆ ದಾಖಲೀಕರಣ ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು ಎಂದರು.</p>.<p>ಕೋವಿಡ್ ಹಿನ್ನೆಲೆ ಇತರೆ ಲಸಿಕಾ ಕಾರ್ಯಕ್ರಮಗಳ ಮೇಲೆ ಪರಿಣಾಮ ಆಗದಂತೆ ನಿಗಾ ವಹಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ಧಿ, ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಉಪಸ್ಥಿತರಿದ್ದರು.</p>.<p>***</p>.<p>ವಿಜಯಪುರಕ್ಕೆ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ಅಗತ್ಯವಿದೆ</p>.<p><strong>- ಡಿ.ರಂದೀಪ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ವಿಜಯಪುರ ನಗರದ ಮುಖ್ಯ ರಸ್ತೆಗಳ ಸುಧಾರಣೆ ಹಾಗೂ ನಗರ ಸೌಂದರೀಕರಣಕ್ಕೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ವಿಶೇಷ ಗಮನ ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ.ರಂದೀಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೆಹಲಿ ನಂತರ ಅತೀ ಹೆಚ್ಚು ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ವಿಜಯಪುರ ಸರ್ವಾಂಗೀಣ ಅಭಿವೃದ್ಧಿಗೆ ಗಮನ ನೀಡಬೇಕು. ವಿಶೇಷವಾಗಿ ಮುಖ್ಯ ರಸ್ತೆಗಳ ನಿರ್ಮಾಣ, ಘನ ತ್ಯಾಜ್ಯ ನಿರ್ವಹಣೆ, ಬೀದಿ ದೀಪಗಳ ಸುಧಾರಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುವ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.</p>.<p>ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಈ ನಗರ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಗೊಳ್ಳಬೇಕಾಗಿದೆ. ವಿಶೇಷವಾಗಿ ಅಥಣಿ, ಸೊಲ್ಲಾಪುರ, ಬಾಗಲಕೋಟೆ ಮತ್ತು ಸಿಂದಗಿ ಕಡೆಗೆ ಹೋಗುವಂತಹ ರಸ್ತೆಗಳು ನಗರದ ಆಂತರಿಕ ರಸ್ತೆಗಳಿಗೆ ಸಂಪರ್ಕ ಹೊಂದಿದ್ದು, ಇಂತಹ ರಸ್ತೆಗಳ ಸುಧಾರಣೆಗೆ ಗಮನ ನೀಡಬೇಕು ಎಂದರು.</p>.<p>ಅವಶ್ಯಕ ಅನುದಾನದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು. ಅದರಲ್ಲಿಯೂ ಬೃಹತ್ ಪ್ರಮಾಣದ ಮೂಲಸೌಕರ್ಯ ಕಲ್ಪಿಸುವಂತಹ ಕಾರ್ಯಗಳ ಅಡಿಯಲ್ಲಿ ಪ್ಯಾಕೇಜ್ ರೂಪದಲ್ಲಿ ಅನುದಾನ ತರಲು ಪ್ರಯತ್ನಿಸಲಾಗುವುದು. ಸರ್ಕಾರಕ್ಕೆ ಪಾಲಿಕೆಯಿಂದ ಸಲ್ಲಿಸಲಾದ ಪ್ರಸ್ತಾವನೆಗಳ ಬಗ್ಗೆಯೂ ಗಮನಕ್ಕೆ ತರಲು ಅವರು ಸೂಚನೆ ನೀಡಿದರು.</p>.<p>ಸ್ಮಾರಕಗಳ ವ್ಯಾಪ್ತಿಯಲ್ಲಿ ಅವಶ್ಯಕ ಮೂಲಸೌಲಭ್ಯಗಳನ್ನು ಕಲ್ಪಿಸುವ ಕುರಿತು ಪ್ರವಾಸೋದ್ಯಮ ಅಧಿಕಾರಿಗಳು ಕೂಡ ವಿಶೇಷ ರೀತಿಯಲ್ಲಿ ಚಿಂತನೆ ನಡೆಸಿ, ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಹ ಸಲ್ಲಿಸಬೇಕು ಎಂದರು.</p>.<p>ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆಯ ಮೂಲಕ ಅನುದಾನಕ್ಕೆ ತಾಂತ್ರಿಕ ಅನುಮೋದನೆ ಪಡೆಯಬೇಕು ಎಂದು ಹೇಳಿದರು.</p>.<p>ನಗರದ ಸ್ವಚ್ಛತೆ, ವೈಯಕ್ತಿಕ ಶೌಚಾಲಯಗಳ ಅತ್ಯುತ್ತಮ ನಿರ್ವಹಣೆ, ಘನ ತ್ಯಾಜ್ಯಗಳ ನಿರ್ವಹಣೆ ಇತರೆ ಅಭಿವೃದ್ಧಿ ಕಾರ್ಯಗಳ ಸಮರ್ಪಕ ನಿರ್ವಹಣೆಯ ಮೂಲಕ ಸುಂದರ ನಗರ ರೂಪಿಸಲು ಸಾಧ್ಯವಿದ್ದು, ಮಹಾನಗರ ಪಾಲಿಕೆ, ಪ್ರವಾಸೋದ್ಯಮ ಸೇರಿದಂತೆ ಇತರೆ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.</p>.<p>ಜಿಲ್ಲೆಯಲ್ಲಿ ಅರಣ್ಯ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿ ಅರಣ್ಯ ಭೂಮಿ ಗುರುತಿಸಲು ಪ್ರಯತ್ನಿಸಬೇಕು. ಇಕೋ ಟೂರಿಸ್ಂ ಅಭಿವೃದ್ಧಿಗೆ ಪ್ರಸ್ತಾವನೆ ಸಿದ್ಧಪಡಿಸಬೇಕು. ಅರಣ್ಯ ಅಧಿಕಾರಿಗಳು ಅರಣ್ಯೀಕರಣ ಮತ್ತು ಇಕೋ ಟೂರಿಸ್ಂ ಕುರಿತು ಪಿಪಿಟಿ ಮೂಲಕ ವರದಿ ಸಿದ್ಧಪಡಿಸಲು ಸೂಚನೆ ನೀಡಿದರು.</p>.<p>ಬುರಾಣಾಪುರದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಸಂಬಂಧಪಟ್ಟಂತೆ ಪ್ಯಾಕೇಜ್ ಒಂದರ ಕಾಮಗಾರಿಗೆ ಸಂಬಂಧಪಟ್ಟಂತೆ ಟೆಂಡರ್ ಏಜೆನ್ಸಿ ನಿಗದಿಯಾಗಿದೆ ಎಂದರು.</p>.<p>ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ ಮಾಡಲು ಈ ಹಿಂದಿನ ಏಜೆನ್ಸಿ ನಿರಾಕರಿಸುತ್ತಿರುವುದರಿಂದ ನಿಯಮಾವಳಿಯಂತೆ ಈ ಏಜೆನ್ಸಿಯನ್ನು ರದ್ದು ಪಡಿಸಿ, ಬಾಕಿ ಅನುದಾನ ವಸೂಲಾತಿ ಮಾಡಿ ನೂತನ ಟೆಂಡರ್ ಕರೆಯುವ ಬಗ್ಗೆ ಸಂಬಂಧಪಟ್ಟ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ಕ್ರೀಡಾಧಿಕಾರಿಗೆ ಸೂಚಿಸಿದರು.</p>.<p>ಭೀಮಾನದಿ ಪ್ರವಾಹ ಕುರಿತಂತೆ ಮುನ್ನೆಚ್ಚರಿಕಾ ವ್ಯವಸ್ಥೆ ಸದೃಢಗೊಳಿಸಬೇಕು. ಪರಿಹಾರಕ್ಕಾಗಿ ಮಂಜೂರಾದ ಅನುದಾನ, ಪರಿಹಾರ ನೀಡಿದ ಬಗ್ಗೆ ದಾಖಲೀಕರಣ ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು ಎಂದರು.</p>.<p>ಕೋವಿಡ್ ಹಿನ್ನೆಲೆ ಇತರೆ ಲಸಿಕಾ ಕಾರ್ಯಕ್ರಮಗಳ ಮೇಲೆ ಪರಿಣಾಮ ಆಗದಂತೆ ನಿಗಾ ವಹಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ಧಿ, ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಉಪಸ್ಥಿತರಿದ್ದರು.</p>.<p>***</p>.<p>ವಿಜಯಪುರಕ್ಕೆ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ಅಗತ್ಯವಿದೆ</p>.<p><strong>- ಡಿ.ರಂದೀಪ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>