<p><strong>ವಿಜಯಪುರ: </strong>ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಬೀಜ, ಗೊಬ್ಬರ ಇನ್ನೀತರ ಅಗತ್ಯ ಪರಿಹಾರವನ್ನು ಕೂಡಲೇ ಒದಗಿಸಿ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ರೈತರಿಗೆ ತಾಡಪತ್ರಿಗಳ ವಿತರಣೆ ಸರಿಯಾಗಿ ಆಗುತ್ತಿಲ್ಲ ಎಂದು ಕೇಳಿಬರುತ್ತಿರುವ ದೂರುಗಳನ್ನು ಪರಿಗಣಿಸಿ, ಸರಿಪಡಿಸಿ, ಬಡರೈತರಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಿ ಎಂದರು.</p>.<p>ತಾಲ್ಲೂಕುಗಳಲ್ಲಿ ಮಳೆಯಿಂದ ಹಾನಿಗೊಳಗಾದ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸುವ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ವಿತರಣೆಯಲ್ಲಿನ ಲೋಪದೋಪಗಳನ್ನು ಕೂಡಲೇ ಸರಿಪಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ವಿವಿಧ ಕಡೆಗಳಲ್ಲಿ ಕೆಟ್ಟುಹೋಗಿರುವ ನೀರಿನ ಆರ್ಒ ಪ್ಲಾಂಟ್ಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ತಿಳಿಸಿದರು.</p>.<p>ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರೂಪಿಸಲಾಗಿರುವ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಕಾರ್ಡ್ ಯೋಜನೆಯು ಅರ್ಹ ಬಡವರಿಗೆ ತಲುಪುವಂತೆ ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿಯೂ ಜಾಗೃತಿ ಮೂಡಿಸಬೇಕು ಎಂದರು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯೆ ಪ್ರತಿಭಾ ಪಾಟೀಲ,ತಾಲ್ಲೂಕು ಪಂಚಾಯ್ತಿ ಇಒ ಬಿ.ಎಸ್.ರಾಠೋಡ, ಜಿಲ್ಲಾ ಪಂಚಾಯ್ತಿ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಸಹಾಯಕ ಯೋಜನಾಧಿಕಾರಿ ಸಿ.ಬಿ.ಕುಂಬಾರ,ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಬೀಜ, ಗೊಬ್ಬರ ಇನ್ನೀತರ ಅಗತ್ಯ ಪರಿಹಾರವನ್ನು ಕೂಡಲೇ ಒದಗಿಸಿ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ರೈತರಿಗೆ ತಾಡಪತ್ರಿಗಳ ವಿತರಣೆ ಸರಿಯಾಗಿ ಆಗುತ್ತಿಲ್ಲ ಎಂದು ಕೇಳಿಬರುತ್ತಿರುವ ದೂರುಗಳನ್ನು ಪರಿಗಣಿಸಿ, ಸರಿಪಡಿಸಿ, ಬಡರೈತರಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಿ ಎಂದರು.</p>.<p>ತಾಲ್ಲೂಕುಗಳಲ್ಲಿ ಮಳೆಯಿಂದ ಹಾನಿಗೊಳಗಾದ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸುವ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ವಿತರಣೆಯಲ್ಲಿನ ಲೋಪದೋಪಗಳನ್ನು ಕೂಡಲೇ ಸರಿಪಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ವಿವಿಧ ಕಡೆಗಳಲ್ಲಿ ಕೆಟ್ಟುಹೋಗಿರುವ ನೀರಿನ ಆರ್ಒ ಪ್ಲಾಂಟ್ಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ತಿಳಿಸಿದರು.</p>.<p>ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರೂಪಿಸಲಾಗಿರುವ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಕಾರ್ಡ್ ಯೋಜನೆಯು ಅರ್ಹ ಬಡವರಿಗೆ ತಲುಪುವಂತೆ ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿಯೂ ಜಾಗೃತಿ ಮೂಡಿಸಬೇಕು ಎಂದರು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯೆ ಪ್ರತಿಭಾ ಪಾಟೀಲ,ತಾಲ್ಲೂಕು ಪಂಚಾಯ್ತಿ ಇಒ ಬಿ.ಎಸ್.ರಾಠೋಡ, ಜಿಲ್ಲಾ ಪಂಚಾಯ್ತಿ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಸಹಾಯಕ ಯೋಜನಾಧಿಕಾರಿ ಸಿ.ಬಿ.ಕುಂಬಾರ,ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>