<p>ವಿಜಯಪುರ: ‘ಸಾಮಾನ್ಯ ಕಾರ್ಯಕರ್ತನಿಗೂ ಪಕ್ಷ ಟಿಕೆಟ್ ಕೊಟ್ಟಾಗ ಎಲ್ಲಾ ಕಾರ್ಯಕರ್ತರು ಗೆಲ್ಲಿಸಲು ಬೆನ್ನಿಗೆ ನಿಲ್ಲುತ್ತಾರೆ ಎನ್ನುವುದಕ್ಕೆ ನಾನೇ ಸಾಕ್ಷಿ’ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.</p>.<p>ಲೋಕಸಭಾ ಚುನಾವಣೆ ಅಂಗವಾಗಿ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಜರುಗಿದ ಚುನಾವಣಾ ಸಮಿತಿ ಸಭೆಯಲ್ಲಿ ಮಾತನಾಡಿದರು.</p>.<p>‘ರಾಜ್ಯ ಬೆಳಗಾವಿ, ರಾಯಚೂರು, ಬಳ್ಳಾರಿ, ಧಾರವಾಡ ಸೇರಿದಂತೆ ಬೇರೆ ವಿಭಾಗಗಳಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಮಾಡಿದಾಗಲೂ ವಿಜಯಪುರ ಜಿಲ್ಲೆಯ ಕಾರ್ಯಕರ್ತರು ಅತ್ಯಂತ ಪ್ರೀತಿ ವಿಶ್ವಾಸ ತೋರಿಸಿದ್ದಾರೆ’ ಎಂದು ತಿಳಿಸಿದರು.</p>.<p>‘ಚುನಾವಣೆ ಎದುರಿಸುವಾಗ ಅನೇಕ ಸುಲಭ ಹಾಗೂ ಕಠಿಣ ಕೆಲಸಗಳು ವಿಜಯಪುರ ಜಿಲ್ಲೆಯಿಂದಲೂ ಬಂದಿದ್ದವು. ಅದೆಲ್ಲವನ್ನು ಕಾರ್ಯಗತ ಮಾಡಿಕೊಂಡು ಹುಬ್ಬಳ್ಳಿ-ಧಾರವಾಡದಲ್ಲಿ ನನ್ನಂಥ ಸಾಮಾನ್ಯ ಕಾರ್ಯಕರ್ತನಿಗೂ ಟಿಕೆಟ್ ಕೊಡುತ್ತಾರೆಂಬುದು ಯಕ್ಷಪ್ರಶ್ನೆಯಾಗಿತ್ತು. ಆದರೆ, ಪಕ್ಷ ಕಠಿಣ ನಿರ್ಧಾರವನ್ನು ತೆಗೆದುಕೊಂಡು ಅತ್ಯಂತ ತುರುಸಿನ ಚುನಾವಣೆಯಾಗಿತ್ತು. ಅಂತಹ ಸಂದರ್ಭದಲ್ಲಿ ಇಬ್ಬರು ಮೂವರನ್ನು ಹೊರತುಪಡಿಸಿದರೆ ಬೇರೆ ಕಾರ್ಯಕರ್ತರು ಹೊರಗೆ ಹೋಗದಂತೆ ನೋಡಿಕೊಂಡಿದ್ದೆವು’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ‘ಲೋಕಸಭಾ ಚುನಾವಣೆಯನ್ನು ಅತ್ಯಂತ ಶಿಸ್ತುಬದ್ಧ ಹಾಗೂ ಯಶಸ್ವಿ ಚುನಾವಣೆ ಆಗಬೇಕು. ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಎಲ್ಲ ಕಾರ್ಯಕರ್ತರನ್ನು ಸಜ್ಜುಗೊಳಿಸಿ ಚುನಾವಣೆಯನ್ನು ಎದುರಿಸಬೇಕು’ ಎಂದು ಹೇಳಿದರು.</p>.<p>ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ವಿಜುಗೌಡ ಪಾಟೀಲ, ಸಂಜೀವ ಐಹೊಳೆ, ಪ್ರಕಾಶ ಅಕ್ಕಲಕೋಟ, ಸಾಬು ಮಾಶ್ಯಾಳ, ಸ್ವಪ್ನಾ ಕಣಮುಚನಾಳ, ಚಂದ್ರಶೇಖರ ಕವಟಗಿ, ಈರಣ್ಣ ರಾವೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ‘ಸಾಮಾನ್ಯ ಕಾರ್ಯಕರ್ತನಿಗೂ ಪಕ್ಷ ಟಿಕೆಟ್ ಕೊಟ್ಟಾಗ ಎಲ್ಲಾ ಕಾರ್ಯಕರ್ತರು ಗೆಲ್ಲಿಸಲು ಬೆನ್ನಿಗೆ ನಿಲ್ಲುತ್ತಾರೆ ಎನ್ನುವುದಕ್ಕೆ ನಾನೇ ಸಾಕ್ಷಿ’ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.</p>.<p>ಲೋಕಸಭಾ ಚುನಾವಣೆ ಅಂಗವಾಗಿ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಜರುಗಿದ ಚುನಾವಣಾ ಸಮಿತಿ ಸಭೆಯಲ್ಲಿ ಮಾತನಾಡಿದರು.</p>.<p>‘ರಾಜ್ಯ ಬೆಳಗಾವಿ, ರಾಯಚೂರು, ಬಳ್ಳಾರಿ, ಧಾರವಾಡ ಸೇರಿದಂತೆ ಬೇರೆ ವಿಭಾಗಗಳಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಮಾಡಿದಾಗಲೂ ವಿಜಯಪುರ ಜಿಲ್ಲೆಯ ಕಾರ್ಯಕರ್ತರು ಅತ್ಯಂತ ಪ್ರೀತಿ ವಿಶ್ವಾಸ ತೋರಿಸಿದ್ದಾರೆ’ ಎಂದು ತಿಳಿಸಿದರು.</p>.<p>‘ಚುನಾವಣೆ ಎದುರಿಸುವಾಗ ಅನೇಕ ಸುಲಭ ಹಾಗೂ ಕಠಿಣ ಕೆಲಸಗಳು ವಿಜಯಪುರ ಜಿಲ್ಲೆಯಿಂದಲೂ ಬಂದಿದ್ದವು. ಅದೆಲ್ಲವನ್ನು ಕಾರ್ಯಗತ ಮಾಡಿಕೊಂಡು ಹುಬ್ಬಳ್ಳಿ-ಧಾರವಾಡದಲ್ಲಿ ನನ್ನಂಥ ಸಾಮಾನ್ಯ ಕಾರ್ಯಕರ್ತನಿಗೂ ಟಿಕೆಟ್ ಕೊಡುತ್ತಾರೆಂಬುದು ಯಕ್ಷಪ್ರಶ್ನೆಯಾಗಿತ್ತು. ಆದರೆ, ಪಕ್ಷ ಕಠಿಣ ನಿರ್ಧಾರವನ್ನು ತೆಗೆದುಕೊಂಡು ಅತ್ಯಂತ ತುರುಸಿನ ಚುನಾವಣೆಯಾಗಿತ್ತು. ಅಂತಹ ಸಂದರ್ಭದಲ್ಲಿ ಇಬ್ಬರು ಮೂವರನ್ನು ಹೊರತುಪಡಿಸಿದರೆ ಬೇರೆ ಕಾರ್ಯಕರ್ತರು ಹೊರಗೆ ಹೋಗದಂತೆ ನೋಡಿಕೊಂಡಿದ್ದೆವು’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ‘ಲೋಕಸಭಾ ಚುನಾವಣೆಯನ್ನು ಅತ್ಯಂತ ಶಿಸ್ತುಬದ್ಧ ಹಾಗೂ ಯಶಸ್ವಿ ಚುನಾವಣೆ ಆಗಬೇಕು. ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಎಲ್ಲ ಕಾರ್ಯಕರ್ತರನ್ನು ಸಜ್ಜುಗೊಳಿಸಿ ಚುನಾವಣೆಯನ್ನು ಎದುರಿಸಬೇಕು’ ಎಂದು ಹೇಳಿದರು.</p>.<p>ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ವಿಜುಗೌಡ ಪಾಟೀಲ, ಸಂಜೀವ ಐಹೊಳೆ, ಪ್ರಕಾಶ ಅಕ್ಕಲಕೋಟ, ಸಾಬು ಮಾಶ್ಯಾಳ, ಸ್ವಪ್ನಾ ಕಣಮುಚನಾಳ, ಚಂದ್ರಶೇಖರ ಕವಟಗಿ, ಈರಣ್ಣ ರಾವೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>