<p><strong>ವಿಜಯಪುರ</strong>: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ(ಆರ್ಸಿಯುಬಿ)ದ ವಿಜಯಪುರ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಎಲ್.ಎನ್. ಮೂರ್ತಿ ಅವರನ್ನು ಅಮಾನತುಗೊಳಿಸಲಾಗಿದೆ.</p><p>ಸಂಶೋಧನಾ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಅವರ ವಿರುದ್ಧದ ಪ್ರಾಥಮಿಕ ಸಾಕ್ಷ್ಯಗಳು ನಿಜವೆಂದು ಕಂಡುಬಂದಿದೆ.</p><p>‘ಪ್ರೊ. ಮೂರ್ತಿ ತನಗೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ’ ಎಂದು ಸಂಶೋಧನಾ ವಿದ್ಯಾರ್ಥಿನಿಯೊಬ್ಬರು 2024ರ ನವೆಂಬರ್ 4 ರಂದು ಕುಲಪತಿ ಮತ್ತು ಕುಲಸಚಿವರ ಮುಂದೆ ಮೌಖಿಕ ದೂರು ನೀಡಿದ್ದರು. ಲಿಖಿತ ದೂರು ಮತ್ತು ಸಾಕ್ಷ್ಯಗಳನ್ನು ಸಲ್ಲಿಸಲು ಅವರಿಗೆ ಏಳು ದಿನಗಳ ಕಾಲಾವಕಾಶ ನೀಡಲಾಗಿತ್ತು. ದೂರುದಾರರು ಕೈಬರಹದ ದೂರು ನೀಡಿ ರಿಜಿಸ್ಟ್ರಾರ್ ಮುಂದೆ ಸಾಕ್ಷ್ಯಗಳನ್ನು ಹಾಜರುಪಡಿಸಿದ್ದರು.</p><p>ವಿಶ್ವವಿದ್ಯಾಲಯದ ಆಂತರಿಕ ಕುಂದುಕೊರತೆ ಪರಿಹಾರ ಸಮಿತಿಯು ಸಂಶೋಧನಾ ವಿದ್ಯಾರ್ಥಿನಿ ನೀಡಿದ ದೂರಿನ ವಿಚಾರಣೆ ನಡೆಸಿ ಜುಲೈ 14 ರಂದು ರಿಜಿಸ್ಟ್ರಾರ್ಗೆ ವರದಿ ಸಲ್ಲಿಸಿತು.</p><p>ವರದಿಯಲ್ಲಿ, ಪ್ರೊ. ಮೂರ್ತಿ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿರುವುದು ಹಾಗೂ ಸಂಶೋಧನಾ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಆರೋಪಗಳು ಮೇಲ್ನೋಟಕ್ಕೆ ನಿಜವೆಂದು ಕಂಡುಬಂದ ಕಾರಣ, ರಿಜಿಸ್ಟ್ರಾರ್ ಸಂತೋಷ್ ಕಾಮಗೌಡ ಅವರು ಪ್ರೊಫೆಸರ್ ಮೂರ್ತಿ ಅವರನ್ನು ಅಮಾನತುಗೊಳಿಸಿದ್ದಾರೆ.</p><p>ಸಕ್ಷಮ ಪ್ರಾಧಿಕಾರದ ಅನುಮತಿಯೊಂದಿಗೆ ಅಮಾನತು ಅವಧಿಯಲ್ಲಿ ಮೂರ್ತಿ ಅವರನ್ನು ಪ್ರಧಾನ ಕಚೇರಿಯಿಂದ ಹೊರಹೋಗದಂತೆ ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ(ಆರ್ಸಿಯುಬಿ)ದ ವಿಜಯಪುರ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಎಲ್.ಎನ್. ಮೂರ್ತಿ ಅವರನ್ನು ಅಮಾನತುಗೊಳಿಸಲಾಗಿದೆ.</p><p>ಸಂಶೋಧನಾ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಅವರ ವಿರುದ್ಧದ ಪ್ರಾಥಮಿಕ ಸಾಕ್ಷ್ಯಗಳು ನಿಜವೆಂದು ಕಂಡುಬಂದಿದೆ.</p><p>‘ಪ್ರೊ. ಮೂರ್ತಿ ತನಗೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ’ ಎಂದು ಸಂಶೋಧನಾ ವಿದ್ಯಾರ್ಥಿನಿಯೊಬ್ಬರು 2024ರ ನವೆಂಬರ್ 4 ರಂದು ಕುಲಪತಿ ಮತ್ತು ಕುಲಸಚಿವರ ಮುಂದೆ ಮೌಖಿಕ ದೂರು ನೀಡಿದ್ದರು. ಲಿಖಿತ ದೂರು ಮತ್ತು ಸಾಕ್ಷ್ಯಗಳನ್ನು ಸಲ್ಲಿಸಲು ಅವರಿಗೆ ಏಳು ದಿನಗಳ ಕಾಲಾವಕಾಶ ನೀಡಲಾಗಿತ್ತು. ದೂರುದಾರರು ಕೈಬರಹದ ದೂರು ನೀಡಿ ರಿಜಿಸ್ಟ್ರಾರ್ ಮುಂದೆ ಸಾಕ್ಷ್ಯಗಳನ್ನು ಹಾಜರುಪಡಿಸಿದ್ದರು.</p><p>ವಿಶ್ವವಿದ್ಯಾಲಯದ ಆಂತರಿಕ ಕುಂದುಕೊರತೆ ಪರಿಹಾರ ಸಮಿತಿಯು ಸಂಶೋಧನಾ ವಿದ್ಯಾರ್ಥಿನಿ ನೀಡಿದ ದೂರಿನ ವಿಚಾರಣೆ ನಡೆಸಿ ಜುಲೈ 14 ರಂದು ರಿಜಿಸ್ಟ್ರಾರ್ಗೆ ವರದಿ ಸಲ್ಲಿಸಿತು.</p><p>ವರದಿಯಲ್ಲಿ, ಪ್ರೊ. ಮೂರ್ತಿ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿರುವುದು ಹಾಗೂ ಸಂಶೋಧನಾ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಆರೋಪಗಳು ಮೇಲ್ನೋಟಕ್ಕೆ ನಿಜವೆಂದು ಕಂಡುಬಂದ ಕಾರಣ, ರಿಜಿಸ್ಟ್ರಾರ್ ಸಂತೋಷ್ ಕಾಮಗೌಡ ಅವರು ಪ್ರೊಫೆಸರ್ ಮೂರ್ತಿ ಅವರನ್ನು ಅಮಾನತುಗೊಳಿಸಿದ್ದಾರೆ.</p><p>ಸಕ್ಷಮ ಪ್ರಾಧಿಕಾರದ ಅನುಮತಿಯೊಂದಿಗೆ ಅಮಾನತು ಅವಧಿಯಲ್ಲಿ ಮೂರ್ತಿ ಅವರನ್ನು ಪ್ರಧಾನ ಕಚೇರಿಯಿಂದ ಹೊರಹೋಗದಂತೆ ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>