<p><strong>ವಿಜಯಪುರ: </strong>ಜಿಲ್ಲೆಯಲ್ಲಿರುವ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ತಕ್ಷಣ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಅಲಿಯಾಬಾದ್ ಕೈಗಾರಿಕಾ ಪ್ರದೇಶದಹಂತ-1 ಹಾಗೂ 2ಕ್ಕೆ ಉಳಿದಿರುವ ಮೂಲ ಸೌಲಭ್ಯ ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂಅಲಿಯಾಬಾದ್-2 ಕೈಗಾರಿಕಾ ಪ್ರದೇಶದಲ್ಲಿಅಗ್ನಿಶಾಮಕ ಠಾಣೆ ಸ್ಥಾಪಿಸಲು 1 ಎಕರೆ 27 ಗುಂಟೆ ಜಮೀನನ್ನು ಉಚಿತವಾಗಿ ಹಂಚಿಕೆ ಮಾಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಕೆಲವು ದಿನಗಳಲ್ಲಿ ಪ್ರಾರಂಭಿಸಲಾಗುತ್ತದೆ ಎಂದರು.</p>.<p>ಅಲಿಯಾಬಾದ್ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶದ ಬ್ಲಾಕ್-2ರ ರಸ್ತೆ ಬದಿ ಇರುವ ಅನಧಿಕೃತ ಅಂಗಡಿಗಳನ್ನು 10 ದಿನಗೊಳಗಾಗಿ ತೆರವುಗೊಳಿಸುವಂತೆ ಸೂಚಿಸಿದರು.</p>.<p>ಬಸವನ ಬಾಗೇವಾಡಿ ತಾಲ್ಲೂಕಿನ ಮುಳವಾಡ ಗ್ರಾಮದಲ್ಲಿ 564 ಎಕರೆಯಲ್ಲಿ ಇರುವ ಕೈಗಾರಿಕಾ ಪ್ರದೇಶಕ್ಕೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳು ಶೇ 90 ರಷ್ಠು ಪೂರ್ಣಗೊಂಡಿದ್ದು, ಇನ್ನುಳಿದ ಕಾಮಗಾರಿಗಳು ತಿಂಗಳಾಂತ್ಯಕ್ಕೆ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.</p>.<p>ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಮೊದಲ ಹಂತದ ಕಾಮಗಾರಿಗೆ ಸಂಬಂಧಿಸಿದಂತೆ ಸಿವಿಲ್ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ನವಂಬರ್ ಅಂತ್ಯದಲ್ಲಿ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಬೇಕು ಹಾಗೂ ಜನವರಿಯಲ್ಲಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಹೇಳಿದರು.</p>.<p>ಸಿಂದಗಿ ತಾಲ್ಲೂಕಿನ ಸಣ್ಣ ಕೈಗಾರಿಕಾ ಉದ್ಯಮಿದಾರರು ಹಾಗೂ ಸೇವಾ ಸಂಸ್ಥೆಯ ಮನವಿಯಂತೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಸಿಂದಗಿ ಕೈಗಾರಿಕಾ ವಸಾಹತುವಿನಲ್ಲಿ 458.20 ಚ.ಮಿ ಜಾಗವನ್ನು ನಿಗಮದ ನಿಯಮಾವಳಿಯಂತೆ ದರ ನಿಗದಿಪಡಿಸಿ, ಹಂಚಿಕೆ ಪತ್ರಗಳನ್ನು ನೀಡಲಾಗಿದೆ ಎಂದು ತಿಳಿಸಿದರು.</p>.<p>ಬಸವನ ಬಾಗೇವಾಡಿ ತಾಲ್ಲೂಕಿನ ಮುಳವಾಡ ಹಂತ-1ರ ಕೈಗಾರಿಕಾ ಪ್ರದೇಶದಲ್ಲಿ ಮೂಲ ಸೌಕರ್ಯಗಳ ಕಾಮಗಾರಿ ಪೂರ್ಣಗೊಂಡ ನಂತರ ನಿವೇಶನ ಹಂಚಿಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಿಂದಗಿ ತಾಲ್ಲೂಕಿನ ಸಣ್ಣ ಕೈಗಾರಿಕಾ ಉದ್ಯಮದಾರರ ನಿವೇಶನ ಅಳತೆಗಳನ್ನು ಸರಿಪಡಿಸಿ ನಿವೇಶನಗಳ ಸರಹದ್ದನ್ನು ಹೊಸದಾಗಿ ಸರ್ವೆ ಮಾಡಿಸಬೇಕು ಹಾಗೂ ಅಲ್ಲಿಗೆ ಅಗತ್ಯವಿರುವ ನೀರಿನ ಸೌಲಭ್ಯ ಕಲ್ಪಿಸಬೇಕು ಮತ್ತು ವಿದ್ಯುತ್ ಸಮಸ್ಯೆ ನಿವಾರಿಸುವಂತೆ ಸೂಚಿಸಿದರು.</p>.<p>ಮಲಘಾಣ ಗ್ರಾಮದಲ್ಲಿ ಬೆಲ್ಲ ತಯಾರಿಕಾ ಘಟಕ ಸ್ಥಾಪನೆಗೆ ಮಹಾಲಕ್ಷ್ಮೀ ಜಾಗರಿ ಕಂಪನಿಗೆ 1 ಎಕರೆ ಜಾಗ ನೀಡಲು ಸಭೆ ಒಪ್ಪಿಗೆ ನೀಡಿತು.</p>.<p>ಜಿಲ್ಲೆಯಲ್ಲಿ ವಿವಿಧ ಕೈಗಾರಿಕೋದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.</p>.<p>ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ, ಕೈಗಾರಿಕೋದ್ಯಮಿಗಳು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜಿಲ್ಲೆಯಲ್ಲಿರುವ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ತಕ್ಷಣ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಅಲಿಯಾಬಾದ್ ಕೈಗಾರಿಕಾ ಪ್ರದೇಶದಹಂತ-1 ಹಾಗೂ 2ಕ್ಕೆ ಉಳಿದಿರುವ ಮೂಲ ಸೌಲಭ್ಯ ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂಅಲಿಯಾಬಾದ್-2 ಕೈಗಾರಿಕಾ ಪ್ರದೇಶದಲ್ಲಿಅಗ್ನಿಶಾಮಕ ಠಾಣೆ ಸ್ಥಾಪಿಸಲು 1 ಎಕರೆ 27 ಗುಂಟೆ ಜಮೀನನ್ನು ಉಚಿತವಾಗಿ ಹಂಚಿಕೆ ಮಾಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಕೆಲವು ದಿನಗಳಲ್ಲಿ ಪ್ರಾರಂಭಿಸಲಾಗುತ್ತದೆ ಎಂದರು.</p>.<p>ಅಲಿಯಾಬಾದ್ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶದ ಬ್ಲಾಕ್-2ರ ರಸ್ತೆ ಬದಿ ಇರುವ ಅನಧಿಕೃತ ಅಂಗಡಿಗಳನ್ನು 10 ದಿನಗೊಳಗಾಗಿ ತೆರವುಗೊಳಿಸುವಂತೆ ಸೂಚಿಸಿದರು.</p>.<p>ಬಸವನ ಬಾಗೇವಾಡಿ ತಾಲ್ಲೂಕಿನ ಮುಳವಾಡ ಗ್ರಾಮದಲ್ಲಿ 564 ಎಕರೆಯಲ್ಲಿ ಇರುವ ಕೈಗಾರಿಕಾ ಪ್ರದೇಶಕ್ಕೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳು ಶೇ 90 ರಷ್ಠು ಪೂರ್ಣಗೊಂಡಿದ್ದು, ಇನ್ನುಳಿದ ಕಾಮಗಾರಿಗಳು ತಿಂಗಳಾಂತ್ಯಕ್ಕೆ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.</p>.<p>ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಮೊದಲ ಹಂತದ ಕಾಮಗಾರಿಗೆ ಸಂಬಂಧಿಸಿದಂತೆ ಸಿವಿಲ್ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ನವಂಬರ್ ಅಂತ್ಯದಲ್ಲಿ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಬೇಕು ಹಾಗೂ ಜನವರಿಯಲ್ಲಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಹೇಳಿದರು.</p>.<p>ಸಿಂದಗಿ ತಾಲ್ಲೂಕಿನ ಸಣ್ಣ ಕೈಗಾರಿಕಾ ಉದ್ಯಮಿದಾರರು ಹಾಗೂ ಸೇವಾ ಸಂಸ್ಥೆಯ ಮನವಿಯಂತೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಸಿಂದಗಿ ಕೈಗಾರಿಕಾ ವಸಾಹತುವಿನಲ್ಲಿ 458.20 ಚ.ಮಿ ಜಾಗವನ್ನು ನಿಗಮದ ನಿಯಮಾವಳಿಯಂತೆ ದರ ನಿಗದಿಪಡಿಸಿ, ಹಂಚಿಕೆ ಪತ್ರಗಳನ್ನು ನೀಡಲಾಗಿದೆ ಎಂದು ತಿಳಿಸಿದರು.</p>.<p>ಬಸವನ ಬಾಗೇವಾಡಿ ತಾಲ್ಲೂಕಿನ ಮುಳವಾಡ ಹಂತ-1ರ ಕೈಗಾರಿಕಾ ಪ್ರದೇಶದಲ್ಲಿ ಮೂಲ ಸೌಕರ್ಯಗಳ ಕಾಮಗಾರಿ ಪೂರ್ಣಗೊಂಡ ನಂತರ ನಿವೇಶನ ಹಂಚಿಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಿಂದಗಿ ತಾಲ್ಲೂಕಿನ ಸಣ್ಣ ಕೈಗಾರಿಕಾ ಉದ್ಯಮದಾರರ ನಿವೇಶನ ಅಳತೆಗಳನ್ನು ಸರಿಪಡಿಸಿ ನಿವೇಶನಗಳ ಸರಹದ್ದನ್ನು ಹೊಸದಾಗಿ ಸರ್ವೆ ಮಾಡಿಸಬೇಕು ಹಾಗೂ ಅಲ್ಲಿಗೆ ಅಗತ್ಯವಿರುವ ನೀರಿನ ಸೌಲಭ್ಯ ಕಲ್ಪಿಸಬೇಕು ಮತ್ತು ವಿದ್ಯುತ್ ಸಮಸ್ಯೆ ನಿವಾರಿಸುವಂತೆ ಸೂಚಿಸಿದರು.</p>.<p>ಮಲಘಾಣ ಗ್ರಾಮದಲ್ಲಿ ಬೆಲ್ಲ ತಯಾರಿಕಾ ಘಟಕ ಸ್ಥಾಪನೆಗೆ ಮಹಾಲಕ್ಷ್ಮೀ ಜಾಗರಿ ಕಂಪನಿಗೆ 1 ಎಕರೆ ಜಾಗ ನೀಡಲು ಸಭೆ ಒಪ್ಪಿಗೆ ನೀಡಿತು.</p>.<p>ಜಿಲ್ಲೆಯಲ್ಲಿ ವಿವಿಧ ಕೈಗಾರಿಕೋದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.</p>.<p>ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ, ಕೈಗಾರಿಕೋದ್ಯಮಿಗಳು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>