<p><strong>ವಿಜಯಪುರ:</strong>‘ಕಟ್ಟಿಗೆ ಅಡ್ಡೆಗಳನ್ನು ಸಕಾರಣವಿಲ್ಲದೇ ಸೀಜ್ ಮಾಡಲಾಗಿದೆ’ ಎಂದು ದೂರಿ ಜಿಲ್ಲೆಯ ವಿವಿಧ ಕಟ್ಟಿಗೆ ಅಡ್ಡೆಗಳ ಮಾಲೀಕರು, ಕಾರ್ಮಿಕರು ನಗರದ ಟಕ್ಕೆಯಲ್ಲಿರುವ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನೆಯ ನಡುವೆ ಕಾರ್ಮಿಕರಾದ ಫಯಾಜ್, ಮೈನುದ್ದೀನ್ ಮೊಕಾಶಿ ತಮ್ಮ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ನೆಗೆ ಯತ್ನಿಸಿದರು. ತಕ್ಷಣವೇ ಪ್ರತಿಭಟನಾಕಾರರು ಇಬ್ಬರನ್ನು ತಡೆದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಮೈನುದ್ದೀನ್ ಮೊಕಾಶಿ ‘ವಿಜಯಪುರ ಜಿಲ್ಲೆಯಲ್ಲಿ 137 ಕಟ್ಟಿಗೆ ಅಡ್ಡೆಗಳನ್ನು ಬಂದ್ ಮಾಡಿ ಸೀಜ್ ಮಾಡಲಾಗಿದೆ. ಯಾವುದೋ ನೆಪ ಹೇಳಿ, ಸಕಾರಣವಿಲ್ಲದೇ ಕಟ್ಟಿಗೆ ಅಡ್ಡೆಗಳನ್ನು ಬಂದ್ ಮಾಡಲಾಗಿದೆ. ಈ ಉದ್ಯಮವನ್ನೇ ನಂಬಿ ಅಪಾರ ಸಂಖ್ಯೆಯ ಕಾರ್ಮಿಕರು ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದೇವೆ.</p>.<p>ಏಕಾಏಕಿಯಾಗಿ ಕಳೆದ ಹಲ ದಿನಗಳಿಂದ ಕಟ್ಟಿಗೆ ಅಡ್ಡೆಗಳನ್ನು ಬಂದ್ ಮಾಡಿರುವುದರಿಂದ ಕಾರ್ಮಿಕರ ಕುಟುಂಬಗಳು ಉಪವಾಸ ಬೀಳುವಂತಾಗಿದೆ. ಕಾರ್ಮಿಕರು ಕೆಲಸವಿಲ್ಲದೇ ಪರದಾಡುವಂತಾದರೆ; ಕಟ್ಟಿಗೆ ಅಡ್ಡೆ ನಿರ್ಮಾಣಕ್ಕೆ ಮಾಲೀಕರು ಸಾಲ ಮಾಡಿದ್ದಾರೆ. ಈಗ ಜೀವನಾಧಾರವೇ ನಿಂತು, ಬ್ಯಾಂಕಿಗೆ ಸಾಲದ ಕಂತು ಸಹ ಪಾವತಿ ಮಾಡಲಾಗದೇ ಅತ್ಯಂತ ಗಂಭೀರ ಸ್ಥಿತಿ ಎದುರಿಸುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡರು.</p>.<p>‘ಯಾವುದೇ ನೋಟಿಸ್ ನೀಡದೇ, ಮನ ಬಂದಂತೆ ನಿಯಮಾವಳಿ ಮೀರಿದೆ ಎಂದು ಹೇಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಕಟ್ಟಿಗೆ ಅಡ್ಡೆ ಮೇಲೆ ದಾಳಿ ನಡೆಸಿ, ಸೀಜ್ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ, ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಾಳಿ ನಡೆಸಿ ಸೀಜ್ ಮಾಡಲಾಗಿದೆ ಎಂಬ ಉತ್ತರ ನೀಡುತ್ತಾರೆ.</p>.<p>ಮೇಲಾಧಿಕಾರಿಗಳಿಗೆ ವಿಚಾರಿಸಿದರೆ, ಯಾವುದೇ ಈ ತರಹದ ಆದೇಶ ನೀಡಿಲ್ಲ ಎನ್ನುತ್ತಾರೆ. ಹೀಗಾದರೆ ನಾವು ಯಾರಿಗೆ ನ್ಯಾಯ ಕೇಳಬೇಕು’ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.</p>.<p>ನೆರೆಯ ಬಾಗಲಕೋಟೆ, ಕಲಬುರ್ಗಿ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಕಟ್ಟಿಗೆ ಅಡ್ಡೆಗಳು ಚಾಲ್ತಿಯಲ್ಲಿವೆ. ಆದರೆ ನಮ್ಮ ಜಿಲ್ಲೆಯಲ್ಲಿ ಮಾತ್ರ ಏಕೆ ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ಕಟ್ಟಿಗೆ ಅಡ್ಡೆಯ ಮಾಲೀಕರು, ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>‘ಕಟ್ಟಿಗೆ ಅಡ್ಡೆಗಳನ್ನು ಸಕಾರಣವಿಲ್ಲದೇ ಸೀಜ್ ಮಾಡಲಾಗಿದೆ’ ಎಂದು ದೂರಿ ಜಿಲ್ಲೆಯ ವಿವಿಧ ಕಟ್ಟಿಗೆ ಅಡ್ಡೆಗಳ ಮಾಲೀಕರು, ಕಾರ್ಮಿಕರು ನಗರದ ಟಕ್ಕೆಯಲ್ಲಿರುವ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನೆಯ ನಡುವೆ ಕಾರ್ಮಿಕರಾದ ಫಯಾಜ್, ಮೈನುದ್ದೀನ್ ಮೊಕಾಶಿ ತಮ್ಮ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ನೆಗೆ ಯತ್ನಿಸಿದರು. ತಕ್ಷಣವೇ ಪ್ರತಿಭಟನಾಕಾರರು ಇಬ್ಬರನ್ನು ತಡೆದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಮೈನುದ್ದೀನ್ ಮೊಕಾಶಿ ‘ವಿಜಯಪುರ ಜಿಲ್ಲೆಯಲ್ಲಿ 137 ಕಟ್ಟಿಗೆ ಅಡ್ಡೆಗಳನ್ನು ಬಂದ್ ಮಾಡಿ ಸೀಜ್ ಮಾಡಲಾಗಿದೆ. ಯಾವುದೋ ನೆಪ ಹೇಳಿ, ಸಕಾರಣವಿಲ್ಲದೇ ಕಟ್ಟಿಗೆ ಅಡ್ಡೆಗಳನ್ನು ಬಂದ್ ಮಾಡಲಾಗಿದೆ. ಈ ಉದ್ಯಮವನ್ನೇ ನಂಬಿ ಅಪಾರ ಸಂಖ್ಯೆಯ ಕಾರ್ಮಿಕರು ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದೇವೆ.</p>.<p>ಏಕಾಏಕಿಯಾಗಿ ಕಳೆದ ಹಲ ದಿನಗಳಿಂದ ಕಟ್ಟಿಗೆ ಅಡ್ಡೆಗಳನ್ನು ಬಂದ್ ಮಾಡಿರುವುದರಿಂದ ಕಾರ್ಮಿಕರ ಕುಟುಂಬಗಳು ಉಪವಾಸ ಬೀಳುವಂತಾಗಿದೆ. ಕಾರ್ಮಿಕರು ಕೆಲಸವಿಲ್ಲದೇ ಪರದಾಡುವಂತಾದರೆ; ಕಟ್ಟಿಗೆ ಅಡ್ಡೆ ನಿರ್ಮಾಣಕ್ಕೆ ಮಾಲೀಕರು ಸಾಲ ಮಾಡಿದ್ದಾರೆ. ಈಗ ಜೀವನಾಧಾರವೇ ನಿಂತು, ಬ್ಯಾಂಕಿಗೆ ಸಾಲದ ಕಂತು ಸಹ ಪಾವತಿ ಮಾಡಲಾಗದೇ ಅತ್ಯಂತ ಗಂಭೀರ ಸ್ಥಿತಿ ಎದುರಿಸುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡರು.</p>.<p>‘ಯಾವುದೇ ನೋಟಿಸ್ ನೀಡದೇ, ಮನ ಬಂದಂತೆ ನಿಯಮಾವಳಿ ಮೀರಿದೆ ಎಂದು ಹೇಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಕಟ್ಟಿಗೆ ಅಡ್ಡೆ ಮೇಲೆ ದಾಳಿ ನಡೆಸಿ, ಸೀಜ್ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ, ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಾಳಿ ನಡೆಸಿ ಸೀಜ್ ಮಾಡಲಾಗಿದೆ ಎಂಬ ಉತ್ತರ ನೀಡುತ್ತಾರೆ.</p>.<p>ಮೇಲಾಧಿಕಾರಿಗಳಿಗೆ ವಿಚಾರಿಸಿದರೆ, ಯಾವುದೇ ಈ ತರಹದ ಆದೇಶ ನೀಡಿಲ್ಲ ಎನ್ನುತ್ತಾರೆ. ಹೀಗಾದರೆ ನಾವು ಯಾರಿಗೆ ನ್ಯಾಯ ಕೇಳಬೇಕು’ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.</p>.<p>ನೆರೆಯ ಬಾಗಲಕೋಟೆ, ಕಲಬುರ್ಗಿ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಕಟ್ಟಿಗೆ ಅಡ್ಡೆಗಳು ಚಾಲ್ತಿಯಲ್ಲಿವೆ. ಆದರೆ ನಮ್ಮ ಜಿಲ್ಲೆಯಲ್ಲಿ ಮಾತ್ರ ಏಕೆ ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ಕಟ್ಟಿಗೆ ಅಡ್ಡೆಯ ಮಾಲೀಕರು, ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>