<p><strong>ಕೊಲ್ಹಾರ:</strong> ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ನಾಮಫಲಕ ಕಡ್ಡಾಯವಾಗಿ ಹಾಕಲು ಆಗ್ರಹಿಸಿ ಕೊಲ್ಹಾರ ತಾಲ್ಲೂಕಿನ ರಕ್ಷಣಾ ವೇದಿಕೆಯಿಂದ ದಿಗಂಬರ ಮಠದ ಕಲ್ಲಿನಾಥ ದೇವರು ಸಾನ್ನಿಧ್ಯ ಹಾಗೂ ಸುರೇಶ ಹಾರಿವಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.</p>.<p>ತಾಲ್ಲೂಕು ರಕ್ಷಣಾ ವೇದಿಕೆಯ ಉಸ್ತುವಾರಿ ರವಿ ಗೊಳಸಂಗಿ ಮಾತನಾಡಿ, ಕರ್ನಾಟಕ ಸರಕಾರದ ಆದೇಶದಂತೆ ಶೇ 60ರಂತೆ ಕನ್ನಡ ನಾಮಫಲಕ ಅಳವಡಿಸಲು ತಾಲ್ಲೂಕು ದಂಡಾಧಿಕಾರಿಗಳಿಗೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಮನವಿ ಕೊಟ್ಟರೂ ಯಾವುದೇ ಕ್ರಮ ಜರುಗಿಸದ ಕಾರಣ ಮೂರು ದಿನಗಳಲ್ಲಿ ಈ ಕಾರ್ಯ ಮಾಡಬೇಕು ಎಂದು ಗಡುವು ನೀಡಿದರು.</p>.<p>ಅವಳಿ ಜಿಲ್ಲೆಯ ಉಸ್ತುವಾರಿಗಳಾದ ಸುರೇಶ ಹಾರಿವಾಳ, ರಕ್ಷಣಾ ವೇದಿಕೆಯ ಮುಖಾಂತರ ಸತತ ಮೂರು ತಿಂಗಳಿಂದ ಅಧಿಕಾರಿಗಳಿಗೆ ಮನವಿ ಕೊಟ್ಟರೂ ಈ ಕಾರ್ಯ ವಿಳಂಬವಾಗುತ್ತಿದೆ ಏಕೆ ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿ, ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಮೂರು ದಿನ ಕಾಲಾವಕಾಶ ನೀಡಲಾಗಿದೆ. ಒಂದು ವೇಳೆ ಸಂಪೂರ್ಣ ಕನ್ನಡ ನಾಮಫಲಕಗಳನ್ನು ಹಾಕದೆ ಹೋದರೆ ಮತ್ತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ಕನ್ನಡ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಮಹಾಂತೇಶ ಗಿಡ್ಡಪ್ಪಗೋಳ ಮಾತನಾಡಿ, ಪಟ್ಟಣದ ಆಡಳಿತ ಕಚೇರಿಗಳು, ಅಂಗಡಿಗಳು, ಶಾಲಾ, ಕಾಲೇಜುಗಳು ಮಾರುಕಟ್ಟೆಯ ಸ್ಥಳಗಳಲ್ಲಿ ನಾಮಫಲಕಗಳು ಕನ್ನಡದಲ್ಲಿ ಹಾಕಬೇಕು ಎಂದು ಅಧಿಕಾರಿಗಳಿಗೆ, ವ್ಯಾಪಾರಸ್ಥರಿಗೆ ಸೂಚನೆ ನೀಡಿದರು.</p>.<p>ಯುವ ಘಟಕದ ಅಧ್ಯಕ್ಷ ಸಂತೋಷ್ ಹಡ್ರೋಳ್ಳಿ, ಭೀಮನಗೌಡ ಬಿರಾದಾರ, ಮುತ್ತು ಹಿಪ್ಪರಗಿ, ಹಣಮಂತ ಹತ್ತಿರಕಾಳ,ಬಸು ಗಡ್ಡಿ, ಸುನೀಲ ಬರಗಿ,ಸಾಗರ ಕಟಾರೆ, ಯಲ್ಲಪ್ಪ ಹಡ್ರೋಳ್ಳಿ, ಮಲ್ಲು ಉಗ್ರಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ:</strong> ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ನಾಮಫಲಕ ಕಡ್ಡಾಯವಾಗಿ ಹಾಕಲು ಆಗ್ರಹಿಸಿ ಕೊಲ್ಹಾರ ತಾಲ್ಲೂಕಿನ ರಕ್ಷಣಾ ವೇದಿಕೆಯಿಂದ ದಿಗಂಬರ ಮಠದ ಕಲ್ಲಿನಾಥ ದೇವರು ಸಾನ್ನಿಧ್ಯ ಹಾಗೂ ಸುರೇಶ ಹಾರಿವಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.</p>.<p>ತಾಲ್ಲೂಕು ರಕ್ಷಣಾ ವೇದಿಕೆಯ ಉಸ್ತುವಾರಿ ರವಿ ಗೊಳಸಂಗಿ ಮಾತನಾಡಿ, ಕರ್ನಾಟಕ ಸರಕಾರದ ಆದೇಶದಂತೆ ಶೇ 60ರಂತೆ ಕನ್ನಡ ನಾಮಫಲಕ ಅಳವಡಿಸಲು ತಾಲ್ಲೂಕು ದಂಡಾಧಿಕಾರಿಗಳಿಗೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಮನವಿ ಕೊಟ್ಟರೂ ಯಾವುದೇ ಕ್ರಮ ಜರುಗಿಸದ ಕಾರಣ ಮೂರು ದಿನಗಳಲ್ಲಿ ಈ ಕಾರ್ಯ ಮಾಡಬೇಕು ಎಂದು ಗಡುವು ನೀಡಿದರು.</p>.<p>ಅವಳಿ ಜಿಲ್ಲೆಯ ಉಸ್ತುವಾರಿಗಳಾದ ಸುರೇಶ ಹಾರಿವಾಳ, ರಕ್ಷಣಾ ವೇದಿಕೆಯ ಮುಖಾಂತರ ಸತತ ಮೂರು ತಿಂಗಳಿಂದ ಅಧಿಕಾರಿಗಳಿಗೆ ಮನವಿ ಕೊಟ್ಟರೂ ಈ ಕಾರ್ಯ ವಿಳಂಬವಾಗುತ್ತಿದೆ ಏಕೆ ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿ, ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಮೂರು ದಿನ ಕಾಲಾವಕಾಶ ನೀಡಲಾಗಿದೆ. ಒಂದು ವೇಳೆ ಸಂಪೂರ್ಣ ಕನ್ನಡ ನಾಮಫಲಕಗಳನ್ನು ಹಾಕದೆ ಹೋದರೆ ಮತ್ತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ಕನ್ನಡ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಮಹಾಂತೇಶ ಗಿಡ್ಡಪ್ಪಗೋಳ ಮಾತನಾಡಿ, ಪಟ್ಟಣದ ಆಡಳಿತ ಕಚೇರಿಗಳು, ಅಂಗಡಿಗಳು, ಶಾಲಾ, ಕಾಲೇಜುಗಳು ಮಾರುಕಟ್ಟೆಯ ಸ್ಥಳಗಳಲ್ಲಿ ನಾಮಫಲಕಗಳು ಕನ್ನಡದಲ್ಲಿ ಹಾಕಬೇಕು ಎಂದು ಅಧಿಕಾರಿಗಳಿಗೆ, ವ್ಯಾಪಾರಸ್ಥರಿಗೆ ಸೂಚನೆ ನೀಡಿದರು.</p>.<p>ಯುವ ಘಟಕದ ಅಧ್ಯಕ್ಷ ಸಂತೋಷ್ ಹಡ್ರೋಳ್ಳಿ, ಭೀಮನಗೌಡ ಬಿರಾದಾರ, ಮುತ್ತು ಹಿಪ್ಪರಗಿ, ಹಣಮಂತ ಹತ್ತಿರಕಾಳ,ಬಸು ಗಡ್ಡಿ, ಸುನೀಲ ಬರಗಿ,ಸಾಗರ ಕಟಾರೆ, ಯಲ್ಲಪ್ಪ ಹಡ್ರೋಳ್ಳಿ, ಮಲ್ಲು ಉಗ್ರಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>