ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ–ಬೆಂಗಳೂರು ಮಾರ್ಗ: ಖಾಸಗಿ ಬಸ್‌ಗಳ ಅಪಘಾತ

Last Updated 12 ನವೆಂಬರ್ 2020, 17:42 IST
ಅಕ್ಷರ ಗಾತ್ರ

ವಿಜಯಪುರ: ಎರಡು ಖಾಸಗಿ ಬಸ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬಸ್ ಚಾಲಕ ಡ್ರೈವಿಂಗ್ ಸ್ಟ್ರೇರಿಂಗ್ ಅಡಿ ಸಿಲುಕಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಲಮಟ್ಟಿಯ ಬಳಿಯ ಪೆಟ್ರೋಲ್ ಬಂಕ್ ಬಳಿ ಗುರುವಾರ ರಾತ್ರಿ 9.45ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ವಿಜಯಪುರದಿಂದ ಬೆಂಗಳೂರಿಗೆ ಹೋಗುವ ಎರಡು ಖಾಸಗಿ ಬಸ್‌ಗಳ ಮಧ್ಯೆ ಈ ಘಟನೆ ನಡೆದಿದೆ. ಒಂದು ಖಾಸಗಿ ಬಸ್ ಚಲಿಸುತ್ತಿರುವಾಗ ಹಿಂಬದಿಯಿಂದ ಇನ್ನೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.

ಖಾಸಗಿ ಬಸ್ ಚಾಲಕ ಸಂತೋಷ ಸ್ಟೇರಿಂಗ್ ಅಡಿ ಸಿಲುಕಿ ಹಾಕಿಕೊಂಡಿದ್ದನ್ನು ಗಮನಿಸಿದ ಸ್ಥಳೀಯರು ಹಾಗೂ ಬಸ್ ಪ್ರಯಾಣಿಕರು ಸ್ಟೇರಿಂಗ್ ಗೆ ಹಗ್ಗ ಕಟ್ಟಿ ಎಳೆದು ಬಸ್ ಚಾಲಕನ ಪ್ರಾಣ ಕಾಪಾಡಿದ್ದಾರೆ ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.

ಸ್ಥಳಕ್ಕೆ ಆಲಮಟ್ಟಿ ಹಾಗೂ ನಿಡಗುಂದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT