<p><strong>ಮುದ್ದೇಬಿಹಾಳ:</strong> ನಾಲತವಾಡ ಸಮುದಾಯ ಆರೋಗ್ಯಕೇಂದ್ರದಲ್ಲಿ ಮೂರು ತಿಂಗಳಿನಿಂದ ಒಳ್ಳೆಯ ಸೇವೆ ನೀಡುತ್ತಿದ್ದ ವೈದ್ಯ ರಂಗನಾಥ ಅವರನ್ನು ವರ್ಗಾವಣೆ ಮಾಡಿರುವ ಕ್ರಮವನ್ನು ವಿರೋಧಿಸಿ ನವ ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆ ಪದಾಧಿಕಾರಿಗಳು ಪಟ್ಟಣದ ತಾಲ್ಲೂಕು ಆರೋಗ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ನಾಲತವಾಡ ಪಟ್ಟಣದಿಂದ ಮುದ್ದೇಬಿಹಾಳಕ್ಕೆ ಬಂದು ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ವೇದಿಕೆ ಅಧ್ಯಕ್ಷ ಮೈಬೂಬ ಕುಳಗೇರಿ, ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಗೆ ವೈದ್ಯರು ಬರುವುದಕ್ಕೆ ಹಿಂದೇಟು ಹಾಕುತ್ತಾರೆ. ಇಂತಹ ಸಮಯದಲ್ಲಿ ಡಾ.ರಂಗನಾಥ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದರು.</p>.<p>ಆರೋಗ್ಯ ಇಲಾಖೆ ಸಿಬ್ಬಂದಿ ಎಂ.ಪಿ.ಹಿಂಗೋಲೆ ಮನವಿ ಪತ್ರ ಸ್ವೀಕರಿಸಿದರು. ವೇದಿಕೆಯ ಕಾರ್ಯಕರ್ತರಾದ ಮಹಿಬೂಬ್ ಕುಳಗೇರಿ, ಯಲ್ಲಪ್ಪ ಮುದ್ದೇಬಿಹಾಳ, ಗೊಲ್ಲರ, ರಾಜು, ಅಶೋಕ ಆಲಮೇಲ, ರಾಜು ಮನಗೂಳಿ, ರವಿ ದೇವರಹಿಪ್ಪರಗಿ, ರಾಮು ಕುಂಟೋಜಿ, ಆಕಾಶ ಹೂವಿನಹಿಪ್ಪರಗಿ, ಸಂತೋಷ ಹುಣಸಗಿ ಭಾಗವಹಿಸಿದ್ದರು.</p>.<p>ವೈದ್ಯರ ವರ್ಗಾವಣೆ ಮಾಡಬಾರದು ಎಂದು ಯುವಜನ ಸೇನೆ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ವಾಲಿ, ನಾಲತವಾಡ ವಲಯ ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ರಫೀಕ್ ತೆಗ್ಗಿನಮನಿ ಕೂಡಾ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ:</strong> ನಾಲತವಾಡ ಸಮುದಾಯ ಆರೋಗ್ಯಕೇಂದ್ರದಲ್ಲಿ ಮೂರು ತಿಂಗಳಿನಿಂದ ಒಳ್ಳೆಯ ಸೇವೆ ನೀಡುತ್ತಿದ್ದ ವೈದ್ಯ ರಂಗನಾಥ ಅವರನ್ನು ವರ್ಗಾವಣೆ ಮಾಡಿರುವ ಕ್ರಮವನ್ನು ವಿರೋಧಿಸಿ ನವ ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆ ಪದಾಧಿಕಾರಿಗಳು ಪಟ್ಟಣದ ತಾಲ್ಲೂಕು ಆರೋಗ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ನಾಲತವಾಡ ಪಟ್ಟಣದಿಂದ ಮುದ್ದೇಬಿಹಾಳಕ್ಕೆ ಬಂದು ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ವೇದಿಕೆ ಅಧ್ಯಕ್ಷ ಮೈಬೂಬ ಕುಳಗೇರಿ, ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಗೆ ವೈದ್ಯರು ಬರುವುದಕ್ಕೆ ಹಿಂದೇಟು ಹಾಕುತ್ತಾರೆ. ಇಂತಹ ಸಮಯದಲ್ಲಿ ಡಾ.ರಂಗನಾಥ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದರು.</p>.<p>ಆರೋಗ್ಯ ಇಲಾಖೆ ಸಿಬ್ಬಂದಿ ಎಂ.ಪಿ.ಹಿಂಗೋಲೆ ಮನವಿ ಪತ್ರ ಸ್ವೀಕರಿಸಿದರು. ವೇದಿಕೆಯ ಕಾರ್ಯಕರ್ತರಾದ ಮಹಿಬೂಬ್ ಕುಳಗೇರಿ, ಯಲ್ಲಪ್ಪ ಮುದ್ದೇಬಿಹಾಳ, ಗೊಲ್ಲರ, ರಾಜು, ಅಶೋಕ ಆಲಮೇಲ, ರಾಜು ಮನಗೂಳಿ, ರವಿ ದೇವರಹಿಪ್ಪರಗಿ, ರಾಮು ಕುಂಟೋಜಿ, ಆಕಾಶ ಹೂವಿನಹಿಪ್ಪರಗಿ, ಸಂತೋಷ ಹುಣಸಗಿ ಭಾಗವಹಿಸಿದ್ದರು.</p>.<p>ವೈದ್ಯರ ವರ್ಗಾವಣೆ ಮಾಡಬಾರದು ಎಂದು ಯುವಜನ ಸೇನೆ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ವಾಲಿ, ನಾಲತವಾಡ ವಲಯ ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ರಫೀಕ್ ತೆಗ್ಗಿನಮನಿ ಕೂಡಾ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>