<p><strong>ವಿಜಯಪುರ:</strong> ನಗರದಲ್ಲಿ ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.</p>.<p>ಬೃಹತ್ ಗುಂಡಿ ಬಿದ್ದು ನೀರು ತುಂಬಿಕೊಂಡಿರುವನಗರದ ಐತಿಹಾಸಿಕ ಜೋಡು ಗುಮ್ಮಟದ ಎದುರಿನ ರಸ್ತೆಯಲ್ಲಿ ಹಾಗೂ ಹತ್ತಾರು ಕಾಗದದ ದೋಣಿಗಳನ್ನು ತೇಲಿಬಿಟ್ಟಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ, ಸ್ಥಳೀಯ ಶಾಸಕರ ವಿರುದ್ಧ ಹಾಗೂ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ರಸ್ತೆಯನ್ನು ದುರಸ್ತಿ ಮಾಡಲಾಗದಷ್ಟು ಸರ್ಕಾರ ನಿರ್ಲಕ್ಷ್ಯ ತಾಳಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಈ ಸರ್ಕಾರದ ಅವಧಿಯಲ್ಲಿ ನಡೆಯುತ್ತಿಲ್ಲ. ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿದರು.</p>.<p>ಪ್ರತಿದಿನ ಸಾವಿರಾರು ವಾಹನಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುವ ಮುಖ್ಯ ರಸ್ತೆ ಹದಗೆಟ್ಟು ವರ್ಷವಾದರೂ ಕನಿಷ್ಟ ಗುಂಡಿ ಮುಚ್ಚಿ, ಸಂಚಾರ ಯೋಗ್ಯ ಮಾಡಿಲ್ಲ ಎಂದು ದೂರಿದರು.</p>.<p>ಮಹಿಳಾ ಕಾಂಗ್ರೆಸ್ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳಾ ಸೇರಿದಂತೆ ಮಹಿಳಾ ಕಾರ್ಯಕರ್ತೆಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನಗರದಲ್ಲಿ ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.</p>.<p>ಬೃಹತ್ ಗುಂಡಿ ಬಿದ್ದು ನೀರು ತುಂಬಿಕೊಂಡಿರುವನಗರದ ಐತಿಹಾಸಿಕ ಜೋಡು ಗುಮ್ಮಟದ ಎದುರಿನ ರಸ್ತೆಯಲ್ಲಿ ಹಾಗೂ ಹತ್ತಾರು ಕಾಗದದ ದೋಣಿಗಳನ್ನು ತೇಲಿಬಿಟ್ಟಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ, ಸ್ಥಳೀಯ ಶಾಸಕರ ವಿರುದ್ಧ ಹಾಗೂ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ರಸ್ತೆಯನ್ನು ದುರಸ್ತಿ ಮಾಡಲಾಗದಷ್ಟು ಸರ್ಕಾರ ನಿರ್ಲಕ್ಷ್ಯ ತಾಳಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಈ ಸರ್ಕಾರದ ಅವಧಿಯಲ್ಲಿ ನಡೆಯುತ್ತಿಲ್ಲ. ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿದರು.</p>.<p>ಪ್ರತಿದಿನ ಸಾವಿರಾರು ವಾಹನಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುವ ಮುಖ್ಯ ರಸ್ತೆ ಹದಗೆಟ್ಟು ವರ್ಷವಾದರೂ ಕನಿಷ್ಟ ಗುಂಡಿ ಮುಚ್ಚಿ, ಸಂಚಾರ ಯೋಗ್ಯ ಮಾಡಿಲ್ಲ ಎಂದು ದೂರಿದರು.</p>.<p>ಮಹಿಳಾ ಕಾಂಗ್ರೆಸ್ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳಾ ಸೇರಿದಂತೆ ಮಹಿಳಾ ಕಾರ್ಯಕರ್ತೆಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>