<p><strong>ವಿಜಯಪುರ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನೌಕರರ ಸಂಘ, ಸಿ.ಐ.ಟಿ.ಯು. ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪತ್ರಿಭಟನೆ ನಡೆಸಲಾಯಿತು.</p>.<p>ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸುನಂದಾ ಬಿ. ನಾಯಕ,2018ರ ಸೆಪ್ಟೆಂಬರ್ನಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರಿಗೆ ₹2 ಸಾವಿರ ಗೌರವಧನವನ್ನು ಹೆಚ್ಚಿಗೆ ಮಾಡಿದ್ದರು. ಈ ಹಣವನ್ನು ಎಲ್ಲ ಜಿಲ್ಲೆಗಳಲ್ಲಿ ನೀಡಿದ್ದಾರೆ. ಆದರೆ, ವಿಜಯಪುರ ಜಿಲ್ಲೆಯಲ್ಲಿ ಹೆಚ್ಚುವರಿ ಗೌರವಧನ ನೀಡಿಲ್ಲ ಎಂದು ಹೇಳಿದರು.</p>.<p>ಮಾತೃಪೂರ್ಣ ಯೋಜನೆ ಪ್ರೋತ್ಸಾಹ ಧನ ₹ 500, ಸಹಾಯಕಿಯರಿಗೆ ₹ 250 ಎಲ್ಲ ಜಿಲ್ಲೆಯಲ್ಲಿ ಕೊಟ್ಟಿದ್ದಾರೆ. ಆದರೆ, ನಮ್ಮ ಜಿಲ್ಲೆಯಲ್ಲಿ ಕೊಟ್ಟಿಲ್ಲ. ಅಂಗನವಾಡಿ ಕೇಂದ್ರಗಳಲ್ಲಿ ಸರಿಯಾದ ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯಗಳು ಸಮರ್ಪಕವಾಗಿಲ್ಲ. ವಿದ್ಯುತ್ ಸಂಪರ್ಕ ಇದ್ದರೂ ಕೂಡ ಕರೆಂಟ್ ಇರುವುದಿಲ್ಲ ಎಂದು ದೂರಿದರು.</p>.<p>ಗ್ರಾಮೀಣ ವಲಯಗಳಲ್ಲಿ ಅಂಗನವಾಡಿ ಕೇಂದ್ರಕ್ಕೆ ಬಾಡಿಗೆ ಹಣ ಕಚೇರಿಯಿಂದ ಕೊಡುತ್ತಿಲ್ಲ, ಅಂಗನವಾಡಿ ಕಾರ್ಯಕರ್ತೆಯರು ಕೈಯಿಂದ ಬಾಡಿಗೆ ತುಂಬುತ್ತಿದ್ದಾರೆ. ಪ್ರತಿ ತಿಂಗಳು 5ನೇ ತಾರೀಖಿನ ಒಳಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕರಿಗೆ ಗೌರವಧನ ನೀಡಬೇಕು. ಕೆಲವೊಂದು ತಾಲ್ಲೂಕುಗಳಲ್ಲಿ 3-4 ತಿಂಗಳಿಂದ ಗೌರವಧನ ಕೊಟ್ಟಿರುವದಿಲ್ಲ ಎಂದು ಆರೋಪಿಸಿದರು.</p>.<p>ಸರ್ಕಾರದ ನಿಯಮಾವಳಿ ಪ್ರಕಾರ ಒಬ್ಬ ಮೇಲ್ವಿಚಾರಕಿ ಒಂದು ವಲಯದಲ್ಲಿ ಕೇವಲ ಆರು ತಿಂಗಳು ಮಾತ್ರ ಕೆಲಸ ಮಾಡಬೇಕು. ನಂತರ ಬೇರೆ ವಲಯಕ್ಕೆ ಹೋಗಬೇಕು. ಒಬ್ಬ ಮೇಲ್ವಿವಿಚಾರಕಿ ಒಂದು ತಾಲ್ಲೂಕಿನಲ್ಲಿ 3 ವರ್ಷಗಳ ಮಾತ್ರ ಇರಬೇಕು. ಆದರೆ, ಕೆಲವೊಂದು ಮೇಲ್ವಚಾರಿಕಿಯರು 9-10 ವರ್ಷಗಳಿಂದ ಒಂದೇ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಮೇಲ್ವಿಚಾರಕಿಯರು ಅಂಗನವಾಡಿ ಕಾರ್ಯಕರ್ತೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದಾರೆ ಎಂದು ಹೇಳಿದರು.</p>.<p>ರಾಜ್ಯ ಉಪಾಧ್ಯಕ್ಷೆ ಭಾರತಿ ವಾಲಿ, ಗೌರವಾಧ್ಯಕ್ಷ ಸರಸ್ವತಿ ಮಠ, ಸಂಘಟನಾ ಕಾರ್ಯದರ್ಶಿ ಅಶ್ವಿನಿ ತಳವಾರ, ಜಯಶ್ರೀ ಪೂಜಾರಿ, ಗೀತಾ ನಾಯಕ, ಆರತಿ ಜನಕಾರ, ಸರೋಜನಿ ಸಿಂಪಿಗೇರ, ಶೋಭಾ ಕಬಾಡೆ, ದಾನಮ್ಮ ಗುಗ್ಗರೆ ಇದ್ದರು.</p>.<p>---</p>.<p>ಅಂಗನವಾಡಿ ಕೇಂದ್ರಗಳಲ್ಲಿ ವಿತರಣೆ ಮಾಡುವ ಮೊಟ್ಟೆಯ ಹಣವನ್ನು ಮೊದಲು ಅಂಗನವಾಡಿ ಕಾರ್ಯಕರ್ತೆಯರೇ ಖರೀದಿಸಬೇಕಾಗಿದೆ. ಆದ್ದರಿಂದ ಮುಂಗಡವಾಗಿ ಮೊಟ್ಟೆಯ ಹಣವನ್ನು ಪಾವತಿಸಬೇಕು<br />- ಸುನಂದಾ ಬಿ. ನಾಯಕ,ಅಧ್ಯಕ್ಷೆ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನೌಕರರ ಸಂಘ, ಸಿ.ಐ.ಟಿ.ಯು. ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪತ್ರಿಭಟನೆ ನಡೆಸಲಾಯಿತು.</p>.<p>ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸುನಂದಾ ಬಿ. ನಾಯಕ,2018ರ ಸೆಪ್ಟೆಂಬರ್ನಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರಿಗೆ ₹2 ಸಾವಿರ ಗೌರವಧನವನ್ನು ಹೆಚ್ಚಿಗೆ ಮಾಡಿದ್ದರು. ಈ ಹಣವನ್ನು ಎಲ್ಲ ಜಿಲ್ಲೆಗಳಲ್ಲಿ ನೀಡಿದ್ದಾರೆ. ಆದರೆ, ವಿಜಯಪುರ ಜಿಲ್ಲೆಯಲ್ಲಿ ಹೆಚ್ಚುವರಿ ಗೌರವಧನ ನೀಡಿಲ್ಲ ಎಂದು ಹೇಳಿದರು.</p>.<p>ಮಾತೃಪೂರ್ಣ ಯೋಜನೆ ಪ್ರೋತ್ಸಾಹ ಧನ ₹ 500, ಸಹಾಯಕಿಯರಿಗೆ ₹ 250 ಎಲ್ಲ ಜಿಲ್ಲೆಯಲ್ಲಿ ಕೊಟ್ಟಿದ್ದಾರೆ. ಆದರೆ, ನಮ್ಮ ಜಿಲ್ಲೆಯಲ್ಲಿ ಕೊಟ್ಟಿಲ್ಲ. ಅಂಗನವಾಡಿ ಕೇಂದ್ರಗಳಲ್ಲಿ ಸರಿಯಾದ ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯಗಳು ಸಮರ್ಪಕವಾಗಿಲ್ಲ. ವಿದ್ಯುತ್ ಸಂಪರ್ಕ ಇದ್ದರೂ ಕೂಡ ಕರೆಂಟ್ ಇರುವುದಿಲ್ಲ ಎಂದು ದೂರಿದರು.</p>.<p>ಗ್ರಾಮೀಣ ವಲಯಗಳಲ್ಲಿ ಅಂಗನವಾಡಿ ಕೇಂದ್ರಕ್ಕೆ ಬಾಡಿಗೆ ಹಣ ಕಚೇರಿಯಿಂದ ಕೊಡುತ್ತಿಲ್ಲ, ಅಂಗನವಾಡಿ ಕಾರ್ಯಕರ್ತೆಯರು ಕೈಯಿಂದ ಬಾಡಿಗೆ ತುಂಬುತ್ತಿದ್ದಾರೆ. ಪ್ರತಿ ತಿಂಗಳು 5ನೇ ತಾರೀಖಿನ ಒಳಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕರಿಗೆ ಗೌರವಧನ ನೀಡಬೇಕು. ಕೆಲವೊಂದು ತಾಲ್ಲೂಕುಗಳಲ್ಲಿ 3-4 ತಿಂಗಳಿಂದ ಗೌರವಧನ ಕೊಟ್ಟಿರುವದಿಲ್ಲ ಎಂದು ಆರೋಪಿಸಿದರು.</p>.<p>ಸರ್ಕಾರದ ನಿಯಮಾವಳಿ ಪ್ರಕಾರ ಒಬ್ಬ ಮೇಲ್ವಿಚಾರಕಿ ಒಂದು ವಲಯದಲ್ಲಿ ಕೇವಲ ಆರು ತಿಂಗಳು ಮಾತ್ರ ಕೆಲಸ ಮಾಡಬೇಕು. ನಂತರ ಬೇರೆ ವಲಯಕ್ಕೆ ಹೋಗಬೇಕು. ಒಬ್ಬ ಮೇಲ್ವಿವಿಚಾರಕಿ ಒಂದು ತಾಲ್ಲೂಕಿನಲ್ಲಿ 3 ವರ್ಷಗಳ ಮಾತ್ರ ಇರಬೇಕು. ಆದರೆ, ಕೆಲವೊಂದು ಮೇಲ್ವಚಾರಿಕಿಯರು 9-10 ವರ್ಷಗಳಿಂದ ಒಂದೇ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಮೇಲ್ವಿಚಾರಕಿಯರು ಅಂಗನವಾಡಿ ಕಾರ್ಯಕರ್ತೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದಾರೆ ಎಂದು ಹೇಳಿದರು.</p>.<p>ರಾಜ್ಯ ಉಪಾಧ್ಯಕ್ಷೆ ಭಾರತಿ ವಾಲಿ, ಗೌರವಾಧ್ಯಕ್ಷ ಸರಸ್ವತಿ ಮಠ, ಸಂಘಟನಾ ಕಾರ್ಯದರ್ಶಿ ಅಶ್ವಿನಿ ತಳವಾರ, ಜಯಶ್ರೀ ಪೂಜಾರಿ, ಗೀತಾ ನಾಯಕ, ಆರತಿ ಜನಕಾರ, ಸರೋಜನಿ ಸಿಂಪಿಗೇರ, ಶೋಭಾ ಕಬಾಡೆ, ದಾನಮ್ಮ ಗುಗ್ಗರೆ ಇದ್ದರು.</p>.<p>---</p>.<p>ಅಂಗನವಾಡಿ ಕೇಂದ್ರಗಳಲ್ಲಿ ವಿತರಣೆ ಮಾಡುವ ಮೊಟ್ಟೆಯ ಹಣವನ್ನು ಮೊದಲು ಅಂಗನವಾಡಿ ಕಾರ್ಯಕರ್ತೆಯರೇ ಖರೀದಿಸಬೇಕಾಗಿದೆ. ಆದ್ದರಿಂದ ಮುಂಗಡವಾಗಿ ಮೊಟ್ಟೆಯ ಹಣವನ್ನು ಪಾವತಿಸಬೇಕು<br />- ಸುನಂದಾ ಬಿ. ನಾಯಕ,ಅಧ್ಯಕ್ಷೆ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>