<p>ನಾಲತವಾಡ: ಸಮೀಪದ ಬಸವಾಸಗರ ಜಲಾಶಯಕ್ಕೆ ಸೋಮವಾರ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ (ಕೆಬಿಜೆಎನ್ಎಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ಮೋಹನರಾಜ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.</p>.<p>ಜಲಾಶಯದ ಕ್ರಸ್ಟ್ಗೇಟ್ಗಳ ಕಾರ್ಯಾಚರಣೆ, ನಿರ್ವಹಣೆ, ಬೂದಿಹಾಳ–ಪೀರಾಪುರ ಏತ ನೀರಾವರಿ, ಸ್ಕಾಡಾ ಗೇಟ್ಗಳು, ಎಡದಂಡೆ ಮುಖ್ಯಕಾಲುವೆ, ಉಪಕಾಲುವೆಗಳ ಕಾರ್ಯ ನಿರ್ವಹಣೆ ಕುರಿತು ಮುಖ್ಯ ಎಂಜಿನಿಯರ್ ಆರ್. ಮಂಜುನಾಥ ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೆಲವು ವಿಷಯಗಳ ಕುರಿತು ಸಲಹೆ ನೀಡಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಲುವೆ ಅಂಚಿನ ರೈತರಿಗೆ ನೀರು ತಲುಪಿಸುವುದು ಮಹತ್ವದ ಉದ್ದೇಶವಾಗಿದೆ. ಹೀಗಾಗಿ, ಕಾಲುವೆ ಜಾಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಲಾಗುತ್ತದೆ’ ಎಂದರು.</p>.<p>‘ಕಾಮಗಾರಿಯು ಪೂರ್ಣಗೊಂಡಿದ್ದರ ಕುರಿತು ವರದಿ ಸಲ್ಲಿಸುವುದರ ಜೊತೆಗೆ ಜಲಾಶಯಕ್ಕೆ ಸಂಬಂಧಿಸಿದ ಕಾಮಗಾರಿಗಳು, ಉದ್ಯಾನ ನಿರ್ಮಿಸುವುದು ಮತ್ತು ಜಲಾಶಯದ ಭದ್ರತೆಗೆ ಧಕ್ಕೆ ಬಾರದಂತೆ ಪ್ರವಾಸೋದ್ಯಮ ಸೇರಿದಂತೆ ಇತರೆ ಇಲಾಖೆಗಳ ಸಹಯೋಗದಲ್ಲಿ ಅಣೆಕಟ್ಟು ಸುರಕ್ಷತೆಗೆ ಒತ್ತು ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತುಕೊಳ್ಳಲಾಗುವುದು’ ಎಂದು ಹೇಳಿದರು.</p>.<p>ಅಧೀಕ್ಷಕ ಎಂಜಿನಿಯರ್ ರಮೇಶ ರಾಠೋಡ, ಕಾರ್ಯನಿರ್ವಾಹಕ ಎಂಜಿನಿಯರ್ ಹಣಮಂತ ಕೊಣ್ಣೂರು, ಎಇಇಗಳಾದ ವಿದ್ಯಾಧರ, ರಾಘವೇಂದ್ರ ಕುಲಕರ್ಣಿ, ಶಂಕರ ಹಡಲಗೇರಿ, ಮಹಾಲಿಂಗಪ್ಪ ಭಜಂತ್ರಿ, ವಿಜಯಕುಮಾರ ಅರಳಿ, ಬಾಲಸುಬ್ರಮಣ್ಯಂ, ಬಾಲಚಂದ್ರ, ವಿರೇಶ, ಆರ್ಎಫ್ಒ ಯಶವಂತ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಲತವಾಡ: ಸಮೀಪದ ಬಸವಾಸಗರ ಜಲಾಶಯಕ್ಕೆ ಸೋಮವಾರ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ (ಕೆಬಿಜೆಎನ್ಎಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ಮೋಹನರಾಜ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.</p>.<p>ಜಲಾಶಯದ ಕ್ರಸ್ಟ್ಗೇಟ್ಗಳ ಕಾರ್ಯಾಚರಣೆ, ನಿರ್ವಹಣೆ, ಬೂದಿಹಾಳ–ಪೀರಾಪುರ ಏತ ನೀರಾವರಿ, ಸ್ಕಾಡಾ ಗೇಟ್ಗಳು, ಎಡದಂಡೆ ಮುಖ್ಯಕಾಲುವೆ, ಉಪಕಾಲುವೆಗಳ ಕಾರ್ಯ ನಿರ್ವಹಣೆ ಕುರಿತು ಮುಖ್ಯ ಎಂಜಿನಿಯರ್ ಆರ್. ಮಂಜುನಾಥ ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೆಲವು ವಿಷಯಗಳ ಕುರಿತು ಸಲಹೆ ನೀಡಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಲುವೆ ಅಂಚಿನ ರೈತರಿಗೆ ನೀರು ತಲುಪಿಸುವುದು ಮಹತ್ವದ ಉದ್ದೇಶವಾಗಿದೆ. ಹೀಗಾಗಿ, ಕಾಲುವೆ ಜಾಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಲಾಗುತ್ತದೆ’ ಎಂದರು.</p>.<p>‘ಕಾಮಗಾರಿಯು ಪೂರ್ಣಗೊಂಡಿದ್ದರ ಕುರಿತು ವರದಿ ಸಲ್ಲಿಸುವುದರ ಜೊತೆಗೆ ಜಲಾಶಯಕ್ಕೆ ಸಂಬಂಧಿಸಿದ ಕಾಮಗಾರಿಗಳು, ಉದ್ಯಾನ ನಿರ್ಮಿಸುವುದು ಮತ್ತು ಜಲಾಶಯದ ಭದ್ರತೆಗೆ ಧಕ್ಕೆ ಬಾರದಂತೆ ಪ್ರವಾಸೋದ್ಯಮ ಸೇರಿದಂತೆ ಇತರೆ ಇಲಾಖೆಗಳ ಸಹಯೋಗದಲ್ಲಿ ಅಣೆಕಟ್ಟು ಸುರಕ್ಷತೆಗೆ ಒತ್ತು ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತುಕೊಳ್ಳಲಾಗುವುದು’ ಎಂದು ಹೇಳಿದರು.</p>.<p>ಅಧೀಕ್ಷಕ ಎಂಜಿನಿಯರ್ ರಮೇಶ ರಾಠೋಡ, ಕಾರ್ಯನಿರ್ವಾಹಕ ಎಂಜಿನಿಯರ್ ಹಣಮಂತ ಕೊಣ್ಣೂರು, ಎಇಇಗಳಾದ ವಿದ್ಯಾಧರ, ರಾಘವೇಂದ್ರ ಕುಲಕರ್ಣಿ, ಶಂಕರ ಹಡಲಗೇರಿ, ಮಹಾಲಿಂಗಪ್ಪ ಭಜಂತ್ರಿ, ವಿಜಯಕುಮಾರ ಅರಳಿ, ಬಾಲಸುಬ್ರಮಣ್ಯಂ, ಬಾಲಚಂದ್ರ, ವಿರೇಶ, ಆರ್ಎಫ್ಒ ಯಶವಂತ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>