ಕಾಮಗಾರಿಯನ್ನು ತ್ವರಿತವಾಗಿ, ಗುಣಮಟ್ಟದಲ್ಲಿ ನಿಗದಿತ ಅವಧಿ ಒಳಗಾಗಿ ಪೂರ್ಣಗೊಳಿಸಬೇಕು. ಕೋವಿಡ್ ಕಾರಣದಿಂದ ವಿಳಂಬವಾಗಿದ್ದ ರಾಷ್ಟ್ರೀಯ ಹೆದ್ದಾರಿ ಬಾಕಿ ಉಳಿದ ಕಾಮಗಾರಿಗಳನ್ನು ಕೂಡ ಶೀಘ್ರ ಮುಗಿಸಲು ಕ್ರಮಕೈಗೊಳ್ಳಲು ಸೂಚಿಸಿದರು.
ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಕಾರ್ಯನಿರ್ವಾಹಕ ಎಂಜಿನಿಯರ್ ಅರುಣಕುಮಾರ ಪಾಟೀಲ, ಎ.ಎಂ.ಕೊಕರೆ, ವಿವೇಕ ಮಠ, ವಿಜಯ ಜೋಶಿ, ವಿಠ್ಠಲ ನಡುವಿನಕೇರಿ, ವಿಠ್ಠಲ ಕೆರಸೂರ ಇದ್ದರು.