<p><strong>ರಾಯಚೂರು</strong>: ಏಷ್ಯಾದಲ್ಲೇ ಎರಡನೇ ಅತಿಹೆಚ್ಚು ಹತ್ತಿ ವಹಿವಾಟು ನಡೆಯುವ ರಾಯಚೂರು ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪಿಸುವುದು ಸೂಕ್ತ. ಸರ್ಕಾರವು ಜವಳಿ ಪಾರ್ಕ್ ಸ್ಥಾಪಿಸಬೇಕು ಎಂದು ಬಿಜೆಪಿ ಮುಖಂಡ ಎ.ಪಾಪಾರೆಡ್ಡಿ ಹೇಳಿದರು.</p>.<p>ನಗರದ ಗಂಜ್ ಕಲ್ಯಾಣಮಂಟಪದಲ್ಲಿ ಹತ್ತಿ ಕಾರ್ಖಾನೆಗಳ ಮಾಲೀಕರ ಒಕ್ಕೂಟದಿಂದ ಶನಿವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಒಕ್ಕೂಟದ ಪದಾಧಿಕಾರಿಗಳಿಂದ ಬೇಡಿಕೆ ಪತ್ರ ಪಡೆದು ಮಾತನಾಡಿದರು.</p>.<p>ಜವಳಿ ಪಾರ್ಕ್ ಮಂಜೂರಿಗಾಗಿ ಸಾಕಷ್ಟು ಮನವಿ ಸಲ್ಲಿಸುತ್ತಾ ಬರಲಾಗಿದೆ. ಸರ್ಕಾರವು ಈ ನಿಟ್ಟಿನಲ್ಲಿ ಸ್ಪಂದಿಸಿ ಕ್ರಮ ಕೈಗೊಳ್ಳಬೇಕು. ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ 25 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಲು ಈ ಉದ್ಯಮದಿಂದ ಸಾಧ್ಯವಾಗಲಿದೆ ಎಂದು ತಿಳಿಸಿದರು.</p>.<p>ಪಕ್ಕದ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ರೈತರು ಹತ್ತಿ ಮಾರಾಟ ಮಾಡುವುದಕ್ಕೆ ರಾಯಚೂರು ಮಾರುಕಟ್ಟೆಯನ್ನು ಅವಲಂಬಿಸಿದ್ದಾರೆ. ಹತ್ತಿ ಬೆಳೆಗಾರರಿಗೆ ಅನುಕೂಲ ಹಾಗೂ ಹತ್ತಿ ಮೌಲ್ಯವರ್ಧನೆಯನ್ನು ಇದೇ ಜಿಲ್ಲೆಯಲ್ಲಿ ಮಾಡುವುದರಿಂದ ವ್ಯಾಪಕವಾಗಿ ಜನರು ಇದರಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.</p>.<p>ಜವಳಿ ಪಾರ್ಕ್ ಸೇರಿದಂತೆ ಯಾವುದೇ ಕೈಗಾರಿಕೆಗಳನ್ನು ಸ್ಥಾಪಿಸುವುದಕ್ಕೆ ಬೇಕಾಗುವ ಭೂಮಿ, ನೀರು ಮತ್ತು ವಿದ್ಯುತ್ ಅನುಕೂಲಗಳು ರಾಯಚೂರು ಜಿಲ್ಲೆಯಲ್ಲಿವೆ. ಈ ಬಗ್ಗೆ ಸರ್ಕಾರವು ಅಂಕಿಅಂಶಗಳನ್ನು ಸಂಗ್ರಹಿಸಿಕೊಂಡು ಈ ಭಾಗದ ರೈತರು, ಹತ್ತಿ ಕಾರ್ಖಾನೆಗಳ ಮಾಲೀಕರು, ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲ ಮಾಡಿಕೊಡುವುದಕ್ಕೆ ಮುಂದಾಗಬೇಕು ಎಂದು ತಿಳಿಸಿದರು.</p>.<p>ಹತ್ತಿ ಕಾರ್ಖಾನೆಗಳ ಮಾಲೀಕರ ಒಕ್ಕೂಟದಿಂದ ಸಲ್ಲಿಸುವ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಪದಾಧಿಕಾರಿಗಳಿಗೆ ಯಾರೂ ಸಹಕಾರ ನೀಡದಿರುವುದು ಸರಿಯಲ್ಲ ಎಂದರು.</p>.<p>ರಾಯಚೂರು ಹತ್ತಿ ಕಾರ್ಖಾನೆಗಳ ಮಾಲೀಕರ ಒಕ್ಕೂಟದ ಅಧ್ಯಕ್ಷ ಲಕ್ಷ್ಮೀರೆಡ್ಡಿ ಮಾತನಾಡಿ, ಇತ್ತೀಚೆಗೆ ರಾಯಚೂರಿಗೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಿನಿ ಜವಳಿ ಪಾರ್ಕ್ವೊಂದನ್ನು ರಾಯಚೂರಿನಲ್ಲಿ ಸ್ಥಾಪಿಸುವುದಾಗಿ ಹೇಳಿರುವುದು ಸಂತಸದ ವಿಚಾರವಾಗಿದೆ ಎಂದು ತಿಳಿಸಿದರು.</p>.<p>ರಾಯಚೂರು ಹತ್ತಿ ಕಾರ್ಖಾನೆಗಳ ಮಾಲೀಕರ ಒಕ್ಕೂಟದ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಪತ್ರವನ್ನು ಬಿಜೆಪಿ ಮುಖಂಡ ಎ.ಪಾಪಾರೆಡ್ಡಿ ಅವರಿಗೆ ಸಲ್ಲಿಸಿದರು.</p>.<p>ರಾಯಚೂರು ವಾಣಿಜ್ಯೋದ್ಯಮಗಳ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಶಿ ಮಾತನಾಡಿದರು.</p>.<p>ನಗರಸಭೆ ಅಧ್ಯಕ್ಷೆ ಲಲಿತಾ ಆಂಜನೇಯ ಕಡಗೋಲ, ಉಪಾಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ರಾಯಚೂರು ವಾಣಿಜ್ಯೋದ್ಯಮಗಳ ಸಂಘದ ಉಪಾಧ್ಯಕ್ಷ ಶ್ರೀನಿಕ್ರಾಜ್ ಮೋಥಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಏಷ್ಯಾದಲ್ಲೇ ಎರಡನೇ ಅತಿಹೆಚ್ಚು ಹತ್ತಿ ವಹಿವಾಟು ನಡೆಯುವ ರಾಯಚೂರು ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪಿಸುವುದು ಸೂಕ್ತ. ಸರ್ಕಾರವು ಜವಳಿ ಪಾರ್ಕ್ ಸ್ಥಾಪಿಸಬೇಕು ಎಂದು ಬಿಜೆಪಿ ಮುಖಂಡ ಎ.ಪಾಪಾರೆಡ್ಡಿ ಹೇಳಿದರು.</p>.<p>ನಗರದ ಗಂಜ್ ಕಲ್ಯಾಣಮಂಟಪದಲ್ಲಿ ಹತ್ತಿ ಕಾರ್ಖಾನೆಗಳ ಮಾಲೀಕರ ಒಕ್ಕೂಟದಿಂದ ಶನಿವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಒಕ್ಕೂಟದ ಪದಾಧಿಕಾರಿಗಳಿಂದ ಬೇಡಿಕೆ ಪತ್ರ ಪಡೆದು ಮಾತನಾಡಿದರು.</p>.<p>ಜವಳಿ ಪಾರ್ಕ್ ಮಂಜೂರಿಗಾಗಿ ಸಾಕಷ್ಟು ಮನವಿ ಸಲ್ಲಿಸುತ್ತಾ ಬರಲಾಗಿದೆ. ಸರ್ಕಾರವು ಈ ನಿಟ್ಟಿನಲ್ಲಿ ಸ್ಪಂದಿಸಿ ಕ್ರಮ ಕೈಗೊಳ್ಳಬೇಕು. ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ 25 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಲು ಈ ಉದ್ಯಮದಿಂದ ಸಾಧ್ಯವಾಗಲಿದೆ ಎಂದು ತಿಳಿಸಿದರು.</p>.<p>ಪಕ್ಕದ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ರೈತರು ಹತ್ತಿ ಮಾರಾಟ ಮಾಡುವುದಕ್ಕೆ ರಾಯಚೂರು ಮಾರುಕಟ್ಟೆಯನ್ನು ಅವಲಂಬಿಸಿದ್ದಾರೆ. ಹತ್ತಿ ಬೆಳೆಗಾರರಿಗೆ ಅನುಕೂಲ ಹಾಗೂ ಹತ್ತಿ ಮೌಲ್ಯವರ್ಧನೆಯನ್ನು ಇದೇ ಜಿಲ್ಲೆಯಲ್ಲಿ ಮಾಡುವುದರಿಂದ ವ್ಯಾಪಕವಾಗಿ ಜನರು ಇದರಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.</p>.<p>ಜವಳಿ ಪಾರ್ಕ್ ಸೇರಿದಂತೆ ಯಾವುದೇ ಕೈಗಾರಿಕೆಗಳನ್ನು ಸ್ಥಾಪಿಸುವುದಕ್ಕೆ ಬೇಕಾಗುವ ಭೂಮಿ, ನೀರು ಮತ್ತು ವಿದ್ಯುತ್ ಅನುಕೂಲಗಳು ರಾಯಚೂರು ಜಿಲ್ಲೆಯಲ್ಲಿವೆ. ಈ ಬಗ್ಗೆ ಸರ್ಕಾರವು ಅಂಕಿಅಂಶಗಳನ್ನು ಸಂಗ್ರಹಿಸಿಕೊಂಡು ಈ ಭಾಗದ ರೈತರು, ಹತ್ತಿ ಕಾರ್ಖಾನೆಗಳ ಮಾಲೀಕರು, ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲ ಮಾಡಿಕೊಡುವುದಕ್ಕೆ ಮುಂದಾಗಬೇಕು ಎಂದು ತಿಳಿಸಿದರು.</p>.<p>ಹತ್ತಿ ಕಾರ್ಖಾನೆಗಳ ಮಾಲೀಕರ ಒಕ್ಕೂಟದಿಂದ ಸಲ್ಲಿಸುವ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಪದಾಧಿಕಾರಿಗಳಿಗೆ ಯಾರೂ ಸಹಕಾರ ನೀಡದಿರುವುದು ಸರಿಯಲ್ಲ ಎಂದರು.</p>.<p>ರಾಯಚೂರು ಹತ್ತಿ ಕಾರ್ಖಾನೆಗಳ ಮಾಲೀಕರ ಒಕ್ಕೂಟದ ಅಧ್ಯಕ್ಷ ಲಕ್ಷ್ಮೀರೆಡ್ಡಿ ಮಾತನಾಡಿ, ಇತ್ತೀಚೆಗೆ ರಾಯಚೂರಿಗೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಿನಿ ಜವಳಿ ಪಾರ್ಕ್ವೊಂದನ್ನು ರಾಯಚೂರಿನಲ್ಲಿ ಸ್ಥಾಪಿಸುವುದಾಗಿ ಹೇಳಿರುವುದು ಸಂತಸದ ವಿಚಾರವಾಗಿದೆ ಎಂದು ತಿಳಿಸಿದರು.</p>.<p>ರಾಯಚೂರು ಹತ್ತಿ ಕಾರ್ಖಾನೆಗಳ ಮಾಲೀಕರ ಒಕ್ಕೂಟದ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಪತ್ರವನ್ನು ಬಿಜೆಪಿ ಮುಖಂಡ ಎ.ಪಾಪಾರೆಡ್ಡಿ ಅವರಿಗೆ ಸಲ್ಲಿಸಿದರು.</p>.<p>ರಾಯಚೂರು ವಾಣಿಜ್ಯೋದ್ಯಮಗಳ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಶಿ ಮಾತನಾಡಿದರು.</p>.<p>ನಗರಸಭೆ ಅಧ್ಯಕ್ಷೆ ಲಲಿತಾ ಆಂಜನೇಯ ಕಡಗೋಲ, ಉಪಾಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ರಾಯಚೂರು ವಾಣಿಜ್ಯೋದ್ಯಮಗಳ ಸಂಘದ ಉಪಾಧ್ಯಕ್ಷ ಶ್ರೀನಿಕ್ರಾಜ್ ಮೋಥಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>