<p><strong>ವಿಜಯಪುರ</strong>: ವಿಜಯಪುರ ನೂತನ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಕೆಲಸಕ್ಕೆ ಬಾರದ ಯಾರರೋ ಅನಗತ್ಯವಾಗಿ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಕಿಡಿಕಾರಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷ ಕಾಲಿನ ಚಪ್ಪಲಿ ಹರಿದುಕೊಂಡು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಅಲೆದು, ಬಹಳ ಪ್ರಯಾಸಪಟ್ಟು ವಿಜಯಪುರಕ್ಕೆ ವಿಮಾನ ನಿಲ್ದಾಣ ತಂದಿದ್ದೇನೆ ಎಂದರು.</p>.<p>ವಿಮಾನ ನಿಲ್ದಾಣ ಸ್ಥಾಪನೆಗಾಗಿ ಮುಖ್ಯಮಂತ್ರಿ ಜೊತೆ ಚರ್ಚಿಸಿದ ಬಳಿಕ ಅವರು ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿ ಮಾಡುವಂತೆ ಕಾರಜೊಳ ಅವರಿಗೆ ಸೂಚಿಸಿದರು. ಇದೀಗ ಕಾಮಗಾರಿ ಆರಂಭವಾಗಿದೆ. ಇದರಲ್ಲಿ ನನ್ನದೇನು ಸ್ವಾರ್ಥ ಇಲ್ಲ, ಅಲ್ಲಿ ನನ್ನದೇನು ಹೊಲ ಇಲ್ಲ ಎಂದು ಹೇಳಿದರು.</p>.<p>42 ವರ್ಷಗಳಿಂದ ರಾಜಕಾರಣ ಮಾಡುತ್ತಿದ್ದೇನೆ ಎಂದೂ ಹೇಸಿಗೆ ಕೆಲಸ ಮಾಡಿಲ್ಲ, ಈ ಜನುಮದಲ್ಲಿ ಮಾಡಲ್ಲ ಎಂದರು.</p>.<p>ಮುಖ್ಯಮಂತ್ರಿಗೆ, ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು ಎಂಬ ಕಾರಣಕ್ಕೆ ಮೈಮೇಲೆ ತೆಗೆದುಕೊಂಡು ವಿಮಾನ ನಿಲ್ದಾಣದ ಕೆಲಸ ಮಾಡಿದ್ದೇನೆ. ಆದರೂ ಕೆಲವರು ನನಗೆ ಬೈಯುತ್ತಾರೆ. ಯಾರು ನನ್ನನ್ನ ತೆಗಳುತ್ತಾರೋ ಅವರೇ ನನ್ನ ಗುರುಗಳು ಎಂದು ತಿಳಿದುಕೊಂಡಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ವಿಜಯಪುರ ನೂತನ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಕೆಲಸಕ್ಕೆ ಬಾರದ ಯಾರರೋ ಅನಗತ್ಯವಾಗಿ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಕಿಡಿಕಾರಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷ ಕಾಲಿನ ಚಪ್ಪಲಿ ಹರಿದುಕೊಂಡು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಅಲೆದು, ಬಹಳ ಪ್ರಯಾಸಪಟ್ಟು ವಿಜಯಪುರಕ್ಕೆ ವಿಮಾನ ನಿಲ್ದಾಣ ತಂದಿದ್ದೇನೆ ಎಂದರು.</p>.<p>ವಿಮಾನ ನಿಲ್ದಾಣ ಸ್ಥಾಪನೆಗಾಗಿ ಮುಖ್ಯಮಂತ್ರಿ ಜೊತೆ ಚರ್ಚಿಸಿದ ಬಳಿಕ ಅವರು ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿ ಮಾಡುವಂತೆ ಕಾರಜೊಳ ಅವರಿಗೆ ಸೂಚಿಸಿದರು. ಇದೀಗ ಕಾಮಗಾರಿ ಆರಂಭವಾಗಿದೆ. ಇದರಲ್ಲಿ ನನ್ನದೇನು ಸ್ವಾರ್ಥ ಇಲ್ಲ, ಅಲ್ಲಿ ನನ್ನದೇನು ಹೊಲ ಇಲ್ಲ ಎಂದು ಹೇಳಿದರು.</p>.<p>42 ವರ್ಷಗಳಿಂದ ರಾಜಕಾರಣ ಮಾಡುತ್ತಿದ್ದೇನೆ ಎಂದೂ ಹೇಸಿಗೆ ಕೆಲಸ ಮಾಡಿಲ್ಲ, ಈ ಜನುಮದಲ್ಲಿ ಮಾಡಲ್ಲ ಎಂದರು.</p>.<p>ಮುಖ್ಯಮಂತ್ರಿಗೆ, ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು ಎಂಬ ಕಾರಣಕ್ಕೆ ಮೈಮೇಲೆ ತೆಗೆದುಕೊಂಡು ವಿಮಾನ ನಿಲ್ದಾಣದ ಕೆಲಸ ಮಾಡಿದ್ದೇನೆ. ಆದರೂ ಕೆಲವರು ನನಗೆ ಬೈಯುತ್ತಾರೆ. ಯಾರು ನನ್ನನ್ನ ತೆಗಳುತ್ತಾರೋ ಅವರೇ ನನ್ನ ಗುರುಗಳು ಎಂದು ತಿಳಿದುಕೊಂಡಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>