ವಿಜಯಪುರ: ಎರಡು ಖಾಸಗಿ ಬಸ್ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬಸ್ ಚಾಲಕ ಡ್ರೈವಿಂಗ್ ಸ್ಟ್ರೇರಿಂಗ್ ಅಡಿ ಸಿಲುಕಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಲಮಟ್ಟಿಯ ಬಳಿಯ ಪೆಟ್ರೋಲ್ ಬಂಕ್ ಬಳಿ ಗುರುವಾರ ರಾತ್ರಿ 9.45ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
ವಿಜಯಪುರದಿಂದ ಬೆಂಗಳೂರಿಗೆ ಹೋಗುವ ಎರಡು ಖಾಸಗಿ ಬಸ್ಗಳ ಮಧ್ಯೆ ಈ ಘಟನೆ ನಡೆದಿದೆ. ಒಂದು ಖಾಸಗಿ ಬಸ್ ಚಲಿಸುತ್ತಿರುವಾಗ ಹಿಂಬದಿಯಿಂದ ಇನ್ನೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಖಾಸಗಿ ಬಸ್ ಚಾಲಕ ಸಂತೋಷ ಸ್ಟೇರಿಂಗ್ ಅಡಿ ಸಿಲುಕಿ ಹಾಕಿಕೊಂಡಿದ್ದನ್ನು ಗಮನಿಸಿದ ಸ್ಥಳೀಯರು ಹಾಗೂ ಬಸ್ ಪ್ರಯಾಣಿಕರು ಸ್ಟೇರಿಂಗ್ ಗೆ ಹಗ್ಗ ಕಟ್ಟಿ ಎಳೆದು ಬಸ್ ಚಾಲಕನ ಪ್ರಾಣ ಕಾಪಾಡಿದ್ದಾರೆ ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.
ಸ್ಥಳಕ್ಕೆ ಆಲಮಟ್ಟಿ ಹಾಗೂ ನಿಡಗುಂದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.