<p><strong>ವಿಜಯಪುರ: </strong>ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತವಾಗಿರುವುದರಿಂದ ಜಿಲ್ಲೆಯಲ್ಲಿ ಅ.20ರಂದು ಮತ್ತೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಕಳೆದ ವಾರ ಸುರಿದ ಮಳೆಯಿಂದ ಉಂಟಾದ ಪ್ರವಾಹದಿಂದ ಈಗಾಗಲೇ ಸಮಸ್ಯೆ ಎದುರಿಸಿರುವ ಜಿಲ್ಲೆಯ ಭೀಮಾ ಮತ್ತು ಡೋಣಿ ನದಿ ತೀರದ ಜನತೆ, ಅದರಲ್ಲೂ ರೈತಾಪಿ ವರ್ಗ ಮಳೆ ಮುನ್ಸೂಚನೆಯಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.</p>.<p class="Subhead"><strong>ಏರಿಯಲ್ ಸರ್ವೆ:</strong>ಮಳೆ, ಪ್ರವಾಹದಿಂದ ಜಿಲ್ಲೆಯಲ್ಲಿ ಈಗಾಗಲೇ ಆಗಿರುವ ಹಾನಿ ತಿಳಿಯಲು ಡ್ರೋಣ್ ಮೂಲಕ ಏರಿಯಲ್ ಸರ್ವೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಬೀಡು ಬಿಟ್ಟಿರುವ 16 ಸಿಬ್ಬಂದಿ ಇರುವ ಎರಡು ಎನ್ಡಿಆರ್ಎಫ್ ತಂಡಗಳು ಸಿಂದಗಿ ತಾಲ್ಲೂಕಿನ ಭೀಮಾ ನದಿ ತೀರ ಪ್ರದೇಶದಲ್ಲಿ ತಲೆದೋರಿರುವ ಪ್ರವಾಹದಲ್ಲಿ ಸಿಲುಕಿರುವ ಜನ, ಜಾನುವಾರು ರಕ್ಷಣೆಯ ಕಾರ್ಯಾಚರಣೆಯಲ್ಲಿ ನಿರತವಾಗಿದ್ದಾರೆ.</p>.<p>ಬೆಳಗಾವಿಯ ಮರಾಠಾ ಲೈಫ್ ಇನ್ಫೆಂಟರಿಯ 80 ಯೋಧರನ್ನು ಒಳಗೊಂಡ ಪ್ರವಾಹ ರೆಸ್ಕ್ಯೂ ತಂಡವೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಇವರ ಜೊತೆಗೆ 25 ಸಿಬ್ಬಂದಿಯನ್ನು ಒಳಗೊಂಡಿರುವ ಎಸ್ಡಿಆರ್ಎಫ್ ತಂಡವೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.</p>.<p>ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹ ಸೋಮವಾರ ಸ್ವಲ್ಪ ಇಳಿಕೆಯಾಗಿದ್ದರೂ ಹೊಲ, ಮನೆಗಳಿಗೆ ನುಗ್ಗಿರುವ ನೀರು ಪೂರ್ಣವಾಗಿ ಖಾಲಿಯಾಗಿಲ್ಲ.</p>.<p>ಸದ್ಯ ಜಿಲ್ಲೆಯ ಎಂಟು ಗ್ರಾಮಗಳ ವ್ಯಾಪ್ತಿಯಲ್ಲಿ ಸೋಮವಾರ 327 ಮನೆಗಳು ಜಲಾವೃತವಾಗಿವೆ. ಜಲಾವೃತವಾಗಿರುವ ಮನೆಗಳಲ್ಲಿ ಇದ್ದ 121 ಜನರನ್ನು ರಕ್ಷಣೆ ಮಾಡಲಾಗಿದೆ. 1844 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ಭೀಮಾ ನದಿ ತೀರದ ಚಡಣಚ, ಇಂಡಿ, ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಸದ್ಯ 39 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, 4431 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಹೇಳಿದರು.</p>.<p>ಅ.13ರಿಂದ 19ರ ವರೆಗೆ ಜಿಲ್ಲೆಯಲ್ಲಿ ಮಳೆ, ಪ್ರವಾಹದಿಂದ 2445 ಮನೆಗಳಿಗೆ ಹಾನಿಯಾಗಿದೆ. 28 ಗ್ರಾಮಗಳ ವ್ಯಾಪ್ತಿಯ 2543 ಮನೆಗಳು ಜಲಾವೃತವಾಗಿವೆ. 1516 ಜನರನ್ನು ರಕ್ಷಣೆ ಮಾಡಲಾಗಿದೆ. 12,217 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ಭೀಮಾ ನದಿ ಪ್ರವಾಹದಿಂದ ಇಂಡಿ ತಾಲ್ಲೂಕಿನ ಹಿಂಗಣಿ ಗ್ರಾಮದ ರೈತ ಪಂಚಾಕ್ಷರಿ ಮಲ್ಲಪ್ಪ ಗುಬ್ಯಾಡ ಅವರ ಕಬ್ಬು ಸಂಪೂರ್ಣ ನೀರಿನಲ್ಲಿ ನಿಂತು ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತವಾಗಿರುವುದರಿಂದ ಜಿಲ್ಲೆಯಲ್ಲಿ ಅ.20ರಂದು ಮತ್ತೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಕಳೆದ ವಾರ ಸುರಿದ ಮಳೆಯಿಂದ ಉಂಟಾದ ಪ್ರವಾಹದಿಂದ ಈಗಾಗಲೇ ಸಮಸ್ಯೆ ಎದುರಿಸಿರುವ ಜಿಲ್ಲೆಯ ಭೀಮಾ ಮತ್ತು ಡೋಣಿ ನದಿ ತೀರದ ಜನತೆ, ಅದರಲ್ಲೂ ರೈತಾಪಿ ವರ್ಗ ಮಳೆ ಮುನ್ಸೂಚನೆಯಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.</p>.<p class="Subhead"><strong>ಏರಿಯಲ್ ಸರ್ವೆ:</strong>ಮಳೆ, ಪ್ರವಾಹದಿಂದ ಜಿಲ್ಲೆಯಲ್ಲಿ ಈಗಾಗಲೇ ಆಗಿರುವ ಹಾನಿ ತಿಳಿಯಲು ಡ್ರೋಣ್ ಮೂಲಕ ಏರಿಯಲ್ ಸರ್ವೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಬೀಡು ಬಿಟ್ಟಿರುವ 16 ಸಿಬ್ಬಂದಿ ಇರುವ ಎರಡು ಎನ್ಡಿಆರ್ಎಫ್ ತಂಡಗಳು ಸಿಂದಗಿ ತಾಲ್ಲೂಕಿನ ಭೀಮಾ ನದಿ ತೀರ ಪ್ರದೇಶದಲ್ಲಿ ತಲೆದೋರಿರುವ ಪ್ರವಾಹದಲ್ಲಿ ಸಿಲುಕಿರುವ ಜನ, ಜಾನುವಾರು ರಕ್ಷಣೆಯ ಕಾರ್ಯಾಚರಣೆಯಲ್ಲಿ ನಿರತವಾಗಿದ್ದಾರೆ.</p>.<p>ಬೆಳಗಾವಿಯ ಮರಾಠಾ ಲೈಫ್ ಇನ್ಫೆಂಟರಿಯ 80 ಯೋಧರನ್ನು ಒಳಗೊಂಡ ಪ್ರವಾಹ ರೆಸ್ಕ್ಯೂ ತಂಡವೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಇವರ ಜೊತೆಗೆ 25 ಸಿಬ್ಬಂದಿಯನ್ನು ಒಳಗೊಂಡಿರುವ ಎಸ್ಡಿಆರ್ಎಫ್ ತಂಡವೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.</p>.<p>ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹ ಸೋಮವಾರ ಸ್ವಲ್ಪ ಇಳಿಕೆಯಾಗಿದ್ದರೂ ಹೊಲ, ಮನೆಗಳಿಗೆ ನುಗ್ಗಿರುವ ನೀರು ಪೂರ್ಣವಾಗಿ ಖಾಲಿಯಾಗಿಲ್ಲ.</p>.<p>ಸದ್ಯ ಜಿಲ್ಲೆಯ ಎಂಟು ಗ್ರಾಮಗಳ ವ್ಯಾಪ್ತಿಯಲ್ಲಿ ಸೋಮವಾರ 327 ಮನೆಗಳು ಜಲಾವೃತವಾಗಿವೆ. ಜಲಾವೃತವಾಗಿರುವ ಮನೆಗಳಲ್ಲಿ ಇದ್ದ 121 ಜನರನ್ನು ರಕ್ಷಣೆ ಮಾಡಲಾಗಿದೆ. 1844 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ಭೀಮಾ ನದಿ ತೀರದ ಚಡಣಚ, ಇಂಡಿ, ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಸದ್ಯ 39 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, 4431 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಹೇಳಿದರು.</p>.<p>ಅ.13ರಿಂದ 19ರ ವರೆಗೆ ಜಿಲ್ಲೆಯಲ್ಲಿ ಮಳೆ, ಪ್ರವಾಹದಿಂದ 2445 ಮನೆಗಳಿಗೆ ಹಾನಿಯಾಗಿದೆ. 28 ಗ್ರಾಮಗಳ ವ್ಯಾಪ್ತಿಯ 2543 ಮನೆಗಳು ಜಲಾವೃತವಾಗಿವೆ. 1516 ಜನರನ್ನು ರಕ್ಷಣೆ ಮಾಡಲಾಗಿದೆ. 12,217 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ಭೀಮಾ ನದಿ ಪ್ರವಾಹದಿಂದ ಇಂಡಿ ತಾಲ್ಲೂಕಿನ ಹಿಂಗಣಿ ಗ್ರಾಮದ ರೈತ ಪಂಚಾಕ್ಷರಿ ಮಲ್ಲಪ್ಪ ಗುಬ್ಯಾಡ ಅವರ ಕಬ್ಬು ಸಂಪೂರ್ಣ ನೀರಿನಲ್ಲಿ ನಿಂತು ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>