ಸೋಮವಾರ, 5 ಜನವರಿ 2026
×
ADVERTISEMENT
ADVERTISEMENT

ವೈದ್ಯಕೀಯ ಕಾಲೇಜು|ವಿಜಯಪುರ, ಧಾರವಾಡ, ಮೈಸೂರಿನಲ್ಲೂ ಪ್ರತಿಭಟನೆ, ವ್ಯಾಪಕ ಬೆಂಬಲ

Published : 4 ಜನವರಿ 2026, 3:10 IST
Last Updated : 4 ಜನವರಿ 2026, 3:10 IST
ಫಾಲೋ ಮಾಡಿ
Comments
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸ್ವರಾಜ್ಯ ಸೇನೆ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್‌ಗೆ ಮನವಿ ಸಲ್ಲಿಸಿದರು 
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸ್ವರಾಜ್ಯ ಸೇನೆ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್‌ಗೆ ಮನವಿ ಸಲ್ಲಿಸಿದರು 
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಅಂಗವಿಕಲರ ಪಾಲಕರ ಒಕ್ಕೂಟದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್‌ಗೆ ಮನವಿ ಸಲ್ಲಿಸಿದರು
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಅಂಗವಿಕಲರ ಪಾಲಕರ ಒಕ್ಕೂಟದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್‌ಗೆ ಮನವಿ ಸಲ್ಲಿಸಿದರು
ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಬಗ್ಗೆ ಕೂಡಲೇ ಸರ್ಕಾರ ಸ್ಪಂದಿಸಬೇಕು. ಬಂಧಿತ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಪ್ರಕರಣ ರದ್ದು ಗೊಳಿಸಬೇಕು  ಎನ್.
ರವಿಕುಮಾರ್ ವಿಧಾನ ಪರಿಷತ್ ವಿರೋಧ ಪಕ್ಷ ಮುಖ್ಯ ಸಚೇತಕ   
ಹೋರಾಟಗಾರರ ಕೂದಲು ಕೊಂಕಾಗದಂತೆ ನೋಡಿಕೊಳ್ಳಿ ಅವರನ್ನು ತಕ್ಷಣ ಬಿಡುಗಡೆ ಮಾಡಿ ಅವರ ಮೇಲಿನ ಕೇಸು ವಾಪಸ್ಸು ಪಡೆಯಿರಿ. ಇಲ್ಲದಿದ್ದರೆ ಪ್ರತಿಭಟನೆಯ ಕಿಚ್ಚು ವ್ಯಾಪಿಸಲಿದೆ
ಜಿ.ಬಿ.ಪಾಟೀಲ ಜನಪರ ಹೋರಾಟಗಾರ
ಸಂವಿಧಾನ ವಿರೋಧಿ ನಡೆ: ರವಿಕುಮಾರ್
ಬೆಂಗಳೂರು: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ 107 ದಿನಗಳಿಂದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಮೇಲೆ ದೂರು ದಾಖಲಿಸಿರುವುದು ಹಾಗೂ ರಾತ್ರೋರಾತ್ರಿ ಪ್ರತಿಭಟನಾ ಸ್ಥಳದ ಪೆಂಡಾಲ್ ತೆಗೆದಿರುವುದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ನ್ಯಾಯಕ್ಕಾಗಿ ಯಾರೂ ಕೂಡ ಪ್ರತಿಭಟನೆ ಮಾಡಬಾರದು ಮಾಡಿದರೆ ಈ ಸರ್ಕಾರ ಅವರನ್ನು ಟಾರ್ಗೆಟ್ ಮಾಡಿ ಅವರ ಮೇಲೆ ದೂರು ದಾಖಲಿಸಿ ಬಂಧಿಸುತ್ತಿರುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ಇದು ಪ್ರತಿಭಟನೆಯನ್ನು ಹತ್ತಿಕ್ಕುವ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ. ಇದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT