ವಿಜಯಪುರ: ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಮಹಾರಾಷ್ಟ್ರದ ಫಂಡರಾಪುರ, ಗುಡ್ಡಾಪುರ ಹಾಗೂ ಆಂಧ್ರಪ್ರದೇಶದ ಶ್ರೀಶೈಲ ಹಾಗೂ ರಾಜ್ಯದಲ್ಲಿರುವ ಪ್ರಮುಖ ದೇವಸ್ಥಾನ, ಯಾತ್ರಾಸ್ಥಳಗಳಿಗೆ ಭೇಟಿ ನೀಡುವ ಭಕ್ತರಿಗೆ ಯಾವುದೇ ಅನಾನುಕೂಲವಾಗದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ನೂತನ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.