<p>ವಿಜಯಪುರ: ಸಿಂದಗಿ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕಾಗಿ ಮುದ್ರಿಸುವ ಪಾಂಪ್ಲೆಟ್ ಮತ್ತು ಪೋಸ್ಟರ್ಗಳ ಬಗ್ಗೆ ಕಡ್ಡಾಯವಾಗಿ ಘೋಷಣಾ ಪತ್ರ ಸಲ್ಲಿಸುವಂತೆ ಮುದ್ರಕರಿಗೆ ಜಿಲ್ಲಾಧಿಕಾರಿ ಪಿ ಸುನೀಲ್ ಕುಮಾರ್ ಸೂಚಿಸಿದರು.</p>.<p>ವಿಜಯಪುರ ನಗರದ ವಿವಿಧ ಮುದ್ರಣಾಲಯದ ಮುದ್ರಕರೊಂದಿಗೆ ಸಭೆ ನಡೆಸಿದ ಅವರು, ಚುನಾವಣಾ ಪ್ರಚಾರಕ್ಕಾಗಿ ಮುದ್ರಿಸುವ ಪಾಂಪ್ಲೆಟ್ ಪೋಸ್ಟರ್ಗಳಿಗೆ ಕಡ್ಡಾಯವಾಗಿ ಮುದ್ರಕರ ಹೆಸರು, ವಿಳಾಸ ಹಾಗೂ ಪ್ರಕಟಿಸುವ ಪಾಂಪ್ಲೆಟ್ ಹಾಗೂ ಪೋಸ್ಟರ್ ಗಳ ಸಂಖ್ಯೆಯನ್ನು ನಮೂದಿಸಬೇಕು ಎಂದರು.</p>.<p>ಸಿಂದಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುದ್ರಕರು, ವಿವಿಧ ತಾಲ್ಲೂಕುಗಳ ಮುದ್ರಕರು ಮತ್ತು ಜಿಲ್ಲೆಗೆ ಹೊಂದಿಕೊಂಡಿರುವ ಮುದ್ರಣಾಲಯದ ಮುದ್ರಕರು ಸಹ ಚುನಾವಣಾ ಆಯೋಗದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಡಾ. ಔದ್ರಾಮ್ ಸೇರಿದಂತೆ ವಿವಿಧ ಮುದ್ರಣಾಲಯಗಳ ಮುದ್ರಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಸಿಂದಗಿ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕಾಗಿ ಮುದ್ರಿಸುವ ಪಾಂಪ್ಲೆಟ್ ಮತ್ತು ಪೋಸ್ಟರ್ಗಳ ಬಗ್ಗೆ ಕಡ್ಡಾಯವಾಗಿ ಘೋಷಣಾ ಪತ್ರ ಸಲ್ಲಿಸುವಂತೆ ಮುದ್ರಕರಿಗೆ ಜಿಲ್ಲಾಧಿಕಾರಿ ಪಿ ಸುನೀಲ್ ಕುಮಾರ್ ಸೂಚಿಸಿದರು.</p>.<p>ವಿಜಯಪುರ ನಗರದ ವಿವಿಧ ಮುದ್ರಣಾಲಯದ ಮುದ್ರಕರೊಂದಿಗೆ ಸಭೆ ನಡೆಸಿದ ಅವರು, ಚುನಾವಣಾ ಪ್ರಚಾರಕ್ಕಾಗಿ ಮುದ್ರಿಸುವ ಪಾಂಪ್ಲೆಟ್ ಪೋಸ್ಟರ್ಗಳಿಗೆ ಕಡ್ಡಾಯವಾಗಿ ಮುದ್ರಕರ ಹೆಸರು, ವಿಳಾಸ ಹಾಗೂ ಪ್ರಕಟಿಸುವ ಪಾಂಪ್ಲೆಟ್ ಹಾಗೂ ಪೋಸ್ಟರ್ ಗಳ ಸಂಖ್ಯೆಯನ್ನು ನಮೂದಿಸಬೇಕು ಎಂದರು.</p>.<p>ಸಿಂದಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುದ್ರಕರು, ವಿವಿಧ ತಾಲ್ಲೂಕುಗಳ ಮುದ್ರಕರು ಮತ್ತು ಜಿಲ್ಲೆಗೆ ಹೊಂದಿಕೊಂಡಿರುವ ಮುದ್ರಣಾಲಯದ ಮುದ್ರಕರು ಸಹ ಚುನಾವಣಾ ಆಯೋಗದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಡಾ. ಔದ್ರಾಮ್ ಸೇರಿದಂತೆ ವಿವಿಧ ಮುದ್ರಣಾಲಯಗಳ ಮುದ್ರಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>