<p><strong>ವಿಜಯಪುರ</strong>: ಭಾಸ್ಕರಾಚಾರ್ಯರ ವಿಧಾನದ ಮೂಲಕ ಗಣಿತದ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದಾಗಿದೆ ಎಂದು ಮಹಿಳಾ ವಿವಿಯ ನೂತನ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.</p>.<p>ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಗಣಿತ ಅಧ್ಯಯನ ವಿಭಾಗ ಹಾಗೂ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಅಡಿಯಲ್ಲಿ ವಿಶ್ವವಿದ್ಯಾನಿಲಯದ ಪ್ರಸಾರಾಂಗದಿಂದ ಶುಕ್ರವಾರ ಆಯೋಜಿಸಿದ್ದ ಗ್ರಂಥಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಾಮಾನ್ಯ ಪ್ರಕಟಿತ ಪಠ್ಯಪುಸ್ತಕಗಳ ಕಠಿಣ ಶೈಲಿಯಿಂದ ಹೊರಬಂದು, ವಿದ್ಯಾರ್ಥಿಗಳನ್ನು ಅರ್ಥಗರ್ಭಿತ, ಜ್ಯಾಮಿತೀಯ ಹಾಗೂ ಕಾವ್ಯಾತ್ಮಕ ರೀತಿಯಲ್ಲಿ ಚಿಂತಿಸಲು ಭಾಸ್ಕರಾಚಾರ್ಯರ ಗಣಿತ ಪ್ರೋತ್ಸಾಹಿಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಸಂಕಲನಶಾಸ್ತ್ರ, ಬೀಜಗಣಿತ ಮತ್ತು ಸಂಖ್ಯಾಸಿದ್ಧಾಂತದ ಪರಿಕಲ್ಪನೆಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದರು.</p>.<p>ಹಿಂದೈ ಗಣಿತ ಐತಿಹಾಸಿಕ-ಒಂದು ಮೂಲ ಗ್ರಂಥ ಭಾಗ- II , ಭಾರತದಲ್ಲಿ ಶ್ರೇಣಿ ಗಣಿತ, ಭಾರತೀಯ ಗಣಿತ ಶಾಸ್ತ್ರದ ಚಾರಿತ್ರೆ ಭಾಗ-1, ಬ್ರಹ್ಮಗುಪ್ತಮ್-1 ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು.</p>.<p>ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಗ್ರಂಥಗಳ ಲೇಖಕ ಡಾ.ವೇಣುಗೋಪಾಲ ಹೆರೂರ ಹಾಗೂ ಗುಲಬರ್ಗಾ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಎನ್.ಬಿ ನಡುವಿನಮನಿ ಉಪಸ್ಥಿತರಿದ್ದರು. </p> <p><br>ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಂಯೋಜಕ ಪ್ರೊ.ಜಿ.ಜಿ.ರಜಪೂತ, ಪ್ರಸಾರಾಂಗ ನಿರ್ದೇಶಕರಾದ ಪ್ರೊ.ರಾಜು ಬಾಗಲಕೋಟ, ವಿದ್ಯಾರ್ಥಿನಿಯರಾದ ಸಹನಾ ದೇಶಪಾಂಡೆ, ಸೌಂದರ್ಯ, ಆಸಿಯಾ ದೌಲತಕೋಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಭಾಸ್ಕರಾಚಾರ್ಯರ ವಿಧಾನದ ಮೂಲಕ ಗಣಿತದ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದಾಗಿದೆ ಎಂದು ಮಹಿಳಾ ವಿವಿಯ ನೂತನ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.</p>.<p>ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಗಣಿತ ಅಧ್ಯಯನ ವಿಭಾಗ ಹಾಗೂ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಅಡಿಯಲ್ಲಿ ವಿಶ್ವವಿದ್ಯಾನಿಲಯದ ಪ್ರಸಾರಾಂಗದಿಂದ ಶುಕ್ರವಾರ ಆಯೋಜಿಸಿದ್ದ ಗ್ರಂಥಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಾಮಾನ್ಯ ಪ್ರಕಟಿತ ಪಠ್ಯಪುಸ್ತಕಗಳ ಕಠಿಣ ಶೈಲಿಯಿಂದ ಹೊರಬಂದು, ವಿದ್ಯಾರ್ಥಿಗಳನ್ನು ಅರ್ಥಗರ್ಭಿತ, ಜ್ಯಾಮಿತೀಯ ಹಾಗೂ ಕಾವ್ಯಾತ್ಮಕ ರೀತಿಯಲ್ಲಿ ಚಿಂತಿಸಲು ಭಾಸ್ಕರಾಚಾರ್ಯರ ಗಣಿತ ಪ್ರೋತ್ಸಾಹಿಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಸಂಕಲನಶಾಸ್ತ್ರ, ಬೀಜಗಣಿತ ಮತ್ತು ಸಂಖ್ಯಾಸಿದ್ಧಾಂತದ ಪರಿಕಲ್ಪನೆಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದರು.</p>.<p>ಹಿಂದೈ ಗಣಿತ ಐತಿಹಾಸಿಕ-ಒಂದು ಮೂಲ ಗ್ರಂಥ ಭಾಗ- II , ಭಾರತದಲ್ಲಿ ಶ್ರೇಣಿ ಗಣಿತ, ಭಾರತೀಯ ಗಣಿತ ಶಾಸ್ತ್ರದ ಚಾರಿತ್ರೆ ಭಾಗ-1, ಬ್ರಹ್ಮಗುಪ್ತಮ್-1 ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು.</p>.<p>ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಗ್ರಂಥಗಳ ಲೇಖಕ ಡಾ.ವೇಣುಗೋಪಾಲ ಹೆರೂರ ಹಾಗೂ ಗುಲಬರ್ಗಾ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಎನ್.ಬಿ ನಡುವಿನಮನಿ ಉಪಸ್ಥಿತರಿದ್ದರು. </p> <p><br>ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಂಯೋಜಕ ಪ್ರೊ.ಜಿ.ಜಿ.ರಜಪೂತ, ಪ್ರಸಾರಾಂಗ ನಿರ್ದೇಶಕರಾದ ಪ್ರೊ.ರಾಜು ಬಾಗಲಕೋಟ, ವಿದ್ಯಾರ್ಥಿನಿಯರಾದ ಸಹನಾ ದೇಶಪಾಂಡೆ, ಸೌಂದರ್ಯ, ಆಸಿಯಾ ದೌಲತಕೋಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>