ಜವಳಿ ಪಾರ್ಕ್ ಸೇರಿದಂತೆ ಯಾವುದೇ ಕೈಗಾರಿಕೆಗಳನ್ನು ಸ್ಥಾಪಿಸುವುದಕ್ಕೆ ಬೇಕಾಗುವ ಭೂಮಿ, ನೀರು ಮತ್ತು ವಿದ್ಯುತ್ ಅನುಕೂಲಗಳು ರಾಯಚೂರು ಜಿಲ್ಲೆಯಲ್ಲಿವೆ. ಈ ಬಗ್ಗೆ ಸರ್ಕಾರವು ಅಂಕಿಅಂಶಗಳನ್ನು ಸಂಗ್ರಹಿಸಿಕೊಂಡು ಈ ಭಾಗದ ರೈತರು, ಹತ್ತಿ ಕಾರ್ಖಾನೆಗಳ ಮಾಲೀಕರು, ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲ ಮಾಡಿಕೊಡುವುದಕ್ಕೆ ಮುಂದಾಗಬೇಕು ಎಂದು ತಿಳಿಸಿದರು.